AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ
ಕಿಚ್ಚ ಸುದೀಪ್​​
TV9 Web
| Edited By: |

Updated on: Sep 04, 2021 | 7:22 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಆರಂಭವಾಗಿದ್ದು ಬಿಗ್​ ಬಾಸ್​ ಮಿನಿ ಸೀಸನ್​. ಕಲರ್ಸ್​ ಕನ್ನಡ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಮಿನಿ ಬಿಗ್​ ಬಾಸ್​ ನಡೆಸಲಾಗಿದೆ. ಇದು ಕನ್ನಡದ ಪಾಲಿಗೆ ಹೊಸ ಪ್ರಯೋಗ. 100 ದಿನಗಳ ಕಾಲ ಮನರಂಜನೆ ನೀಡುತ್ತಿದ್ದ ಬಿಗ್​ ಬಾಸ್​ಗೂ ಇದಕ್ಕೂ ತುಂಬಾನೇ ವ್ಯತ್ಯಾಸವಿದೆ. ಆದರೂ ಮನರಂಜನೆಗೆ ಯಾವುದೇ ಕೊರತೆ ಆಗಿಲ್ಲ. ಸ್ಪರ್ಧಿಗಳು ಆರು ದಿನಗಳ ಕಾಲ ಮನೆಯಲ್ಲಿ ಕಳೆದು ಬಂದಿದ್ದನ್ನು ಕಲರ್ಸ್​ ಕನ್ನಡ ವಾಹಿನಿಯಲ್ಲಿ ಮೂರು ವಾರಗಳ ಕಾಲ ಪ್ರಸಾರ ಮಾಡಲಾಗಿದೆ. ಈಗ ಏನಿದ್ದರೂ ಸುದೀಪ್​ ಬಿಗ್​ ಬಾಸ್ ವೇದಿಕೆ​ ಏರುವ ಸಮಯ.

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಸುದೀಪ್​ ನಿರೂಪಣೆಯನ್ನು ಇಷ್ಟಪಡದವರಿಲ್ಲ. ಸುದೀಪ್​ ಅವರನ್ನು ನೋಡುವ ಉದ್ದೇಶದಿಂದಲೇ ಬಿಗ್​ ಬಾಸ್​ ನೋಡುವವರ ಸಂಖ್ಯೆ ದೊಡ್ಡದಿದೆ. ಈಗ ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ. ಶನಿವಾರ (ಸೆಪ್ಟೆಂಬರ್​ 4) ಮತ್ತು ಭಾನುವಾರ (ಸೆಪ್ಟೆಂಬರ್​ 5) ಸುದೀಪ್​ ನಿರೂಪಣೆ ಮಾಡಿರುವ ಎಪಿಸೋಡ್​ ಪ್ರಸಾರವಾಗಲಿದೆ. ಇದನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ.

ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸುದೀಪ್​ ನಿರೂಪಣೆಯ ಎಪಿಸೋಡ್​ನ ಶೂಟಿಂಗ್​ ಪೂರ್ಣಗೊಳಿಸಿದೆ. ಅದನ್ನು, ಈಗ ಪ್ರಸಾರ ಮಾಡಲಾಗುತ್ತಿದೆ. ಕಳೆದ ಒಂದು ವಾರಗಳಿಂದ ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಸುದೀಪ್​ ಲುಕ್​ ಹಾಗೂ ಮಾತುಗಳು ವೀಕ್ಷಕರಿಗೆ ಇಷ್ಟವಾಗುತ್ತಿದ್ದು, ಫುಲ್​ ಎಪಿಸೋಡ್​ ಪ್ರಸಾರಕ್ಕಾಗಿ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಸುದೀಪ್​ ನಿರೂಪಣೆ ಮಾಡುವ ಬಿಗ್​ ಬಾಸ್​ ಎಪಿಸೋಡ್​ಗಳು ರಾತ್ರಿ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಸಮಯ ಬದಲಾಗಿದೆ. ಮಧ್ಯಾಹ್ನ ಮೂರು ಗಂಟೆಗೇ ಸುದೀಪ್​ ಎಂಟ್ರಿ ಆಗಲಿದೆ. ರಾತ್ರಿ ಬೇರೆಬೇರೆ ಕಾರ್ಯಕ್ರಮಗಳು ಶೆಡ್ಯೂಲ್​ ಆಗಿರುವುದರಿಂದ ವಾಹಿನಿ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ:

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು