AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ
ಕಿಚ್ಚ ಸುದೀಪ್​​
TV9 Web
| Edited By: |

Updated on: Sep 04, 2021 | 7:22 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಆರಂಭವಾಗಿದ್ದು ಬಿಗ್​ ಬಾಸ್​ ಮಿನಿ ಸೀಸನ್​. ಕಲರ್ಸ್​ ಕನ್ನಡ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಮಿನಿ ಬಿಗ್​ ಬಾಸ್​ ನಡೆಸಲಾಗಿದೆ. ಇದು ಕನ್ನಡದ ಪಾಲಿಗೆ ಹೊಸ ಪ್ರಯೋಗ. 100 ದಿನಗಳ ಕಾಲ ಮನರಂಜನೆ ನೀಡುತ್ತಿದ್ದ ಬಿಗ್​ ಬಾಸ್​ಗೂ ಇದಕ್ಕೂ ತುಂಬಾನೇ ವ್ಯತ್ಯಾಸವಿದೆ. ಆದರೂ ಮನರಂಜನೆಗೆ ಯಾವುದೇ ಕೊರತೆ ಆಗಿಲ್ಲ. ಸ್ಪರ್ಧಿಗಳು ಆರು ದಿನಗಳ ಕಾಲ ಮನೆಯಲ್ಲಿ ಕಳೆದು ಬಂದಿದ್ದನ್ನು ಕಲರ್ಸ್​ ಕನ್ನಡ ವಾಹಿನಿಯಲ್ಲಿ ಮೂರು ವಾರಗಳ ಕಾಲ ಪ್ರಸಾರ ಮಾಡಲಾಗಿದೆ. ಈಗ ಏನಿದ್ದರೂ ಸುದೀಪ್​ ಬಿಗ್​ ಬಾಸ್ ವೇದಿಕೆ​ ಏರುವ ಸಮಯ.

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಸುದೀಪ್​ ನಿರೂಪಣೆಯನ್ನು ಇಷ್ಟಪಡದವರಿಲ್ಲ. ಸುದೀಪ್​ ಅವರನ್ನು ನೋಡುವ ಉದ್ದೇಶದಿಂದಲೇ ಬಿಗ್​ ಬಾಸ್​ ನೋಡುವವರ ಸಂಖ್ಯೆ ದೊಡ್ಡದಿದೆ. ಈಗ ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ. ಶನಿವಾರ (ಸೆಪ್ಟೆಂಬರ್​ 4) ಮತ್ತು ಭಾನುವಾರ (ಸೆಪ್ಟೆಂಬರ್​ 5) ಸುದೀಪ್​ ನಿರೂಪಣೆ ಮಾಡಿರುವ ಎಪಿಸೋಡ್​ ಪ್ರಸಾರವಾಗಲಿದೆ. ಇದನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ.

ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸುದೀಪ್​ ನಿರೂಪಣೆಯ ಎಪಿಸೋಡ್​ನ ಶೂಟಿಂಗ್​ ಪೂರ್ಣಗೊಳಿಸಿದೆ. ಅದನ್ನು, ಈಗ ಪ್ರಸಾರ ಮಾಡಲಾಗುತ್ತಿದೆ. ಕಳೆದ ಒಂದು ವಾರಗಳಿಂದ ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಸುದೀಪ್​ ಲುಕ್​ ಹಾಗೂ ಮಾತುಗಳು ವೀಕ್ಷಕರಿಗೆ ಇಷ್ಟವಾಗುತ್ತಿದ್ದು, ಫುಲ್​ ಎಪಿಸೋಡ್​ ಪ್ರಸಾರಕ್ಕಾಗಿ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಸುದೀಪ್​ ನಿರೂಪಣೆ ಮಾಡುವ ಬಿಗ್​ ಬಾಸ್​ ಎಪಿಸೋಡ್​ಗಳು ರಾತ್ರಿ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಸಮಯ ಬದಲಾಗಿದೆ. ಮಧ್ಯಾಹ್ನ ಮೂರು ಗಂಟೆಗೇ ಸುದೀಪ್​ ಎಂಟ್ರಿ ಆಗಲಿದೆ. ರಾತ್ರಿ ಬೇರೆಬೇರೆ ಕಾರ್ಯಕ್ರಮಗಳು ಶೆಡ್ಯೂಲ್​ ಆಗಿರುವುದರಿಂದ ವಾಹಿನಿ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ:

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು