AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಎದುರು ಬೆಣ್ಣೆ ಹಚ್ಚಿ ಮಾತನಾಡಿದ ಗೌತಮಿ; ಸರಿಯಾಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ

ಬಿಗ್ ಬಾಸ್ ಮನೆಯಲ್ಲಿ ಶನಿವಾರದ ಎಪಿಸೋಡ್​ನಲ್ಲಿ ಎಲ್ಲರಿಗೂ ಕ್ಲಾಸ್ ತೆಗೆದುಕೊಳ್ಳಲಾಗುತ್ತದೆ. ಭಾನುವಾರ ಫನ್ ಇರುತ್ತದೆ. ಆ ದಿನ ಸುದೀಪ್ ಅವರು ಯಾರಿಗೂ ಬೈಯ್ಯೋಕೆ ಹೋಗಲ್ಲ. ಆದಾಗ್ಯೂ ಅವರು ಗೌತಮಿ ಅವರಿಗೆ ಪಾಠ ಮಾಡುವ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಯನ್ನು ಸ್ವತಃ ಅವರೇ ತಂದುಕೊಂಡಿದ್ದಾರೆ. ಇದಕ್ಕೆ ಸುದೀಪ್ ಬುದ್ಧಿವಾದ ಹೇಳಿದ್ದಾರೆ.

ಸುದೀಪ್ ಎದುರು ಬೆಣ್ಣೆ ಹಚ್ಚಿ ಮಾತನಾಡಿದ ಗೌತಮಿ; ಸರಿಯಾಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ
ಗೌತಮಿ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 16, 2024 | 7:34 AM

Share

ಬಿಗ್ ಬಾಸ್ ಮನೆಯಲ್ಲಿ ಸುದೀಪ್ ಅವರು ಬೆಣ್ಣೆ ಹಚ್ಚಿ ಮಾತನಾಡಬೇಡಿ ಎಂದು ಸಾಕಷ್ಟು ಬಾರಿ ಕೇಳಿಕೊಂಡಿದ್ದು ಇದೆ. ಆದರೆ, ಇದನ್ನು ಮನೆಯ ಯಾರೊಬ್ಬರೂ ಕೇಳುತ್ತಿಲ್ಲ. ಪದೇ ಪದೇ ಇದೇ ತಪ್ಪನ್ನು ಮಾಡುತ್ತಿದ್ದಾರೆ. ಈಗ ಈ ವಿಚಾರ ಚರ್ಚೆಗೆ ಬಂದಿದೆ. ಸುದೀಪ್ ಎದುರೇ ಪಾಲಿಶ್ ಆಗಿ ಮಾತನಾಡಲು ಹೋದ ಗೌತಮಿ ಅವರು ಸರಿಯಾಗಿ ಪಾಠ ಹೇಳಿಸಿಕೊಂಡಿದ್ದಾರೆ. ಭಾನುವಾರದ ಎಪಿಸೋಡ್​ನಲ್ಲಿ ಅದು ಹೈಲೈಟ್ ಆಗಿದೆ.

ಬಿಗ್ ಬಾಸ್ ಮನೆಯಲ್ಲಿ ಶನಿವಾರದ ಎಪಿಸೋಡ್​ನಲ್ಲಿ ಎಲ್ಲರಿಗೂ ಕ್ಲಾಸ್ ತೆಗೆದುಕೊಳ್ಳಲಾಗುತ್ತದೆ. ಭಾನುವಾರ ಫನ್ ಇರುತ್ತದೆ. ಆ ದಿನ ಸುದೀಪ್ ಅವರು ಯಾರಿಗೂ ಬೈಯ್ಯೋಕೆ ಹೋಗಲ್ಲ. ಆದಾಗ್ಯೂ ಅವರು ಗೌತಮಿ ಅವರಿಗೆ ಪಾಠ ಮಾಡುವ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಯನ್ನು ಸ್ವತಃ ಅವರೇ ತಂದುಕೊಂಡಿದ್ದಾರೆ. ಇದಕ್ಕೆ ಸುದೀಪ್ ಬುದ್ಧಿವಾದ ಹೇಳಿದ್ದಾರೆ.

ಬಾಕ್ಸಿಂಗ್ ಸೆಟ್​ನ ನಿರ್ಮಿಸಲಾಗಿತ್ತು. ಯಾರದ್ದಾದರೂ ವಿರುದ್ಧ ಕೋಪ ತೀರಿಸಿಕೊಳ್ಳಬೇಕು ಎಂದರೆ ಅವರ ಫೋಟೋನ ಅಂಟಿಸಿ, ಅದಕ್ಕೆ ಬಾಕ್ಸಿಂಗ್ ಗ್ಲೌಸ್​ನಿಂದ ಗುದ್ದಬೇಕಿತ್ತು. ಈ ಕೆಲಸವನ್ನು ಮನೆಯವರು ಮಾಡಿದ್ದಾರೆ. ಆದರೆ, ಗೌತಮಿ ಮಾತ್ರ ಇದಕ್ಕೆ ರಾಗ ಎಳೆದರು. ‘ನನಗೆ ಯಾರ ಮೇಲೂ ಕೋಪ ಇಲ್ಲ. ಆದರೂ..’ ಎಂದು ಹೇಳಲು ಹೋದರು. ಇದಕ್ಕೆ ಸುದೀಪ್ ಕ್ಲಾಸ್ ತೆಗೆದುಕೊಂಡರು. ಜೊತೆಗೆ ಗೌತಮಿಗೆ ಪಂಚ್ ಮಾಡುವ ಅವಕಾಶ ನೀಡಲೇ ಇಲ್ಲ.

ಇದನ್ನೂ ಓದಿ: ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

‘ಟಾಸ್ಕ್ ಕೊಟ್ಟಾಗ ಮನೆಯ ಎಲ್ಲ ಸ್ಪರ್ಧಿಗಳು ಮಾಡಿದರು. ಆದರೂ ಎಂಬ ಪದ ಬಂದಾಗ, ಅದು ಸುಗರ್ ಕೋಟೆಡ್ ಆಗುತ್ತದೆ. ಈ ಟಾಸ್ಕ್ ಕೊಟ್ಟ ಅವರು ಮೂರ್ಖರು. ನಿಮ್ಮ ಪ್ರಕಾರ ಯಾರು ಕಳಪೆ ಎಂದು ಕೇಳ್ತೀನಿ. ಇಲ್ಲಿ ಯಾರೂ ಕಳಪೆ ಇಲ್ಲ ಆದರೂ ಹೇಳ್ತೀನಿ ಎಂದೆಲ್ಲ ಹೇಳೋಕೆ ಹೋದಾಗ ಅದು ಪಾಲಿಶ್​ ಸಾಲುಗಳಾಗುತ್ತದೆ. ಆ ಸಾಲುಗಳು ಅಗತ್ಯವಿಲ್ಲ’ ಎಂದಿದ್ದಾರೆ ಅವರು. ಆ ಬಳಿಕ ಪಂಚ್ ಮಾಡಲು ಸುದೀಪ್ ಅವರು ಅವಕಾಶವನ್ನು ಕೊಡಲೇ ಇಲ್ಲ. ಆ ಬಳಿಕ ಗೌತಮಿ ಅವರು ಕಣ್ಣೀರು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು