AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಡ್ ವೀಕ್ ಎಲಿಮಿನೇಷನ್; ಸೋಮವಾರದ ಸಂಚಿಕೆಯಲ್ಲೂ ಶಾಕ್ ಕೊಟ್ಟ ಸುದೀಪ್

ಕಳೆದ ವಾರ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಅವರು ಎಲಿಮಿನೇಟ್ ಆದರು. ಈಗ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಆಟದಲ್ಲಿ ಸೆಮಿ ಫೈನಲ್ ನಡೆಯುತ್ತಿದೆ. ಸೋಮವಾರದ (ಜನವರಿ 13) ಸಂಚಿಕೆಯಲ್ಲಿ ಸುದೀಪ್​ ಕಡೆಯಿಂದ ಬಿಗ್ ಬಾಸ್ ಸ್ಪರ್ಧಿಗಳಿಗೆ ಒಂದು ಮುಖ್ಯವಾದ ಸಂದೇಶ ನೀಡಲಾಗಿದೆ. ಅದನ್ನು ಕೇಳಿ ಎಲ್ಲರಿಗೂ ಶಾಕ್ ಆಗಿದೆ.

ಮಿಡ್ ವೀಕ್ ಎಲಿಮಿನೇಷನ್; ಸೋಮವಾರದ ಸಂಚಿಕೆಯಲ್ಲೂ ಶಾಕ್ ಕೊಟ್ಟ ಸುದೀಪ್
Bigg Boss Kannada 11
ಮದನ್​ ಕುಮಾರ್​
|

Updated on: Jan 13, 2025 | 10:03 PM

Share

ಮಿಡ್ ವೀಕ್ ಎಲಿಮಿನೇಷನ್​ ಎಂದರೆ ಎಲ್ಲ ಸ್ಪರ್ಧಿಗಳಿಗೂ ಢವ ಢವ ಶುರು ಆಗುತ್ತದೆ. ಯಾಕೆಂದರೆ, ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿಯ ಆಟ ಅಂತ್ಯವಾಗುತ್ತದೆ. ಅವರಿಗೆ ವಿದಾಯ ಹೇಳಲು ಸುದೀಪ್ ಇರುವುದಿಲ್ಲ. ಮಿಡ್​ ವೀಕ್​ನಲ್ಲಿ ಎಲಿಮಿನೇಟ್​ ಆದವರು ಆಗಿಂದಾಗಲೇ ದೊಡ್ಮನೆಗೆ ವಿದಾಯ ಹೇಳಬೇಕಾಗುತ್ತದೆ. ಸೋಮವಾರದ (ಜ.13) ಸಂಚಿಕೆ ಆರಂಭ ಆಗುತ್ತಿದ್ದಂತೆಯೇ ಬಿಗ್ ಬಾಸ್ ಮನೆಯ ಒಳಗಿನ ಟಿವಿಯಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಎಲ್ಲರಿಗೂ ಮಿಡ್ ವೀಕ್ ಎಲಿಮಿನೇಷನ್​ ಬಗ್ಗೆ ಅವರು ಎಚ್ಚರಿಕೆ ನೀಡಿದರು.

‘ಈ ವಾರ ಮಿಡ್​ ವೀಕ್​ ಎಲಿಮಿನೇಷನ್ ಇರುತ್ತದೆ. ಹನುಮಂತನ ಹೊರತುಪಡಿಸಿ ಎಲ್ಲರೂ ನಾಮಿನೇಟ್ ಆಗಿದ್ದೀರಿ. ಹೋಗುವವರಿಗೆ ಈಗಲೇ ಬ್ಯಾಡ್​ ಲಕ್ ಹೇಳುತ್ತಿದ್ದೇನೆ. ಎಲ್ಲರೂ ಚೆನ್ನಾಗಿ ಆಟ ಆಡಿ. ಎಲ್ಲರಿಗೂ ಗುಡ್ ಲಕ್’ ಎಂದು ಕಿಚ್ಚ ಸುದೀಪ್ ಅವರು ಹೇಳಿದರು. ಕಳೆದ ವಾರವಷ್ಟೇ ಮಾರಿ ಹಬ್ಬದಂತಹ ಟಾಸ್ಕ್​ ನೀಡಲಾಗಿತ್ತು. ಈ ವಾರದ ಟಾಸ್ಕ್​ ಇನ್ನಷ್ಟು ಕಠಿಣವಾಗಿ ಇರಲಿದೆ.

ಇದನ್ನೂ ಓದಿ: ಬಿಗ್ ಬಾಸ್ ಬಿಟ್ಟರೂ ಸುದೀಪ್ ಬಿಡಲಿಲ್ಲ; ಭವ್ಯಾಗೆ ಸೂಕ್ತ ಶಿಕ್ಷೆ ಕೊಟ್ಟ ಕಿಚ್ಚ

ಈಗ ಬಿಗ್ ಬಾಸ್​ನಲ್ಲಿ ಸೆಮಿ ಫೈನಲ್. ವಾರದ ನಡುವಿನಲ್ಲಿ ಒಬ್ಬರು ಹೊರಗೆ ಹೋಗುವುದು ಬಹುತೇಕ ಖಚಿತ. ಧನರಾಜ್, ರಜತ್, ಗೌತಮಿ ಜಾದವ್​, ಮೋಕ್ಷಿತಾ ಪೈ, ಭವ್ಯಾ ಗೌಡ, ಉಗ್ರಂ ಮಂಜು, ತ್ರಿವಿಕ್ರಮ್ ಅವರು ತಮ್ಮ ಉಳಿವಿಗಾಗಿ ಹೋರಾಟ ಮಾಡಬೇಕು. ಈ ಎಲ್ಲರಿಗೂ ಟಾಸ್ಕ್ ನೀಡಲಾಗುತ್ತಿದೆ. ಮೊದಲು ಯಾರು ಆಟ ಆಡಬೇಕು ಎಂಬುದನ್ನು ನಿರ್ಧರಿಸುವ ಅವಕಾಶವನ್ನು ಮನೆಯ ಕ್ಯಾಪ್ಟನ್ ಆದಂತಹ ಹನುಮಂತ ಅವರಿಗೆ ನೀಡಲಾಯಿತು.

ಇದನ್ನೂ ಓದಿ: ಬಿಗ್ ಬಾಸ್ ಗೆಲ್ಲಲು ಮೋಕ್ಷಿತಾ ಪೈಗೆ ಸುದೀಪ್ ಕಿವಿಮಾತು

ಹನುಮಂತ ಅವರು ಮೊದಲ ಆಟಕ್ಕೆ ಭವ್ಯಾ ಅವರನ್ನು ಆಯ್ಕೆ ಮಾಡಿದರು. ಕಳೆದ ವಾರ ಟಾಸ್ಕ್ ಆಡುವಾಗ ಭವ್ಯಾ ಅವರು ಹನುಮಂತನಿಗೆ ಹೊಡೆದಿದ್ದರು. ಅದಕ್ಕಾಗಿ ಭವ್ಯಾ ಅವರನ್ನು ಜೈಲಿಗೆ ಕೂಡ ಕಳಿಸಲಾಗಿತ್ತು. ಭವ್ಯಾ ಹೊಡೆದಾಗ ಹನುಮಂತನಿಗೆ ಬೇಸರ ಆಗಿದ್ದು ನಿಜ. ಆದರೆ ಆ ನೋವನ್ನು ಮನಸ್ಸಿನಿಂದ ತೆಗೆದು ಹಾಕಿ, ಭವ್ಯಾ ಅವರನ್ನೇ ಟಾಸ್ಕ್​ಗೆ ಮೊದಲ ಸ್ಪರ್ಧಿಯಾಗಿ ಆಯ್ಕೆ ಮಾಡಿದ ಹನುಮಂತ ಅವರ ನಡೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?