AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
TV9 Web
| Edited By: |

Updated on: Aug 03, 2021 | 7:36 AM

Share

ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಮನೆಯನ್ನು ಮತ್ತೊಂದು ಕುಟುಂಬದಂತೆ ಕಾಣುತ್ತಾರೆ. ಪ್ರತಿ ಬಾರಿ ಬಿಗ್​ ಬಾಸ್​ ಸೇರುವ ಸ್ಪರ್ಧಿಗಳನ್ನು ವಿಶೇಷ ಪ್ರೀತಿ ಹಾಗೂ ಕಾಳಜಿಯಿಂದ ಕಾಣುತ್ತಾರೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಬಾರಿ ಬಿಗ್​ ಬಾಸ್​ ಮನೆಗೆ ಕಿಚ್ಚ ಸುದೀಪ್​ ಸಿದ್ಧಪಡಿಸಿದ ವಿಶೇಷ ಅಡುಗೆ ಬರುವ ಸಾಧ್ಯತೆ ಗೋಚರವಾಗಿದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ. ಆ ಸ್ಪರ್ಧಿ ಯಾರು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಈ ಮಧ್ಯೆ ಮನೆಯ ಸದಸ್ಯರಿಗೆ ವಿಶೇಷ ಆಯ್ಕೆ ನೀಡಲಾಗಿತ್ತು.

ಬಿಗ್​ ಬಾಸ್​ ಮನೆಯ ಗಾರ್ಡನ್​ ಏರಿಯಾದಲ್ಲಿ ಕಿವಿ ಒಂದನ್ನು ಇರಿಸಲಾಗಿದೆ. ಈ ಕಿವಿ ಬಳಿ ಹೋಗಿ ಸ್ಪರ್ಧಿಗಳು ತಮ್ಮಿಚ್ಛೆಯನ್ನು ಕೋರಬೇಕು. ಅದು ಈಡೇರಿಸುವಂತಿದ್ದರೆ ಬಿಗ್​ ಬಾಸ್​ ಬೇಡಿಕೆ ಅದನ್ನು ಪೂರ್ಣಗೊಳಿಸುತ್ತಾರೆ. ಮನೆಯ ಎಲ್ಲಾ ಸ್ಪರ್ಧಿಗಳು ತಮ್ಮಿಷ್ಟದ್ದನ್ನು ಕೋರಿದ್ದಾರೆ. ಈ ವೇಳೆ ದಿವ್ಯಾ ಉರುಡುಗ ಬೇಡಿಕೆ ಒಂದನ್ನು ಇಟ್ಟರು.

‘ನಮಗೆ ಕಿಚ್ಚ ಸುದೀಪ್​ ಅಡುಗೆ ಊಟ ಮಾಡಬೇಕು. ಹೀಗಾಗಿ, ಮನೆ ಮಂದಿಗೆ ಕಿಚ್ಚ ಸುದೀಪ್ ಅಡುಗೆ ಮಾಡಿ ಕಳಿಸೋಕೆ ಹೇಳಿ. ಪ್ಲೀಸ್ ದಯವಿಟ್ಟು ಕೊಟ್ಟು ಕಳಿಸಿ ಬಿಗ್​ ಬಾಸ್​’ ಎಂದು ಮನವಿ ಮಾಡಿದ್ದಾರೆ.

ಮೊದಲ ಇನ್ನಿಂಗ್ಸ್​ ವೇಳೆ ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಕೆಲವು ವಾರ ಶೋ ನಡೆಸಿಕೊಡೋಕೆ ಬಂದಿರಲಿಲ್ಲ. ಈ ವೇಳೆ ಮನೆ ಮಂದಿ ಎಲ್ಲರೂ ಸುದೀಪ್​ಗೆ ಅಡುಗೆ ಮಾಡಿ ಕೊಟ್ಟಿದ್ದರು. ಈಗ ಮನೆ ಮಂದಿ ಸುದೀಪ್​ ಅಡುಗೆ ತಿನ್ನಬೇಕು ಎಂದು ಬಯಸಿದ್ದಾರೆ. ಹೀಗಾಗಿ, ಸುದೀಪ್​ ಅಡುಗೆ ಮಾಡಿ ಕಳುಹಿಸುತ್ತಾರಾ ಅನ್ನೋದು ಸದ್ಯದ ಕುತೂಹಲ. ಅಂದಹಾಗೆ, ಸುದೀಪ್​ ಅತ್ಯುತ್ತಮ ಕುಕ್​. ಅವರು ಸ್ಪರ್ಧಿಗಳಿಗೆ ಯಾವ ಅಡುಗೆ ಮಾಡಿ ಕಳುಹಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ