AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ
ಕಿಚ್ಚ ಸುದೀಪ್​​
TV9 Web
| Edited By: |

Updated on: Sep 04, 2021 | 7:22 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಆರಂಭವಾಗಿದ್ದು ಬಿಗ್​ ಬಾಸ್​ ಮಿನಿ ಸೀಸನ್​. ಕಲರ್ಸ್​ ಕನ್ನಡ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಮಿನಿ ಬಿಗ್​ ಬಾಸ್​ ನಡೆಸಲಾಗಿದೆ. ಇದು ಕನ್ನಡದ ಪಾಲಿಗೆ ಹೊಸ ಪ್ರಯೋಗ. 100 ದಿನಗಳ ಕಾಲ ಮನರಂಜನೆ ನೀಡುತ್ತಿದ್ದ ಬಿಗ್​ ಬಾಸ್​ಗೂ ಇದಕ್ಕೂ ತುಂಬಾನೇ ವ್ಯತ್ಯಾಸವಿದೆ. ಆದರೂ ಮನರಂಜನೆಗೆ ಯಾವುದೇ ಕೊರತೆ ಆಗಿಲ್ಲ. ಸ್ಪರ್ಧಿಗಳು ಆರು ದಿನಗಳ ಕಾಲ ಮನೆಯಲ್ಲಿ ಕಳೆದು ಬಂದಿದ್ದನ್ನು ಕಲರ್ಸ್​ ಕನ್ನಡ ವಾಹಿನಿಯಲ್ಲಿ ಮೂರು ವಾರಗಳ ಕಾಲ ಪ್ರಸಾರ ಮಾಡಲಾಗಿದೆ. ಈಗ ಏನಿದ್ದರೂ ಸುದೀಪ್​ ಬಿಗ್​ ಬಾಸ್ ವೇದಿಕೆ​ ಏರುವ ಸಮಯ.

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಸುದೀಪ್​ ನಿರೂಪಣೆಯನ್ನು ಇಷ್ಟಪಡದವರಿಲ್ಲ. ಸುದೀಪ್​ ಅವರನ್ನು ನೋಡುವ ಉದ್ದೇಶದಿಂದಲೇ ಬಿಗ್​ ಬಾಸ್​ ನೋಡುವವರ ಸಂಖ್ಯೆ ದೊಡ್ಡದಿದೆ. ಈಗ ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ. ಶನಿವಾರ (ಸೆಪ್ಟೆಂಬರ್​ 4) ಮತ್ತು ಭಾನುವಾರ (ಸೆಪ್ಟೆಂಬರ್​ 5) ಸುದೀಪ್​ ನಿರೂಪಣೆ ಮಾಡಿರುವ ಎಪಿಸೋಡ್​ ಪ್ರಸಾರವಾಗಲಿದೆ. ಇದನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ.

ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸುದೀಪ್​ ನಿರೂಪಣೆಯ ಎಪಿಸೋಡ್​ನ ಶೂಟಿಂಗ್​ ಪೂರ್ಣಗೊಳಿಸಿದೆ. ಅದನ್ನು, ಈಗ ಪ್ರಸಾರ ಮಾಡಲಾಗುತ್ತಿದೆ. ಕಳೆದ ಒಂದು ವಾರಗಳಿಂದ ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಸುದೀಪ್​ ಲುಕ್​ ಹಾಗೂ ಮಾತುಗಳು ವೀಕ್ಷಕರಿಗೆ ಇಷ್ಟವಾಗುತ್ತಿದ್ದು, ಫುಲ್​ ಎಪಿಸೋಡ್​ ಪ್ರಸಾರಕ್ಕಾಗಿ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಸುದೀಪ್​ ನಿರೂಪಣೆ ಮಾಡುವ ಬಿಗ್​ ಬಾಸ್​ ಎಪಿಸೋಡ್​ಗಳು ರಾತ್ರಿ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಸಮಯ ಬದಲಾಗಿದೆ. ಮಧ್ಯಾಹ್ನ ಮೂರು ಗಂಟೆಗೇ ಸುದೀಪ್​ ಎಂಟ್ರಿ ಆಗಲಿದೆ. ರಾತ್ರಿ ಬೇರೆಬೇರೆ ಕಾರ್ಯಕ್ರಮಗಳು ಶೆಡ್ಯೂಲ್​ ಆಗಿರುವುದರಿಂದ ವಾಹಿನಿ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ:

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು