AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ನಿರೂಪಣೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದ ಸುದೀಪ್; ಮತ್ತೆ ಒಪ್ಪಿದ್ದು ಹೇಗೆ?

ಈ ವರ್ಷ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಸುದೀಪ್ ನಿರೂಪಣೆ ಮಾಡುತ್ತಾರೋ ಇಲ್ಲವೋ ಎಂಬ ಅನುಮಾನ ಅನೇಕರಲ್ಲಿತ್ತು. ಅಂತಿಮವಾಗಿ ಆ ಅನುಮಾನ ಬಗೆಹರಿಯಿತು. ಸುದೀಪ್​ ಅವರೇ ಆ್ಯಂಕರ್​ ಎಂಬುದು ಖಚಿತವಾಯಿತು. ಆದರೆ ಈ ಬಾರಿ ಬಿಗ್​ ಬಾಸ್​ ನಿರೂಪಣೆಗೆ ಬ್ರೇಕ್​ ಹಾಕಬೇಕು ಎಂಬ ಆಲೋಚನೆ ಸ್ವತಃ ಸುದೀಪ್​ ಅವರ ಮನಸ್ಸಲ್ಲಿ ಬಂದಿತ್ತು. ಆ ಬಗ್ಗೆ ಅವರೇ ಮಾತನಾಡಿದ್ದಾರೆ.

ಬಿಗ್ ಬಾಸ್ ನಿರೂಪಣೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದ ಸುದೀಪ್; ಮತ್ತೆ ಒಪ್ಪಿದ್ದು ಹೇಗೆ?
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Sep 23, 2024 | 9:14 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋ ಸೆಪ್ಟೆಂಬರ್​ 29ರಂದು ಅದ್ದೂರಿಯಾಗಿ ಲಾಂಚ್​ ಆಗಲಿದೆ. ಆ ಬಗ್ಗೆ ಮಾತನಾಡಲು ಇಂದು (ಸೆ.23) ಪ್ರೆಸ್​ಮೀಟ್​ ಮಾಡಲಾಯಿತು. ಈ ವೇಳೆ ಕಿಚ್ಚ ಸುದೀಪ್​ ಅವರಿಗೆ ಅನೇಕ ಪ್ರಶ್ನೆಗಳು ಎದುರಾದವು. ‘ಈ ಬಾರಿ ನಿರೂಪಣೆ ಬೇಡ ಅಂತ ನೀವು ಅಂದುಕೊಂಡಿದ್ದು ನಿಜವೇ?’ ಎಂಬ ಪ್ರಶ್ನೆಗೆ ಸುದೀಪ್​ ಉತ್ತರ ನೀಡಿದರು. ‘ಬಿಗ್​ ಬಾಸ್​ನ ಈ ಸೀಸನ್​ಗೆ ಗ್ಯಾಪ್​ ನೀಡೋಣ ಎಂಬ ಆಲೋಚನೆ ನನಗೆ ಇತ್ತು. ಗಿಮಿಕ್​ ಮಾಡಿ ಯಾವುದೇ ಪ್ರೋಮೋ ಮಾಡುವ ಅವಶ್ಯಕತೆ ನಮಗೆ ಇಲ್ಲ. ಗಿಮಿಕ್​ನಿಂದ ಓಡುವ ಜೀವನವನ್ನು ನಾವು ನಡೆಸುತ್ತಿಲ್ಲ’ ಎಂದಿದ್ದಾರೆ ಸುದೀಪ್.

‘ನಾನು ಓಪನ್​ ಆಗಿ ಕಲರ್ಸ್​ ವಾಹಿನಿಯವರ ಮುಂದೆ ನನ್ನ ನಿರ್ಧಾರ ತಿಳಿಸಿದ್ದು ನಿಜ. ಅದರಿಂದ ನನಗೂ ಮತ್ತು ಕಲರ್ಸ್​ ವಾಹಿನಿಯವರಿಗೆ ಹೊಂದಾಣಿಕೆ ಇಲ್ಲ ಅಂತೇನೂ ಅಲ್ಲ. ಹೊಂದಾಣಿಕೆ ಇಲ್ಲದೇ ಇದ್ದಿದ್ದರೆ 10 ವರ್ಷಗಳ ಜರ್ನಿ ಆಗುತ್ತಿರಲಿಲ್ಲ. ಬಿಗ್​ ಬಾಸ್​, ಕ್ರಿಕೆಟ್​ ಅಂತ ಬ್ಯುಸಿ ಆಗಿದ್ದೆ. ಬರೀ ಅದರಲ್ಲೇ ಇದ್ದೀನಿ. ಹೋಗೋಕೆ ಆಗುತ್ತಿಲ್ಲ. ಬಿಗ್​ ಬಾಸ್​ ಒಳ್ಳೆಯ ಕಾರ್ಯಕ್ರಮ ಎಂಬುದು ಹೌದು. ಜನರು ಇಷ್ಟಪಟ್ಟಿದ್ದಾರೆ. ಅದಕ್ಕಾಗಿ ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಅದು ಶುರುವಾದರೆ ನನ್ನ ಲೈಫ್​ ಸ್ವಲ್ಪ ಮ್ಯೂಟ್​ ಆಗುತ್ತೆ’ ಎಂದು ಪ್ರಾಕ್ಟಿಕಲ್​ ವಿಚಾರವನ್ನು ಸುದೀಪ್​ ತೆರೆದಿಟ್ಟಿದ್ದಾರೆ.

‘ವಾರದಲ್ಲಿ 4 ದಿನ ಮಾತ್ರ ನಾನು ಎಲ್ಲಿಗಾದರೂ ಹೋಗಬಹುದು. ಶುಕ್ರವಾರ ಎಲ್ಲಿಯೇ ಇದ್ರೂ ವಾಪಸ್​ ಈ ಸ್ಟುಡಿಯೋಗೆ ನಾನು ಬರಲೇಬೇಕು. ಯಾಕೆಂದರೆ ನಾನು ಎಲ್ಲ ಎಪಿಸೋಡ್​ ನೋಡಬೇಕು. ಎಲ್ಲರಿಗೂ ನ್ಯಾಯ ಒದಗಿಸಬೇಕು. ಶನಿವಾರ ಇಡೀ ದಿನ ಶೂಟಿಂಗ್​ ಆಗುತ್ತೆ. ರಾತ್ರಿವರೆಗೆ ಸಾಗುತ್ತದೆ. ಭಾನುವಾರ ಬೆಳಗ್ಗೆ ತನಕ ಅದರಲ್ಲೇ ಬ್ಯುಸಿ. ಹಾಗಾಗಿ ವಾಹಿನಿಯವರ ಜೊತೆ ನಾನು ಮಾತನಾಡಿದೆ. 10 ವರ್ಷ ಕಳೆದಿದೆ. ಬೇರೆ ಯಾರ ಜೊತೆಗಾದರೂ ಮುಂದುವರಿಯಿರಿ ಎಂದೆ. ಅದು ಯಾವುದೇ ತಪ್ಪು ತಿಳಿವಳಿಕೆಯಿಂದ ಆಗಿದ್ದಲ್ಲ. ನನ್ನ ನಿರ್ಧಾರ ಹೇಳಿದ ಬಳಿಕ ಕಲರ್ಸ್​, ಎಂಡಮಾಲ್ ಕಂಪನಿಗಳಿಂದ ಅನೇಕರು ನನ್ನನ್ನು ಒಪ್ಪಿಸಲು ನಮ್ಮ ಮನೆಗೆ ಬಂದರು. 10 ವರ್ಷದಲ್ಲಿ ಮೊದಲ ಬಾರಿಗೆ ಈ ರೀತಿ ಆಗಿದ್ದು’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ ಸುದೀಪ್​

ಈ ನಡುವೆ ಕಿಚ್ಚ ಸುದೀಪ್​ ಬದಲು ರಿಷಬ್​ ಶೆಟ್ಟಿ ಅವರು ಬಿಗ್​ ಬಾಸ್​ ನಿರೂಪಣೆ ಮಾಡುತ್ತಾರೆ ಎಂಬ ಗಾಸಿಪ್​ ಕೇಳಿಬಂದಿತ್ತು. ಆದರೆ ಅದು ನಿಜವಾಗಿಲ್ಲ. ಅಂತಿಮವಾಗಿ ಸುದೀಪ್​ ಅವರೇ ನಿರೂಪಕನ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಸತತ 11ನೇ ಬಾರಿಗೆ ಅವರು ನಿರೂಪಣೆ ಮಾಡುತ್ತಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ