‘ಈ ಮನಸ್ಥಿತಿಯಿಂದಲೇ ಮಹಿಳೆಯರು ಬಿಗ್ ಬಾಸ್ ಗೆಲ್ತಿಲ್ಲ’; ನೇರವಾಗಿ ಕ್ಲಾಸ್ ತೆಗೆದುಕೊಂಡ ಸುದೀಪ್

ಈ ವಾರ ಒಬ್ಬರು ಕ್ಯಾಪ್ಟನ್​ನ ಆಯ್ಕೆ ಮಾಡಬೇಕಿತ್ತು. ಈ ವೇಳೆ ಎಲ್ಲರೂ ಕೆಲವೇ ನಿಮಿಷಗಳಲ್ಲಿ ಕಾರ್ತಿಕ್ ಹಾಗೂ ವಿನಯ್ ಅವರನ್ನು ಆಯ್ಕೆ ಮಾಡಿದರು. ಈ ವಿಚಾರದಲ್ಲಿ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.

‘ಈ ಮನಸ್ಥಿತಿಯಿಂದಲೇ ಮಹಿಳೆಯರು ಬಿಗ್ ಬಾಸ್ ಗೆಲ್ತಿಲ್ಲ’; ನೇರವಾಗಿ ಕ್ಲಾಸ್ ತೆಗೆದುಕೊಂಡ ಸುದೀಪ್
ಸುದೀಪ್
Follow us
|

Updated on:Oct 22, 2023 | 12:26 PM

ಕನ್ನಡ ಬಿಗ್ ಬಾಸ್ ಈಗಾಗಲೇ ಒಂಭತ್ತು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈಗ 10ನೇ ಸೀಸನ್ ನಡೆಯುತ್ತಿದೆ. ಕಳೆದ ಒಂಭತ್ತು ವರ್ಷಗಳಲ್ಲಿ ಬಿಗ್ ಬಾಸ್​ನಲ್ಲಿ (Bigg Boss) ಗೆದ್ದಿದ್ದು ಕೇವಲ ಒಂದೇ ಒಂದು ಮಹಿಳೆ. ಅದು ಶ್ರುತಿ ಮಾತ್ರ. ಉಳಿದ ಎಲ್ಲಾ ವಿನ್ನರ್​ಗಳು ಪುರುಷರೇ. ಈ ವಿಚಾರ ಪ್ರತಿ ವರ್ಷ ಚರ್ಚೆಗೆ ಬರುತ್ತದೆ. ಮಹಿಳೆಯರು ಏಕೆ ವಿನ್ ಆಗೋಕೆ ಆಗಲ್ಲ ಎಂದು ಅನೇಕರು ಪ್ರಶ್ನೆ ಮಾಡುತ್ತಾರೆ. ಸುದೀಪ್ ಇದಕ್ಕೆ ಉತ್ತರ ಕಂಡು ಹಿಡಿದಿದ್ದಾರೆ. ಮನೆಯಲ್ಲಿರುವ ಮಹಿಳೆಯರು ನಡೆದುಕೊಂಡ ರೀತಿಯನ್ನು ಸುದೀಪ್ (Sudeep) ಖಂಡಿಸಿದ್ದಾರೆ.

ಈ ವಾರ ಒಬ್ಬರು ಕ್ಯಾಪ್ಟನ್​ನ ಆಯ್ಕೆ ಮಾಡಬೇಕಿತ್ತು. ಈ ವೇಳೆ ಎಲ್ಲರೂ ಕೆಲವೇ ನಿಮಿಷಗಳಲ್ಲಿ ಕಾರ್ತಿಕ್ ಹಾಗೂ ವಿನಯ್ ಅವರನ್ನು ಆಯ್ಕೆ ಮಾಡಿದರು. ಇದು ಸುದೀಪ್ ಕೋಪಕ್ಕೆ ಕಾರಣ ಆಗಿದೆ. ಯಾವುದೇ ಮಹಿಳಾ ಸ್ಪರ್ಧಿ ನಾನು ಕ್ಯಾಪ್ಟನ್ ಆಗುತ್ತೇನೆ ಎಂದು ಧ್ವನಿ ಎತ್ತಲೇ ಇಲ್ಲ. ಈ ವಿಚಾರದಲ್ಲಿ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್ ಮಾಡೋಕೆ ಇಬ್ಬರ ಹೆಸರು ಬೇಕು ಎಂದರು ಸುದೀಪ್. ಆಗ ಎಲ್ಲರೂ ಸುಮಾರು ಐದು ನಿಮಿಷಗಳ ಕಾಲ ಚರ್ಚೆ ಮಾಡಿ ಇಬ್ಬರ ಹೆಸರನ್ನು ಆಯ್ಕೆ ಮಾಡಿದರು. ನಾಮಿನೇಷನ್ ವಿಚಾರ ಬಂದಾಗ ಐದು ನಿಮಿಷ ತೆಗೆದುಕೊಂಡವರು, ಕ್ಯಾಪ್ಟನ್ ಆಯ್ಕೆಯಲ್ಲಿ ಕೆಲವೇ ಸೆಕೆಂಡ್ ತೆಗೆದುಕೊಂಡಿದ್ದು ಏಕೆ ಎಂದು ಸುದೀಪ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಬಿಗ್​ಬಾಸ್ ಮನೆ ಮಂದಿಗೆ ತರಾಟೆ: ಹಿಂದೆಂದೂ ಬಳಸದ ಅಧಿಕಾರ ಬಳಸಿದ ಸುದೀಪ್

‘ನೀವೆಲ್ಲರೂ ಆಡೋಕೆ ಎಂದೇ ಬಿಗ್ ಬಾಸ್ ಮನೆಗೆ ಹೋಗಿದ್ದೀರಿ. ಹಾಗಿದ್ದರೂ ಬೇರೆಯವರಿಗೆ ಆಟವನ್ನು ಬಿಟ್ಟುಕೊಡೋದು ಏಕೆ? ಈ ರೀತಿಯ ನಡೆ ಸರಿ ಅಲ್ಲ. ಇಷ್ಟು ವರ್ಷದಲ್ಲಿ ಒಬ್ಬರೇ ಮಹಿಳಾ ಸ್ಪರ್ಧಿ ವಿನ್ ಆಗಿರೋದು. ಅದು ಶ್ರುತಿ ಅವರು. ನಿಮ್ಮ ಈ ಮನಸ್ಥಿತಿಯಿಂದಲೇ ಮಹಿಳೆಯರು ಬಿಗ್ ಬಾಸ್ ಗೆಲ್ಲುತ್ತಿಲ್ಲ’ ಎಂದು ಸುದೀಪ್ ಅವರು ಕ್ಲಾಸ್ ತೆಗೆದುಕೊಂಡರು. ಬಳಿಕ ಎಲ್ಲರೂ ತಪ್ಪನ್ನು ತಿದ್ದುಕೊಳ್ಳುವುದಾಗಿ ಹೇಳಿದ್ದಾರೆ. ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Sun, 22 October 23

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು