AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
TV9 Web
| Edited By: |

Updated on: Aug 03, 2021 | 7:36 AM

Share

ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಮನೆಯನ್ನು ಮತ್ತೊಂದು ಕುಟುಂಬದಂತೆ ಕಾಣುತ್ತಾರೆ. ಪ್ರತಿ ಬಾರಿ ಬಿಗ್​ ಬಾಸ್​ ಸೇರುವ ಸ್ಪರ್ಧಿಗಳನ್ನು ವಿಶೇಷ ಪ್ರೀತಿ ಹಾಗೂ ಕಾಳಜಿಯಿಂದ ಕಾಣುತ್ತಾರೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಬಾರಿ ಬಿಗ್​ ಬಾಸ್​ ಮನೆಗೆ ಕಿಚ್ಚ ಸುದೀಪ್​ ಸಿದ್ಧಪಡಿಸಿದ ವಿಶೇಷ ಅಡುಗೆ ಬರುವ ಸಾಧ್ಯತೆ ಗೋಚರವಾಗಿದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ. ಆ ಸ್ಪರ್ಧಿ ಯಾರು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಈ ಮಧ್ಯೆ ಮನೆಯ ಸದಸ್ಯರಿಗೆ ವಿಶೇಷ ಆಯ್ಕೆ ನೀಡಲಾಗಿತ್ತು.

ಬಿಗ್​ ಬಾಸ್​ ಮನೆಯ ಗಾರ್ಡನ್​ ಏರಿಯಾದಲ್ಲಿ ಕಿವಿ ಒಂದನ್ನು ಇರಿಸಲಾಗಿದೆ. ಈ ಕಿವಿ ಬಳಿ ಹೋಗಿ ಸ್ಪರ್ಧಿಗಳು ತಮ್ಮಿಚ್ಛೆಯನ್ನು ಕೋರಬೇಕು. ಅದು ಈಡೇರಿಸುವಂತಿದ್ದರೆ ಬಿಗ್​ ಬಾಸ್​ ಬೇಡಿಕೆ ಅದನ್ನು ಪೂರ್ಣಗೊಳಿಸುತ್ತಾರೆ. ಮನೆಯ ಎಲ್ಲಾ ಸ್ಪರ್ಧಿಗಳು ತಮ್ಮಿಷ್ಟದ್ದನ್ನು ಕೋರಿದ್ದಾರೆ. ಈ ವೇಳೆ ದಿವ್ಯಾ ಉರುಡುಗ ಬೇಡಿಕೆ ಒಂದನ್ನು ಇಟ್ಟರು.

‘ನಮಗೆ ಕಿಚ್ಚ ಸುದೀಪ್​ ಅಡುಗೆ ಊಟ ಮಾಡಬೇಕು. ಹೀಗಾಗಿ, ಮನೆ ಮಂದಿಗೆ ಕಿಚ್ಚ ಸುದೀಪ್ ಅಡುಗೆ ಮಾಡಿ ಕಳಿಸೋಕೆ ಹೇಳಿ. ಪ್ಲೀಸ್ ದಯವಿಟ್ಟು ಕೊಟ್ಟು ಕಳಿಸಿ ಬಿಗ್​ ಬಾಸ್​’ ಎಂದು ಮನವಿ ಮಾಡಿದ್ದಾರೆ.

ಮೊದಲ ಇನ್ನಿಂಗ್ಸ್​ ವೇಳೆ ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಕೆಲವು ವಾರ ಶೋ ನಡೆಸಿಕೊಡೋಕೆ ಬಂದಿರಲಿಲ್ಲ. ಈ ವೇಳೆ ಮನೆ ಮಂದಿ ಎಲ್ಲರೂ ಸುದೀಪ್​ಗೆ ಅಡುಗೆ ಮಾಡಿ ಕೊಟ್ಟಿದ್ದರು. ಈಗ ಮನೆ ಮಂದಿ ಸುದೀಪ್​ ಅಡುಗೆ ತಿನ್ನಬೇಕು ಎಂದು ಬಯಸಿದ್ದಾರೆ. ಹೀಗಾಗಿ, ಸುದೀಪ್​ ಅಡುಗೆ ಮಾಡಿ ಕಳುಹಿಸುತ್ತಾರಾ ಅನ್ನೋದು ಸದ್ಯದ ಕುತೂಹಲ. ಅಂದಹಾಗೆ, ಸುದೀಪ್​ ಅತ್ಯುತ್ತಮ ಕುಕ್​. ಅವರು ಸ್ಪರ್ಧಿಗಳಿಗೆ ಯಾವ ಅಡುಗೆ ಮಾಡಿ ಕಳುಹಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ