AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

ಬಿಗ್ ಬಾಸ್​ ಗೇಮ್ ಆಡಲು ಒಂದು ಟೀಂ ಮಾಡಿತ್ತು. ಈ ಟೀಂನ ಗುಂಪಾಗಿ ಬದಲು ಮಾಡಿಕೊಂಡಿದ್ದರು ವಿನಯ್. ನಾಮಿನೇಷನ್​ನಿಂದ ಹಿಡಿದು ಎಲ್ಲಾ ವಿಚಾರದಲ್ಲಿ ಗುಂಪುಗಾರಿಕೆ ನಡೆಯುತ್ತಲೇ ಇದೆ. ಈ ಬಗ್ಗೆ ಸುದೀಪ್ ಸಿಟ್ಟಾಗಿದ್ದಾರೆ.

ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 19, 2023 | 10:20 AM

Share

ಬಿಗ್ ಬಾಸ್​ನಲ್ಲಿ ಈ ಬಾರಿ ಓಪನ್ ಆಗಿ ಗುಂಪುಗಾರಿಕೆ ನಡೆಯುತ್ತಲೇ ಇದೆ. ಇದರ ಬಗ್ಗೆ ಸುದೀಪ್ ಅವರು ಎರಡು ವಾರಗಳ ಹಿಂದೆ ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ, ಮನೆ ಮಂದಿ ಇದನ್ನು ಮತ್ತೆ ಮುಂದುವರಿಸಿದ್ದಾರೆ. ವಿನಯ್ ಅವರು ಒಂದು ಗುಂಪು ಮಾಡಿಕೊಂಡಿದ್ದಾರೆ. ಇದರಲ್ಲಿ ಸ್ನೇಹಿತ್ ಹಾಗೂ ನಮ್ರತಾ ಇದ್ದಾರೆ. ಮತ್ತೊಂದು ಗುಂಪಿನಲ್ಲಿ ಕಾರ್ತಿಕ್, ಸಂಗೀತಾ, ತನಿಷಾ (Tanisha) ಇದ್ದಾರೆ. ವರ್ತೂರು ಸಂತೋಷ್, ತುಕಾಲಿ ಸಂತೋಷ್ ಹಾಗೂ ಡ್ರೋನ್ ಪ್ರತಾಪ್ ಕೂಡ ಒಂದು ಗ್ರೂಪ್​ ಮಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ಸುದೀಪ್ ಅಸಮಾಧಾನ ಹೊರಹಾಕಿದ್ದಾರೆ.

ಬಿಗ್ ಬಾಸ್​ ಗೇಮ್ ಆಡಲು ಒಂದು ಟೀಂ ಮಾಡಿತ್ತು. ಈ ಟೀಂನ ಗುಂಪಾಗಿ ಬದಲು ಮಾಡಿಕೊಂಡಿದ್ದರು ವಿನಯ್. ನಾಮಿನೇಷನ್​ನಿಂದ ಹಿಡಿದು ಎಲ್ಲಾ ವಿಚಾರದಲ್ಲಿ ಗುಂಪುಗಾರಿಕೆ ನಡೆಯುತ್ತಲೇ ಇದೆ. ಈ ಬಗ್ಗೆ ಸುದೀಪ್ ಸಿಟ್ಟಾಗಿದ್ದಾರೆ. ಈ ವಿಚಾರದಲ್ಲಿ ವೀಕೆಂಡ್​ನಲ್ಲಿ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

‘ಇಲ್ಲಿ ಗುಂಪುಗಾರಿಕೆ ಮುಂದುವರಿದಿದೆ. ಶೇ. 90 ಜನರು ಇಲ್ಲಿ ಬೇರೆಯವರ ಗೆಲ್ಲಿಸೋಕೆ ಬಂದಿದ್ದೀರಿ. ಯಾರೂ ಇಲ್ಲ ನಿಮ್ಮ ಆಟ ಆಡುತ್ತಿಲ್ಲ. ಒಂಟಿಯಾಗಿ ನಿಂತರೆ ನೀವು ಗೆಲ್ಲುತ್ತೀರಿ ಎನ್ನುವ ನಂಬಿಕೆ ನನಗಂತೂ ಇಲ್ಲ. ನಾಮಿನೇಷನ್ ಎಂದು ಬಂದಾಗ ಒಬ್ಬರ ಹೆಸರನ್ನು ಒಬ್ಬರು ತೆಗೆದುಕೊಳ್ಳಲೇಬೇಕು. ಉಳಿದಿರುವ ವಿಚಾರ ನಿಮಗೆ ಬಿಟ್ಟಿದ್ದು’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: ಕಳಪೆ ಆಟವಾಡಿ ಕೂಲ್​ ಆಗಿರುವ ತನಿಷಾ ಕುಪ್ಪಂಡ; ಇದನ್ನೆಲ್ಲ ನೋಡಿ ಗರಂ ಆದ ವಿನಯ್​ ಗೌಡ

ವಿನಯ್ ತಮ್ಮ ಗುಂಪಿನ ಸಾರಥ್ಯ ವಹಿಸಿದ್ದರು. ಈ ಗುಂಪು ಈಗ ಸಣ್ಣದಾಗುತ್ತಾ ಬರುತ್ತಿದೆ. ಅವರ ಗ್ರೂಪ್​ನಲ್ಲಿದ್ದ ರಕ್ಷಕ್ ಮೊದಲು ಔಟ್ ಆದರು. ಆ ಬಳಿಕ, ಈಶಾನಿ ಕೂಡ ಹೊರ ಹೋದರು. ಇಷ್ಟಾದರೂ ಅವರು ಎಚ್ಚೆತ್ತುಕೊಂಡಿಲ್ಲ. ನಮ್ರತಾ ಅವರು ಈಗಲೂ ವಿನಯ್ ಹಿಂದೆ, ಸ್ನೇಹಿತ್ ಜೊತೆ ಸುತ್ತಾಡುತ್ತಿದ್ದಾರೆ. ಅವರು ಇನ್ನಷ್ಟು ಬದಲಾಗಬೇಕಾದ ಅವಶ್ಯಕತೆ ಇದೆ ಎಂಬುದು ವೀಕ್ಷಕರ ಅಭಿಪ್ರಾಯ. ಕಲರ್ಸ್ ಕನ್ನಡ ವಾಹಿನಿಯಲ್ಲಿ  ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:19 am, Sun, 19 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​