ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​

Kichcha Sudeep: ವೀಕ್ಷಕರ ಮನದಲ್ಲಿದ್ದ ಅನುಮಾನಕ್ಕೆ ಕಲರ್ಸ್ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಪೂರ್ಣವಿರಾಮ ಇಟ್ಟಿದ್ದಾರೆ. ಸುದೀಪ್​ ಜೊತೆಗಿನ ಫೋಟೋವೊಂದನ್ನು ​ಹಂಚಿಕೊಂಡು ಅವರು ಗುಡ್​ ನ್ಯೂಸ್​ ನೀಡಿದ್ದಾರೆ.

ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​
ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​
Follow us
| Updated By: ಮದನ್​ ಕುಮಾರ್​

Updated on: Aug 17, 2021 | 9:37 AM

‘ಬಿಗ್​ ಬಾಸ್ ಕನ್ನಡ ಸೀಸನ್​ 8’ ಯಶಸ್ವಿಯಾಗಿ ಮುಗಿಯಿತು. ಮಂಜು ಪಾವಗಡ ವಿನ್ನರ್​ ಆಗುವ ಮೂಲಕ 120 ದಿನಗಳ ಜರ್ನಿಗೆ ತೆರೆ ಎಳೆಯಲಾಯಿತು. ಅದರ ಬೆನ್ನಲ್ಲೇ ಶುರುವಾಗಿದ್ದು ‘ಬಿಗ್ ಬಾಸ್​ ಮಿನಿ ಸೀಸನ್​’​. ಇದು ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಹೊಸತು. ಈ ರೀತಿಯ ಚಿನಕುರಳಿ ಬಿಗ್​ ಬಾಸ್​ ಅನ್ನು ವೀಕ್ಷಕರು ಈ ಹಿಂದೆ ಕಂಡಿರಲಿಲ್ಲ. ಇದೇ ಮೊದಲ ಬಾರಿಗೆ ಕಲರ್ಸ್​ ಕನ್ನಡ ವಾಹಿನಿ ಇಂಥದ್ದೊಂದು ಪ್ರಯತ್ನ ಮಾಡಿದೆ. ಆದರೆ ಈ ಶೋ ನಿರೂಪಣೆ ಮಾಡುವುದು ಯಾರು? ಕಿಚ್ಚ ಸುದೀಪ್​ ಬದಲಿಗೆ ಬೇರೆ ಯಾರಾದರೂ ಬರುತ್ತಾರಾ? ಇಂಥ ಹಲವು ಪ್ರಶ್ನೆಗಳು ವೀಕ್ಷಕರ ಮನದಲ್ಲಿ ಮೂಡಿದ್ದವು. ಅವುಗಳಿಗೆ ಈಗ ಉತ್ತರ ಸಿಕ್ಕಿದೆ.

ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರು ಭಾಗವಹಿಸುತ್ತಿದ್ದಾರೆ. ಅಕುಲ್​ ಬಾಲಾಜಿ, ಕಿರಣ್​ ರಾಜ್​, ಕೌಸ್ತುಭ, ಗಗನ್​ ಚಿನ್ನಪ್ಪ, ಭವ್ಯ, ರಿತ್ವಿಕ್​ ಸೇರಿದಂತೆ ಒಟ್ಟು 15 ಸೆಲೆಬ್ರಿಟಿಗಳು ದೊಡ್ಮನೆ ಪ್ರವೇಶ ಮಾಡಿದ್ದು, ಹಲವು ಟಾಸ್ಕ್​ನಲ್ಲಿ ಪಾಲ್ಗೊಂಡಿದ್ದಾರೆ. ಈ ಶೋಗೂ ಒಂದು ಫಿನಾಲೆ ನಡೆಯಲಿದೆ. ಅದಕ್ಕೆ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ ಎಂಬುದು ಈಗ ಖಚಿತ ಆಗಿದೆ.

ಸುದೀಪ್​ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್​ ರೋಣ’, ‘ಕೋಟಿಗೊಬ್ಬ 3’ ಸಿನಿಮಾಗಳು ಬಿಡುಗಡೆಗೆ ಹತ್ತಿರ ಆಗುತ್ತಿವೆ. ಈ ನಡುವೆ ಅವರು ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗಾಗಿ ಸಮಯ ಹೊಂದಿಸಿಕೊಳ್ಳುತ್ತಾರೋ ಇಲ್ಲವೋ ಎಂಬ ಅನುಮಾನ ಕೆಲವರಿಗೆ ಇತ್ತು. ಅಂಥ ಅನುಮಾನಕ್ಕೆ ಕಲರ್ಸ್ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಪೂರ್ಣವಿರಾಮ ಇಟ್ಟಿದ್ದಾರೆ.

ಸುದೀಪ್​ ಜೊತೆ ತಾವು ಇರುವ ಫೋಟೋವೊಂದನ್ನು ​ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿರುವ ಪರಮ್​ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ‘ಕಿಚ್ಚ ಸುದೀಪ್​ ಅವರೇ ಬಿಗ್​ ಬಾಸ್​ ಮಿನಿ ಸೀಸನ್​ ಫಿನಾಲೆಯನ್ನು ಹೋಸ್ಟ್​ ಮಾಡಲಿದ್ದಾರೆ’ ಎಂದು ಪರಮೇಶ್ವರ ಗುಂಡ್ಕಲ್​ ಅಧಿಕೃತವಾಗಿ ತಿಳಿಸಿದ್ದಾರೆ. ಈ ಶೋನ ಫಿನಾಲೆ ಹೇಗಿರಲಿದೆ? ಎಷ್ಟು ಭಿನ್ನವಾಗಿರಲಿದೆ? ಯಾರು ವಿನ್ನರ್​ ಆಗುತ್ತಾರೆ ಎಂಬುದನ್ನೆಲ್ಲ ತಿಳಿದುಕೊಳ್ಳಲು ಕಿರುತೆರೆ ವೀಕ್ಷಕರು ಕಾಯುತ್ತಿದ್ದಾರೆ. ಧಾರಾವಾಹಿ ನಟ-ನಟಿಯರ ರಿಯಲ್​ ಲೈಫ್​ ವ್ಯಕ್ತಿತ್ವ ಈ ಶೋನಲ್ಲಿ ಅನಾವರಣ ಆಗುತ್ತಿದೆ. ಹಲವು ಇಂಟರೆಸ್ಟಿಂಗ್​ ಕಹಾನಿಗಳು ಹೊರಬರುತ್ತಿವೆ. ಹಾಗಾಗಿ ವೀಕ್ಷಕರಿಗೆ ಈ ಕಾರ್ಯಕ್ರಮ ಇಷ್ಟವಾಗುತ್ತಿದೆ.

ಇದನ್ನೂ ಓದಿ:

ಆನ್​ಲೈನ್​ ಕ್ಲಾಸ್​ ಕಿರಿಕಿರಿ ತಪ್ಪಿಸಲು ಇಲ್ಲಿದೆ ಉಪಾಯ; ಕಿಚ್ಚ ಸುದೀಪ್​ ಟ್ರಸ್ಟ್​ ಕಡೆಯಿಂದ ಮಕ್ಕಳಿಗಾಗಿ ಹೊಸ ಆ್ಯಪ್​

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ