Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಎದುರು ಬೆಣ್ಣೆ ಹಚ್ಚಿ ಮಾತನಾಡಿದ ಗೌತಮಿ; ಸರಿಯಾಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ

ಬಿಗ್ ಬಾಸ್ ಮನೆಯಲ್ಲಿ ಶನಿವಾರದ ಎಪಿಸೋಡ್​ನಲ್ಲಿ ಎಲ್ಲರಿಗೂ ಕ್ಲಾಸ್ ತೆಗೆದುಕೊಳ್ಳಲಾಗುತ್ತದೆ. ಭಾನುವಾರ ಫನ್ ಇರುತ್ತದೆ. ಆ ದಿನ ಸುದೀಪ್ ಅವರು ಯಾರಿಗೂ ಬೈಯ್ಯೋಕೆ ಹೋಗಲ್ಲ. ಆದಾಗ್ಯೂ ಅವರು ಗೌತಮಿ ಅವರಿಗೆ ಪಾಠ ಮಾಡುವ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಯನ್ನು ಸ್ವತಃ ಅವರೇ ತಂದುಕೊಂಡಿದ್ದಾರೆ. ಇದಕ್ಕೆ ಸುದೀಪ್ ಬುದ್ಧಿವಾದ ಹೇಳಿದ್ದಾರೆ.

ಸುದೀಪ್ ಎದುರು ಬೆಣ್ಣೆ ಹಚ್ಚಿ ಮಾತನಾಡಿದ ಗೌತಮಿ; ಸರಿಯಾಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ
ಗೌತಮಿ-ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Dec 16, 2024 | 7:34 AM

ಬಿಗ್ ಬಾಸ್ ಮನೆಯಲ್ಲಿ ಸುದೀಪ್ ಅವರು ಬೆಣ್ಣೆ ಹಚ್ಚಿ ಮಾತನಾಡಬೇಡಿ ಎಂದು ಸಾಕಷ್ಟು ಬಾರಿ ಕೇಳಿಕೊಂಡಿದ್ದು ಇದೆ. ಆದರೆ, ಇದನ್ನು ಮನೆಯ ಯಾರೊಬ್ಬರೂ ಕೇಳುತ್ತಿಲ್ಲ. ಪದೇ ಪದೇ ಇದೇ ತಪ್ಪನ್ನು ಮಾಡುತ್ತಿದ್ದಾರೆ. ಈಗ ಈ ವಿಚಾರ ಚರ್ಚೆಗೆ ಬಂದಿದೆ. ಸುದೀಪ್ ಎದುರೇ ಪಾಲಿಶ್ ಆಗಿ ಮಾತನಾಡಲು ಹೋದ ಗೌತಮಿ ಅವರು ಸರಿಯಾಗಿ ಪಾಠ ಹೇಳಿಸಿಕೊಂಡಿದ್ದಾರೆ. ಭಾನುವಾರದ ಎಪಿಸೋಡ್​ನಲ್ಲಿ ಅದು ಹೈಲೈಟ್ ಆಗಿದೆ.

ಬಿಗ್ ಬಾಸ್ ಮನೆಯಲ್ಲಿ ಶನಿವಾರದ ಎಪಿಸೋಡ್​ನಲ್ಲಿ ಎಲ್ಲರಿಗೂ ಕ್ಲಾಸ್ ತೆಗೆದುಕೊಳ್ಳಲಾಗುತ್ತದೆ. ಭಾನುವಾರ ಫನ್ ಇರುತ್ತದೆ. ಆ ದಿನ ಸುದೀಪ್ ಅವರು ಯಾರಿಗೂ ಬೈಯ್ಯೋಕೆ ಹೋಗಲ್ಲ. ಆದಾಗ್ಯೂ ಅವರು ಗೌತಮಿ ಅವರಿಗೆ ಪಾಠ ಮಾಡುವ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಯನ್ನು ಸ್ವತಃ ಅವರೇ ತಂದುಕೊಂಡಿದ್ದಾರೆ. ಇದಕ್ಕೆ ಸುದೀಪ್ ಬುದ್ಧಿವಾದ ಹೇಳಿದ್ದಾರೆ.

ಬಾಕ್ಸಿಂಗ್ ಸೆಟ್​ನ ನಿರ್ಮಿಸಲಾಗಿತ್ತು. ಯಾರದ್ದಾದರೂ ವಿರುದ್ಧ ಕೋಪ ತೀರಿಸಿಕೊಳ್ಳಬೇಕು ಎಂದರೆ ಅವರ ಫೋಟೋನ ಅಂಟಿಸಿ, ಅದಕ್ಕೆ ಬಾಕ್ಸಿಂಗ್ ಗ್ಲೌಸ್​ನಿಂದ ಗುದ್ದಬೇಕಿತ್ತು. ಈ ಕೆಲಸವನ್ನು ಮನೆಯವರು ಮಾಡಿದ್ದಾರೆ. ಆದರೆ, ಗೌತಮಿ ಮಾತ್ರ ಇದಕ್ಕೆ ರಾಗ ಎಳೆದರು. ‘ನನಗೆ ಯಾರ ಮೇಲೂ ಕೋಪ ಇಲ್ಲ. ಆದರೂ..’ ಎಂದು ಹೇಳಲು ಹೋದರು. ಇದಕ್ಕೆ ಸುದೀಪ್ ಕ್ಲಾಸ್ ತೆಗೆದುಕೊಂಡರು. ಜೊತೆಗೆ ಗೌತಮಿಗೆ ಪಂಚ್ ಮಾಡುವ ಅವಕಾಶ ನೀಡಲೇ ಇಲ್ಲ.

ಇದನ್ನೂ ಓದಿ: ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

‘ಟಾಸ್ಕ್ ಕೊಟ್ಟಾಗ ಮನೆಯ ಎಲ್ಲ ಸ್ಪರ್ಧಿಗಳು ಮಾಡಿದರು. ಆದರೂ ಎಂಬ ಪದ ಬಂದಾಗ, ಅದು ಸುಗರ್ ಕೋಟೆಡ್ ಆಗುತ್ತದೆ. ಈ ಟಾಸ್ಕ್ ಕೊಟ್ಟ ಅವರು ಮೂರ್ಖರು. ನಿಮ್ಮ ಪ್ರಕಾರ ಯಾರು ಕಳಪೆ ಎಂದು ಕೇಳ್ತೀನಿ. ಇಲ್ಲಿ ಯಾರೂ ಕಳಪೆ ಇಲ್ಲ ಆದರೂ ಹೇಳ್ತೀನಿ ಎಂದೆಲ್ಲ ಹೇಳೋಕೆ ಹೋದಾಗ ಅದು ಪಾಲಿಶ್​ ಸಾಲುಗಳಾಗುತ್ತದೆ. ಆ ಸಾಲುಗಳು ಅಗತ್ಯವಿಲ್ಲ’ ಎಂದಿದ್ದಾರೆ ಅವರು. ಆ ಬಳಿಕ ಪಂಚ್ ಮಾಡಲು ಸುದೀಪ್ ಅವರು ಅವಕಾಶವನ್ನು ಕೊಡಲೇ ಇಲ್ಲ. ಆ ಬಳಿಕ ಗೌತಮಿ ಅವರು ಕಣ್ಣೀರು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್