AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ.

Kichcha Sudeep: ಕಿಚ್ಚ ಸುದೀಪ್​​ ಆಗಮನಕ್ಕೆ ಸಿದ್ಧವಾಯ್ತು ಬಿಗ್​ ಬಾಸ್​ ವೇದಿಕೆ
ಕಿಚ್ಚ ಸುದೀಪ್​​
TV9 Web
| Edited By: |

Updated on: Sep 04, 2021 | 7:22 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಆರಂಭವಾಗಿದ್ದು ಬಿಗ್​ ಬಾಸ್​ ಮಿನಿ ಸೀಸನ್​. ಕಲರ್ಸ್​ ಕನ್ನಡ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಮಿನಿ ಬಿಗ್​ ಬಾಸ್​ ನಡೆಸಲಾಗಿದೆ. ಇದು ಕನ್ನಡದ ಪಾಲಿಗೆ ಹೊಸ ಪ್ರಯೋಗ. 100 ದಿನಗಳ ಕಾಲ ಮನರಂಜನೆ ನೀಡುತ್ತಿದ್ದ ಬಿಗ್​ ಬಾಸ್​ಗೂ ಇದಕ್ಕೂ ತುಂಬಾನೇ ವ್ಯತ್ಯಾಸವಿದೆ. ಆದರೂ ಮನರಂಜನೆಗೆ ಯಾವುದೇ ಕೊರತೆ ಆಗಿಲ್ಲ. ಸ್ಪರ್ಧಿಗಳು ಆರು ದಿನಗಳ ಕಾಲ ಮನೆಯಲ್ಲಿ ಕಳೆದು ಬಂದಿದ್ದನ್ನು ಕಲರ್ಸ್​ ಕನ್ನಡ ವಾಹಿನಿಯಲ್ಲಿ ಮೂರು ವಾರಗಳ ಕಾಲ ಪ್ರಸಾರ ಮಾಡಲಾಗಿದೆ. ಈಗ ಏನಿದ್ದರೂ ಸುದೀಪ್​ ಬಿಗ್​ ಬಾಸ್ ವೇದಿಕೆ​ ಏರುವ ಸಮಯ.

ಕನ್ನಡ ಬಿಗ್​ ಬಾಸ್​ನ ಎಂಟು ಸೀಸನ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಖ್ಯಾತಿ ಸುದೀಪ್​ ಅವರಿಗೆ ಇದೆ. ಮುಂದಿನ ಸೀಸನ್​ಗಳನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ. ಸುದೀಪ್​ ನಿರೂಪಣೆಯನ್ನು ಇಷ್ಟಪಡದವರಿಲ್ಲ. ಸುದೀಪ್​ ಅವರನ್ನು ನೋಡುವ ಉದ್ದೇಶದಿಂದಲೇ ಬಿಗ್​ ಬಾಸ್​ ನೋಡುವವರ ಸಂಖ್ಯೆ ದೊಡ್ಡದಿದೆ. ಈಗ ಮಿನಿ ಸೀಸನ್​ ನಿರೂಪಣೆ ಕೂಡ ಅವರೇ  ನಿರ್ವಹಿಸಲಿದ್ದಾರೆ. ಶನಿವಾರ (ಸೆಪ್ಟೆಂಬರ್​ 4) ಮತ್ತು ಭಾನುವಾರ (ಸೆಪ್ಟೆಂಬರ್​ 5) ಸುದೀಪ್​ ನಿರೂಪಣೆ ಮಾಡಿರುವ ಎಪಿಸೋಡ್​ ಪ್ರಸಾರವಾಗಲಿದೆ. ಇದನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ.

ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸುದೀಪ್​ ನಿರೂಪಣೆಯ ಎಪಿಸೋಡ್​ನ ಶೂಟಿಂಗ್​ ಪೂರ್ಣಗೊಳಿಸಿದೆ. ಅದನ್ನು, ಈಗ ಪ್ರಸಾರ ಮಾಡಲಾಗುತ್ತಿದೆ. ಕಳೆದ ಒಂದು ವಾರಗಳಿಂದ ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಸುದೀಪ್​ ಲುಕ್​ ಹಾಗೂ ಮಾತುಗಳು ವೀಕ್ಷಕರಿಗೆ ಇಷ್ಟವಾಗುತ್ತಿದ್ದು, ಫುಲ್​ ಎಪಿಸೋಡ್​ ಪ್ರಸಾರಕ್ಕಾಗಿ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಸುದೀಪ್​ ನಿರೂಪಣೆ ಮಾಡುವ ಬಿಗ್​ ಬಾಸ್​ ಎಪಿಸೋಡ್​ಗಳು ರಾತ್ರಿ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಸಮಯ ಬದಲಾಗಿದೆ. ಮಧ್ಯಾಹ್ನ ಮೂರು ಗಂಟೆಗೇ ಸುದೀಪ್​ ಎಂಟ್ರಿ ಆಗಲಿದೆ. ರಾತ್ರಿ ಬೇರೆಬೇರೆ ಕಾರ್ಯಕ್ರಮಗಳು ಶೆಡ್ಯೂಲ್​ ಆಗಿರುವುದರಿಂದ ವಾಹಿನಿ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ:

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ