Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್

ಪ್ರಶಾಂತ್ ಸಂಬರ್ಗಿ ಅವರನ್ನು ಕನ್ನಡ ಪರ ಹೋರಾಟಗಾರರಿಗೆ ಇತ್ತೀಚೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಈ ವಿಚಾರಕ್ಕೆ ಪ್ರಶಾಂತ್ ಸಂಬರ್ಗಿ ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 05, 2022 | 9:38 PM

ತಪ್ಪು ಮಾಡಿದ ಸ್ಪರ್ಧಿಗಳಿಗೆ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಸಿಟ್ಟಲ್ಲಿ ಖಡಕ್ ಎಚ್ಚರಿಕೆ ನೀಡೋದು ವೀಕ್ಷಕರಿಗೆ ಇಷ್ಟ ಆಗುತ್ತದೆ. ಈ ವಾರ ಕಿಚ್ಚ ಸುದೀಪ್ ಅವರು ಅನುಪಮಾ ಗೌಡ ಹಾಗೂ ಪ್ರಶಾಂತ್ ಸಂಬರ್ಗಿಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಬ್ಬರಿಗೂ ಅವರು ಹಲವು ವಿಚಾರಕ್ಕೆ ಪಾಠ ಮಾಡಿದ್ದಾರೆ. ಶನಿವಾರದ (ನವೆಂಬರ್ 5) ಎಪಿಸೋಡ್​ನಲ್ಲಿ ಸುದೀಪ್ ಖಡಕ್ ಎಚ್ಚರಿಕೆ ಹೈಲೈಟ್ ಆಗಿದೆ.

ಪ್ರಶಾಂತ್​ಗೆ ಪಾಠ

ಪ್ರಶಾಂತ್ ಸಂಬರ್ಗಿ ಅವರುಇತ್ತೀಚೆಗೆ ಕನ್ನಡ ಪರ ಹೋರಾಟಗಾರರಿಗೆ  ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಈ ವಿಚಾರಕ್ಕೆ ಪ್ರಶಾಂತ್ ಸಂಬರ್ಗಿ ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ‘ಕೋಪದಲ್ಲಿ ಒಂದು ಮಾತು ಬರುತ್ತೆ, ಹೋಗುತ್ತೆ. ಆದರೆ, ಅದು ವೀಕ್ಷಕರ ಭಾವನೆಗೆ ನೋವಾಗಬಾರದು. ನೀವು ಮನೆಯ ಒಳಗಿನ ವಿಚಾರ ಚರ್ಚೆ ಮಾಡಿ ತಪ್ಪಿಲ್ಲ. ಆದರೆ, ಹೊರಗಿನ ವಿಚಾರ ಎಳೆದು ತರಬೇಡಿ. ಮನೆ ಹೊರಗೆ ನಿಮ್ಮ ಮಧ್ಯೆ ಏನೇ ಇರಬಹುದು. ಆದರೆ, ಇದನ್ನು ಒಳಗೆ ಚರ್ಚಿಸಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ ಸುದೀಪ್.

ಅನುಪಮಾ ಗೌಡ ಸುದೀಪ್ ಪಾಠ

ಅನುಪಮಾ ಗೌಡ ಅವರು ಈ ವಾರ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಅವರು ಫೇವರಿಸಂ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ಅನುಪಮಾ ಗೌಡ ವಿರೋಧ ವ್ಯಕ್ತಪಡಿಸಿದ್ದರು. ನನ್ನಿಂದ ಆ ರೀತಿ ಆಗಿಲ್ಲ ಎಂದು ಅನುಪಮಾ ಗೌಡ ಹೇಳುತ್ತಲೇ ಬಂದಿದ್ದರು. ಇನ್ನು, ಬಿಗ್ ಬಾಸ್ ಮನೆಯಲ್ಲಿ ಈ ವಾರದ ಟಾಸ್ಕ್​​ನಲ್ಲಿ ಅನುಪಮಾ ತಮ್ಮದೇ ರೂಲ್ಸ್ ಮಾಡಿದ್ದಾರೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಸುದೀಪ್ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಮೊದಲು ನೀವು ಅಪೀಲ್ ಮಾಡಿ ಅಂದಾಗ ಮಾಡಿಲ್ಲ. ಅರುಣ್ ಅವರು ಕೇಳಿದಾಗ ನೀವು ಅಪೀಲ್ ಮಾಡಿದಿರಿ. ಒಬ್ಬರಿಗೊಂದು ಮಾಡಿದ್ರಿ, ಮತ್ತೊಬ್ಬರಿಗೊಂದು ಮಾಡಿದ್ರಿ ಎಂದು ಅನಿಸಿಯೇ ಅನಿಸುತ್ತದೆ’ ಎಂದು ಸುದೀಪ್ ಹೇಳಿದರು. ಅನುಪಮಾಗೆ ತಾವು ಮಾಡಿದ್ದು ತಪ್ಪು ಎನ್ನುವ ವಿಚಾರ ಗೊತ್ತಾಗಿದೆ.

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ