AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ

ಕಿಚ್ಚ ಸುದೀಪ್ ಅವರು 'ಮಾರ್ಕ್' ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಅಭಿಮಾನಿಗಳ ಜೊತೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ. ಸಾಮಾನ್ಯವಾಗಿ ನೂಕುನುಗ್ಗಲು ತಪ್ಪಿಸಲು ಅವರು ಮೊದಲ ದಿನದ ಶೋಗಳನ್ನು ತಪ್ಪಿಸಿಕೊಳ್ಳುತ್ತಾರೆ. ಆದರೆ, 35 ಕೋಟಿ ಗಳಿಸಿ ಸೂಪರ್ ಹಿಟ್ ಆಗಿರುವ 'ಮಾರ್ಕ್' ಚಿತ್ರದ ಯಶಸ್ಸನ್ನು ಫ್ಯಾನ್ಸ್ ಜೊತೆ ಆಚರಿಸಲು ಈ ನಿರ್ಧಾರ ಕೈಗೊಂಡಿದ್ದಾರೆ.

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ
ಮಾರ್ಕ್ ಸಿನಿಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 30, 2025 | 1:25 PM

Share

ನಟ ಕಿಚ್ಚ ಸುದೀಪ್ (Kichcha Sudeep) ಅವರು ಮೊದಲ ದಿನ ಅಭಿಮಾನಿಗಳ ಜೊತೆ ಸಿನಿಮಾ ನೋಡೋದನ್ನು ನಿಲ್ಲಿಸಿ ಬಹಳ ಸಮಯ ಕಳೆದಿದೆ. ನೂಕು ನುಗ್ಗಲು ಉಂಟಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಅವರು ಅವಾಯ್ಡ್ ಮಾಡುತ್ತಾ ಬರುತ್ತಿದ್ದಾರೆ. ಈಗ ‘ಮಾರ್ಕ್’ ಸಿನಿಮಾ ಹಿಟ್ ಆಗಿದ್ದು, ಅವರು ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ‘ಮಾರ್ಕ್’ ವೀಕ್ಷಣೆ ಮಾಡಲಿದ್ದಾರೆ.

ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿಸೆಂಬರ್ 31ರಂದು ಅವರು ಪತ್ನಿ ಪ್ರಿಯಾ, ನಿರ್ದೇಶಕ ವಿಜಯ್ ಕಾರ್ತಿಕೇಯ, ಗಾಯಕ ವಿಜಯ್ ಪ್ರಕಾಶ್ ಹಾಗೂ ಅಭಿಮಾನಿಗಳ ಜೊತೆ ನರ್ತಕಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದರು. ಈ ಬಾರಿ ಡಿಸೆಂಬರ್ 31ರಂದು ಫ್ಯಾನ್ಸ್ ಜೊತೆ ‘ಮಾರ್ಕ್’ ಸಿನಿಮಾ ನೋಡಲಿದ್ದಾರೆ.

ಡಿಸೆಂಬರ್ 31ರಂದು ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬೆಳಿಗ್ಗೆ 10.30ರ ಶೋನ ಸುದೀಪ್ ವೀಕ್ಷಿಸಲಿದ್ದಾರೆ. ಈ ಶೋ ಪೂರ್ಣಗೊಂಡ ಬಳಿಕ ಅವರು ಅಲ್ಲಿಂದ ನೇರವಾಗಿ ಮೈಸೂರಿಗೆ ತೆರಳಲಿದ್ದಾರೆ. ಮೈಸೂರಿನ ಸಂಗಮ ಚಿತ್ರಮಂದಿರದಲ್ಲಿ ಸಂಜೆ 4.30ಕ್ಕೆ ಅಭಿಮಾನಿಗಳ ಜೊತೆ ಸಿನಿಮಾ ನೋಡಲಿದ್ದಾರೆ.

ಈ ಮೊದಲು ಮಾಧ್ಯಮದವರ ಜೊತೆ ಮಾತನಾಡಿದ್ದ ಸುದೀಪ್, ‘ಫಸ್ಟ್​ ಡೇ ಸಿನಿಮಾ ನೋಡ್ತೀರಾ’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದರು. ‘ಸದ್ಯಕ್ಕೆ ಆ ಬಗ್ಗೆ ಆಲೋಚನೆ ಇಲ್ಲ. ಸಿನಿಮಾ ಚೆನ್ನಾಗಿ ಹೋದರೆ ಅಭಿಮಾನಿಗಳ ಜೊತೆ ಡಿಸೆಂಬರ್ 31ರಂದು ಸಿನಿಮಾ ನೋಡುತ್ತೇನೆ’ ಎಂದಿದ್ದರು. ಈಗ ಚಿತ್ರಕ್ಕೆ ಮೆಚ್ಚುಗೆ ಸಿಕ್ಕ ಹಿನ್ನೆಲೆಯಲ್ಲಿ ಅವರು ಫ್ಯಾನ್ಸ್ ಜೊತೆ ‘ಮಾರ್ಕ್’ ಸಿನಿಮಾ ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ನಾಲ್ಕು ದಿನಕ್ಕೆ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಮಾರ್ಕ್’; ದಾಖಲೆ ನಿರ್ಮಾಣ

ಡಿಸೆಂಬರ್ 25ರಂದು ರಿಲೀಸ್ ಆದ ‘ಮಾರ್ಕ್’ ಸಿನಿಮಾ ನಾಲ್ಕು ದಿನಗಳಲ್ಲಿ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಸೂಪರ್ ಹಿಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Tue, 30 December 25

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!