AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
TV9 Web
| Edited By: |

Updated on: Aug 03, 2021 | 7:36 AM

Share

ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಮನೆಯನ್ನು ಮತ್ತೊಂದು ಕುಟುಂಬದಂತೆ ಕಾಣುತ್ತಾರೆ. ಪ್ರತಿ ಬಾರಿ ಬಿಗ್​ ಬಾಸ್​ ಸೇರುವ ಸ್ಪರ್ಧಿಗಳನ್ನು ವಿಶೇಷ ಪ್ರೀತಿ ಹಾಗೂ ಕಾಳಜಿಯಿಂದ ಕಾಣುತ್ತಾರೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಬಾರಿ ಬಿಗ್​ ಬಾಸ್​ ಮನೆಗೆ ಕಿಚ್ಚ ಸುದೀಪ್​ ಸಿದ್ಧಪಡಿಸಿದ ವಿಶೇಷ ಅಡುಗೆ ಬರುವ ಸಾಧ್ಯತೆ ಗೋಚರವಾಗಿದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ. ಆ ಸ್ಪರ್ಧಿ ಯಾರು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಈ ಮಧ್ಯೆ ಮನೆಯ ಸದಸ್ಯರಿಗೆ ವಿಶೇಷ ಆಯ್ಕೆ ನೀಡಲಾಗಿತ್ತು.

ಬಿಗ್​ ಬಾಸ್​ ಮನೆಯ ಗಾರ್ಡನ್​ ಏರಿಯಾದಲ್ಲಿ ಕಿವಿ ಒಂದನ್ನು ಇರಿಸಲಾಗಿದೆ. ಈ ಕಿವಿ ಬಳಿ ಹೋಗಿ ಸ್ಪರ್ಧಿಗಳು ತಮ್ಮಿಚ್ಛೆಯನ್ನು ಕೋರಬೇಕು. ಅದು ಈಡೇರಿಸುವಂತಿದ್ದರೆ ಬಿಗ್​ ಬಾಸ್​ ಬೇಡಿಕೆ ಅದನ್ನು ಪೂರ್ಣಗೊಳಿಸುತ್ತಾರೆ. ಮನೆಯ ಎಲ್ಲಾ ಸ್ಪರ್ಧಿಗಳು ತಮ್ಮಿಷ್ಟದ್ದನ್ನು ಕೋರಿದ್ದಾರೆ. ಈ ವೇಳೆ ದಿವ್ಯಾ ಉರುಡುಗ ಬೇಡಿಕೆ ಒಂದನ್ನು ಇಟ್ಟರು.

‘ನಮಗೆ ಕಿಚ್ಚ ಸುದೀಪ್​ ಅಡುಗೆ ಊಟ ಮಾಡಬೇಕು. ಹೀಗಾಗಿ, ಮನೆ ಮಂದಿಗೆ ಕಿಚ್ಚ ಸುದೀಪ್ ಅಡುಗೆ ಮಾಡಿ ಕಳಿಸೋಕೆ ಹೇಳಿ. ಪ್ಲೀಸ್ ದಯವಿಟ್ಟು ಕೊಟ್ಟು ಕಳಿಸಿ ಬಿಗ್​ ಬಾಸ್​’ ಎಂದು ಮನವಿ ಮಾಡಿದ್ದಾರೆ.

ಮೊದಲ ಇನ್ನಿಂಗ್ಸ್​ ವೇಳೆ ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಕೆಲವು ವಾರ ಶೋ ನಡೆಸಿಕೊಡೋಕೆ ಬಂದಿರಲಿಲ್ಲ. ಈ ವೇಳೆ ಮನೆ ಮಂದಿ ಎಲ್ಲರೂ ಸುದೀಪ್​ಗೆ ಅಡುಗೆ ಮಾಡಿ ಕೊಟ್ಟಿದ್ದರು. ಈಗ ಮನೆ ಮಂದಿ ಸುದೀಪ್​ ಅಡುಗೆ ತಿನ್ನಬೇಕು ಎಂದು ಬಯಸಿದ್ದಾರೆ. ಹೀಗಾಗಿ, ಸುದೀಪ್​ ಅಡುಗೆ ಮಾಡಿ ಕಳುಹಿಸುತ್ತಾರಾ ಅನ್ನೋದು ಸದ್ಯದ ಕುತೂಹಲ. ಅಂದಹಾಗೆ, ಸುದೀಪ್​ ಅತ್ಯುತ್ತಮ ಕುಕ್​. ಅವರು ಸ್ಪರ್ಧಿಗಳಿಗೆ ಯಾವ ಅಡುಗೆ ಮಾಡಿ ಕಳುಹಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ