AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ

‘ಕಾರಣಾಂತರಗಳಿಂದ ಸುದೀಪ್ ಅವರು ಕೇವಲ ದೂರವಾಣಿ ಮೂಲಕ ಮಾತ್ರ ಈ ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದು ಅಕುಲ್​ ಬಾಲಾಜಿ ಹೇಳುತ್ತಿದ್ದಂತೆಯೇ ದೊಡ್ಮನೆಯ ಸದಸ್ಯರ ಮುಖ ಬಾಡಿಹೋಯಿತು.

ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ
ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ
TV9 Web
| Edited By: |

Updated on: Sep 04, 2021 | 1:52 PM

Share

ಕನ್ನಡ ಬಿಗ್​ ಬಾಸ್​ ಈವರೆಗೂ 8 ಸೀಸನ್​ಗಳನ್ನು ಯಶಸ್ವಿಯಾಗಿ ಮುಗಿಸಿದೆ. ಪ್ರತಿ ಸೀಸನ್​ನಲ್ಲೂ ಕಿಚ್ಚ ಸುದೀಪ್​ ಅವರು ನಿರೂಪಣೆಯ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಆ ಕಾರಣಕ್ಕಾಗಿಯೇ ವೀಕೆಂಡ್​ನಲ್ಲಿ ಬಿಗ್​ ಬಾಸ್​ ನೋಡುವವರ ಸಂಖ್ಯೆ ದೊಡ್ಡದಿದೆ. ವೀಕ್ಷಕರಿಗೆ ಮಾತ್ರವಲ್ಲದೆ, ಬಿಗ್​ ಬಾಸ್​ ಸ್ಪರ್ಧಿಗಳಿಗೂ ಕೂಡ ಸುದೀಪ್​ ಇದ್ದರೆ ಉತ್ಸಾಹ ಗರಿಗೆದರುತ್ತದೆ. ಒಂದು ವೇಳೆ ಈ ಶೋನಲ್ಲಿ ಸುದೀಪ್​ ಇಲ್ಲದಿದ್ದರೆ ಪರಿಸ್ಥಿತಿ ಹೇಗಿರುತ್ತದೆ? ಬಿಗ್​ ಬಾಸ್​ ಮಿನಿ ಸೀಸನ್​ನ ವೇದಿಕೆಯಲ್ಲಿ ಇಂಥದ್ದೊಂದು ಪ್ರಶ್ನೆ ಹುಟ್ಟಿಕೊಂಡಿತು.

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಮುಗಿದ ಕೂಡಲೇ ಬಿಗ್​ ಬಾಸ್​ ಮಿನಿ ಸೀಸನ್​ ಆರಂಭ ಆಗಿತ್ತು. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳ 15 ಸೆಲೆಬ್ರಿಟಿಗಳಿಗೆ ದೊಡ್ಮನೆ ಪ್ರವೇಶಿಸುವ ಅವಕಾಶ ಸಿಕ್ಕಿತ್ತು. 6 ದಿನಗಳ ಕಾಲ ಅವರೆಲ್ಲ ಬಿಗ್​ ಬಾಸ್​ ಮನೆಯಲ್ಲಿ ಕಾಲ ಕಳೆದಿದ್ದಾರೆ. ಅದರ ಫಿನಾಲೆ ಶೋಗೆ ಸುದೀಪ್ ಅವರು ನಿರೂಪಣೆ ಮಾಡುತ್ತಾರೆ ಎಂದು ಮೊದಲೇ ತಿಳಿಸಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಒಂದು ಚಮಕ್​ ನೀಡಲಾಯಿತು.

‘ಕಾರಣಾಂತರಗಳಿಂದ ಸುದೀಪ್ ಅವರು ಕೇವಲ ದೂರವಾಣಿ ಮೂಲಕ ಮಾತ್ರ ಈ ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದು ಅಕುಲ್​ ಬಾಲಾಜಿ ಹೇಳುತ್ತಿದ್ದಂತೆಯೇ ದೊಡ್ಮನೆಯ ಸದಸ್ಯರ ಮುಖ ಬಾಡಿಹೋಯಿತು. ಫಿನಾಲೆ ವೇದಿಕೆಯಲ್ಲಿ ಸುದೀಪ್​ ಅವರನ್ನು ನೋಡಬೇಕು, ಅವರೊಂದಿಗೆ ಮಾತನಾಡಬೇಕು ಎಂದುಕೊಂಡಿದ್ದ ಎಲ್ಲ ಸ್ಪರ್ಧಿಗಳಿಗೂ ತೀವ್ರ ನಿರಾಸೆ ಆಯಿತು. ಆದರೆ ಅದು ಸ್ವಲ್ಪ ಹೊತ್ತು ಮಾತ್ರ. ಸುಮ್ಮನೆ ಪ್ರ್ಯಾಂಕ್​ ಮಾಡಲು ಹೀಗೆ ಹೇಳಲಾಗಿತ್ತು ಎಂಬುದನ್ನು ನಂತರ ತಿಳಿಸಲಾಯಿತು. ಆಗ ಬಿಗ್​ ಬಾಸ್​ ಸ್ಪರ್ಧಿಗಳ ಮುಖ ಅರಳಿತು.

ಬಿಗ್​ ಬಾಸ್​ ಮಿನಿ ಸೀಸನ್​ನ ಫಿನಾಲೆ ಎಪಿಸೋಡ್​ಗಳು ಶನಿವಾರ (ಸೆಪ್ಟೆಂಬರ್​ 4) ಮತ್ತು ಭಾನುವಾರ (ಸೆಪ್ಟೆಂಬರ್​ 5) ಮಧ್ಯಾಹ್ನ 3 ಗಂಟೆಗೆ ಪ್ರಸಾರ ಆಗುತ್ತಿವೆ. ಕಿರಣ್​ ರಾಜ್​, ಕೌಸ್ತುಭ, ಗಗನ್​ ಚಿನ್ನಪ್ಪ, ವೈಷ್ಣವಿ, ನಿರಂಜನ್ ದೇಶಪಾಂಡೆ, ಅಕುಲ್​ ಬಾಲಾಜಿ, ರಮೋಲಾ ಸೇರಿದಂತೆ ಅನೇಕರು ಈ ಮಿನಿ ಸೀಸನ್​ನಲ್ಲಿ ಪಾಲ್ಗೊಂಡಿದ್ದಾರೆ. ಅದ್ದೂರಿ ವೇದಿಕೆಯಲ್ಲಿ ಫಿನಾಲೆ ಕಾರ್ಯಕ್ರಮ ನಡೆದಿದೆ. ಸೀಸನ್​ 8ರ ಸ್ಪರ್ಧಿಗಳು ಈ ಸಂಚಿಕೆಯಲ್ಲಿ ಡ್ಯಾನ್ಸ್​, ಹಾಡಿನ ಮೂಲಕ ಭರ್ಜರಿ ಮನರಂಜನೆ ನೀಡಿದ್ದಾರೆ.

ಇದನ್ನೂ ಓದಿ:

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

ಕಿಚ್ಚ ಸುದೀಪ್​ ಜನ್ಮದಿನ: ಬರಬೇಡಿ ಎಂದರೂ ಮನೆ ಬಾಗಿಲಿಗೆ ಬಂದು ಕಾದ ಫ್ಯಾನ್ಸ್​

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ