AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್

ಪ್ರಶಾಂತ್ ಸಂಬರ್ಗಿ ಅವರನ್ನು ಕನ್ನಡ ಪರ ಹೋರಾಟಗಾರರಿಗೆ ಇತ್ತೀಚೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಈ ವಿಚಾರಕ್ಕೆ ಪ್ರಶಾಂತ್ ಸಂಬರ್ಗಿ ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್
TV9 Web
| Edited By: |

Updated on: Nov 05, 2022 | 9:38 PM

Share

ತಪ್ಪು ಮಾಡಿದ ಸ್ಪರ್ಧಿಗಳಿಗೆ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಸಿಟ್ಟಲ್ಲಿ ಖಡಕ್ ಎಚ್ಚರಿಕೆ ನೀಡೋದು ವೀಕ್ಷಕರಿಗೆ ಇಷ್ಟ ಆಗುತ್ತದೆ. ಈ ವಾರ ಕಿಚ್ಚ ಸುದೀಪ್ ಅವರು ಅನುಪಮಾ ಗೌಡ ಹಾಗೂ ಪ್ರಶಾಂತ್ ಸಂಬರ್ಗಿಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಬ್ಬರಿಗೂ ಅವರು ಹಲವು ವಿಚಾರಕ್ಕೆ ಪಾಠ ಮಾಡಿದ್ದಾರೆ. ಶನಿವಾರದ (ನವೆಂಬರ್ 5) ಎಪಿಸೋಡ್​ನಲ್ಲಿ ಸುದೀಪ್ ಖಡಕ್ ಎಚ್ಚರಿಕೆ ಹೈಲೈಟ್ ಆಗಿದೆ.

ಪ್ರಶಾಂತ್​ಗೆ ಪಾಠ

ಪ್ರಶಾಂತ್ ಸಂಬರ್ಗಿ ಅವರುಇತ್ತೀಚೆಗೆ ಕನ್ನಡ ಪರ ಹೋರಾಟಗಾರರಿಗೆ  ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಈ ವಿಚಾರಕ್ಕೆ ಪ್ರಶಾಂತ್ ಸಂಬರ್ಗಿ ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ‘ಕೋಪದಲ್ಲಿ ಒಂದು ಮಾತು ಬರುತ್ತೆ, ಹೋಗುತ್ತೆ. ಆದರೆ, ಅದು ವೀಕ್ಷಕರ ಭಾವನೆಗೆ ನೋವಾಗಬಾರದು. ನೀವು ಮನೆಯ ಒಳಗಿನ ವಿಚಾರ ಚರ್ಚೆ ಮಾಡಿ ತಪ್ಪಿಲ್ಲ. ಆದರೆ, ಹೊರಗಿನ ವಿಚಾರ ಎಳೆದು ತರಬೇಡಿ. ಮನೆ ಹೊರಗೆ ನಿಮ್ಮ ಮಧ್ಯೆ ಏನೇ ಇರಬಹುದು. ಆದರೆ, ಇದನ್ನು ಒಳಗೆ ಚರ್ಚಿಸಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ ಸುದೀಪ್.

ಅನುಪಮಾ ಗೌಡ ಸುದೀಪ್ ಪಾಠ

ಅನುಪಮಾ ಗೌಡ ಅವರು ಈ ವಾರ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಅವರು ಫೇವರಿಸಂ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ಅನುಪಮಾ ಗೌಡ ವಿರೋಧ ವ್ಯಕ್ತಪಡಿಸಿದ್ದರು. ನನ್ನಿಂದ ಆ ರೀತಿ ಆಗಿಲ್ಲ ಎಂದು ಅನುಪಮಾ ಗೌಡ ಹೇಳುತ್ತಲೇ ಬಂದಿದ್ದರು. ಇನ್ನು, ಬಿಗ್ ಬಾಸ್ ಮನೆಯಲ್ಲಿ ಈ ವಾರದ ಟಾಸ್ಕ್​​ನಲ್ಲಿ ಅನುಪಮಾ ತಮ್ಮದೇ ರೂಲ್ಸ್ ಮಾಡಿದ್ದಾರೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಸುದೀಪ್ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಮೊದಲು ನೀವು ಅಪೀಲ್ ಮಾಡಿ ಅಂದಾಗ ಮಾಡಿಲ್ಲ. ಅರುಣ್ ಅವರು ಕೇಳಿದಾಗ ನೀವು ಅಪೀಲ್ ಮಾಡಿದಿರಿ. ಒಬ್ಬರಿಗೊಂದು ಮಾಡಿದ್ರಿ, ಮತ್ತೊಬ್ಬರಿಗೊಂದು ಮಾಡಿದ್ರಿ ಎಂದು ಅನಿಸಿಯೇ ಅನಿಸುತ್ತದೆ’ ಎಂದು ಸುದೀಪ್ ಹೇಳಿದರು. ಅನುಪಮಾಗೆ ತಾವು ಮಾಡಿದ್ದು ತಪ್ಪು ಎನ್ನುವ ವಿಚಾರ ಗೊತ್ತಾಗಿದೆ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ