AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
TV9 Web
| Edited By: |

Updated on: Aug 03, 2021 | 7:36 AM

Share

ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಮನೆಯನ್ನು ಮತ್ತೊಂದು ಕುಟುಂಬದಂತೆ ಕಾಣುತ್ತಾರೆ. ಪ್ರತಿ ಬಾರಿ ಬಿಗ್​ ಬಾಸ್​ ಸೇರುವ ಸ್ಪರ್ಧಿಗಳನ್ನು ವಿಶೇಷ ಪ್ರೀತಿ ಹಾಗೂ ಕಾಳಜಿಯಿಂದ ಕಾಣುತ್ತಾರೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಬಾರಿ ಬಿಗ್​ ಬಾಸ್​ ಮನೆಗೆ ಕಿಚ್ಚ ಸುದೀಪ್​ ಸಿದ್ಧಪಡಿಸಿದ ವಿಶೇಷ ಅಡುಗೆ ಬರುವ ಸಾಧ್ಯತೆ ಗೋಚರವಾಗಿದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೊನೆಯ ಹಂತ ತಲುಪಿದೆ. ಮನೆಯಲ್ಲಿ 6 ಸ್ಪರ್ಧಿಗಳಿದ್ದು ಓರ್ವ ಸ್ಪರ್ಧಿ ವಾರದ ಮಧ್ಯದಲ್ಲಿ ಮನೆಯಿಂದ ಹೊರ ಹೋಗುತ್ತಿದ್ದಾರೆ. ಆ ಸ್ಪರ್ಧಿ ಯಾರು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಈ ಮಧ್ಯೆ ಮನೆಯ ಸದಸ್ಯರಿಗೆ ವಿಶೇಷ ಆಯ್ಕೆ ನೀಡಲಾಗಿತ್ತು.

ಬಿಗ್​ ಬಾಸ್​ ಮನೆಯ ಗಾರ್ಡನ್​ ಏರಿಯಾದಲ್ಲಿ ಕಿವಿ ಒಂದನ್ನು ಇರಿಸಲಾಗಿದೆ. ಈ ಕಿವಿ ಬಳಿ ಹೋಗಿ ಸ್ಪರ್ಧಿಗಳು ತಮ್ಮಿಚ್ಛೆಯನ್ನು ಕೋರಬೇಕು. ಅದು ಈಡೇರಿಸುವಂತಿದ್ದರೆ ಬಿಗ್​ ಬಾಸ್​ ಬೇಡಿಕೆ ಅದನ್ನು ಪೂರ್ಣಗೊಳಿಸುತ್ತಾರೆ. ಮನೆಯ ಎಲ್ಲಾ ಸ್ಪರ್ಧಿಗಳು ತಮ್ಮಿಷ್ಟದ್ದನ್ನು ಕೋರಿದ್ದಾರೆ. ಈ ವೇಳೆ ದಿವ್ಯಾ ಉರುಡುಗ ಬೇಡಿಕೆ ಒಂದನ್ನು ಇಟ್ಟರು.

‘ನಮಗೆ ಕಿಚ್ಚ ಸುದೀಪ್​ ಅಡುಗೆ ಊಟ ಮಾಡಬೇಕು. ಹೀಗಾಗಿ, ಮನೆ ಮಂದಿಗೆ ಕಿಚ್ಚ ಸುದೀಪ್ ಅಡುಗೆ ಮಾಡಿ ಕಳಿಸೋಕೆ ಹೇಳಿ. ಪ್ಲೀಸ್ ದಯವಿಟ್ಟು ಕೊಟ್ಟು ಕಳಿಸಿ ಬಿಗ್​ ಬಾಸ್​’ ಎಂದು ಮನವಿ ಮಾಡಿದ್ದಾರೆ.

ಮೊದಲ ಇನ್ನಿಂಗ್ಸ್​ ವೇಳೆ ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಕೆಲವು ವಾರ ಶೋ ನಡೆಸಿಕೊಡೋಕೆ ಬಂದಿರಲಿಲ್ಲ. ಈ ವೇಳೆ ಮನೆ ಮಂದಿ ಎಲ್ಲರೂ ಸುದೀಪ್​ಗೆ ಅಡುಗೆ ಮಾಡಿ ಕೊಟ್ಟಿದ್ದರು. ಈಗ ಮನೆ ಮಂದಿ ಸುದೀಪ್​ ಅಡುಗೆ ತಿನ್ನಬೇಕು ಎಂದು ಬಯಸಿದ್ದಾರೆ. ಹೀಗಾಗಿ, ಸುದೀಪ್​ ಅಡುಗೆ ಮಾಡಿ ಕಳುಹಿಸುತ್ತಾರಾ ಅನ್ನೋದು ಸದ್ಯದ ಕುತೂಹಲ. ಅಂದಹಾಗೆ, ಸುದೀಪ್​ ಅತ್ಯುತ್ತಮ ಕುಕ್​. ಅವರು ಸ್ಪರ್ಧಿಗಳಿಗೆ ಯಾವ ಅಡುಗೆ ಮಾಡಿ ಕಳುಹಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ