AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದರೆ ಕಾವ್ಯಾ ಹೊರಗೆ ಹೋಗ್ತಾರೆ; ಗಿಲ್ಲಿಗೆ ಎಚ್ಚರಿಸಿದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಕ್ಲೋಸ್ ಆಗಿದ್ದರು. ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ಜೋಡಿ ಆಟ ಒಬ್ಬರ ಮೇಲೆ ಪ್ರಭಾವ ಬೀರಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ಮತ್ತು ರಾಶಿಕಾ ಶೆಟ್ಟಿ ಹಾಗೂ ಸೂರಜ್ ಜೋಡಿಯಾಗಿ ಇದ್ದಾರೆ. ಒಬ್ಬರ ಮೇಲೆ ಮತ್ತೊಬ್ಬರ ಆಟದ ಪ್ರಭಾವ ಬೀಳುತ್ತಲೇ ಇದೆ. ಈ ಬಗ್ಗೆ ಸುದೀಪ್ ಎಚ್ಚರಿಸಿದರು.

ಹೀಗೆ ಆದರೆ ಕಾವ್ಯಾ ಹೊರಗೆ ಹೋಗ್ತಾರೆ; ಗಿಲ್ಲಿಗೆ ಎಚ್ಚರಿಸಿದ ಸುದೀಪ್
ಕಾವ್ಯಾ-ಗಿಲ್ಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 06, 2025 | 10:55 PM

Share

ಬಿಗ್ ಬಾಸ್ ಮನೆಯಲ್ಲಿರುವಾಗ ಹೊರಗಿನ ಜಗತ್ತಿನಿಂದ ದೂರ ಇರಬೇಕಾಗುತ್ತದೆ. ಹೀಗಾಗಿ ಬಿಗ್ ಬಾಸ್ ಮನೆಯ ಒಳಗೆ ಕೆಲವೊಮ್ಮೆ ಸಾಕಷ್ಟು ಫ್ರೆಂಡ್​ಶಿಪ್ ಬೆಳೆಯುತ್ತದೆ. ಈ ಆಟ ಒಬ್ಬರ ಮೇಲೆ ಒಬ್ಬರಿಗೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಇದು ಅವರಿಗೆ ಗೊತ್ತಾಗುವುದೇ ಇಲ್ಲ. ಈಗ ಈ ಬಗ್ಗೆ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ‘ಹೀಗೆ ಆದರೆ ಒಬ್ಬರು ಹೋಗ್ತೀರಿ’ ಎಂದರು.

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಕ್ಲೋಸ್ ಆಗಿದ್ದರು. ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ಜೋಡಿ ಆಟ ಒಬ್ಬರ ಮೇಲೆ ಪ್ರಭಾವ ಬೀರಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ಮತ್ತು ರಾಶಿಕಾ ಶೆಟ್ಟಿ ಹಾಗೂ ಸೂರಜ್ ಜೋಡಿಯಾಗಿ ಇದ್ದಾರೆ. ಒಬ್ಬರ ಮೇಲೆ ಮತ್ತೊಬ್ಬರ ಆಟದ ಪ್ರಭಾವ ಬೀಳುತ್ತಲೇ ಇದೆ. ಈ ಬಗ್ಗೆ ಸುದೀಪ್ ಎಚ್ಚರಿಸಿದರು.

‘ಬಿಗ್ ಬಾಸ್ ಮನೆಯಲ್ಲಿ ಜೋಡಿ ಆಗಿರೋದು ತಪ್ಪಲ್ಲ. ಆದರೆ, ಒಬ್ಬರ ಪ್ರಭಾವ ಮತ್ತೊಬ್ಬರ ಆಟದ ಮೇಲೆ ಪ್ರಭಾವ ಬೀರುತ್ತಿದೆ ಎಂದಾಗ ಒಬ್ಬರು ಮನೆಯಿಂದ ಹೋಗಬಹುದು. ಅದಕ್ಕೆ ನೀವು ಕಾರಣ ಆಗಬಹುದು’ ಎಂದರು. ಜಾನ್ವಿ-ಅಶ್ವಿನಿ ಒಟ್ಟಾಗಿದ್ದರು. ಈಗ ಜಾನ್ವಿ ಹೋಗಿದ್ದಾರೆ. ಈ ಬಗ್ಗೆ ಮಾತನಾಡಿದ ಸುದೀಪ್. ‘ಅಂಚಲ್ಲಿ ಒಬ್ಬರೇ ಕೂತಿದ್ದಾರೆ ನೋಡಿ’ ಎಂದು ಅಶ್ವಿನಿ ಉದಾಹರಣೆ ಕೊಟ್ಟು ಹೇಳಿದರು.

ಗಿಲ್ಲಿ ಬಳಿಯೂ ಈ ವಿಷಯವನ್ನು ಸುದೀಪ್ ಚರ್ಚೆ ಮಾಡಿದರು. ‘ನಿಮ್ಮ (ಕಾವ್ಯಾ-ಗಿಲ್ಲಿ) ಮಧ್ಯೆ ಒಳ್ಳೆಯ ಗೆಳೆತನ ಇರಬಹುದು. ಆದರೆ, ಅವರ ಆಟವನ್ನು  ಅವರಿಗೆ ಆಡೋಕೆ ಬಿಡಿ. ನಿಮ್ಮ ಪ್ರಭಾವದಿಂದ ಅವರು ಹೊರಗೆ ಹೋಗೋ ರೀತಿ ಆದರೆ, ‘ಕಾವು ಹೋಗಿ ಬಾ. ಹೊರಗೆ ಬಂದಮೇಲೆ ಸಿಕ್ತೀನಿ. ಈ ಫ್ರೆಂಡ್​ಶಿಪ್​ನ ಹೀಗೆಯೇ ಮುಂದುವರಿಸೋಣ ಎಂದು ಹೇಳ್ತೀರಾ?’ ಎಂದು ಸುದೀಪ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ‘ಸುದೀಪ್ ಸರ್ ಅದ್ನ ಹೇಳ್ತಿರ್ತಾನೆ’ ಎಂಬ ಹೇಳಿಕೆ; ವಿಡಿಯೋ ಹಾಕಿ ರಜತ್​ಗೆ ಪ್ರಶ್ನೆ ಮಾಡಿದ ಕಿಚ್ಚ ‘ಕಳೆದ 11 ಸೀಸನ್​ಗಳಲ್ಲಿ ಜೋಡಿ ಆಗಿ ಅನೇಕರು ಆಡಿದ್ದಾರೆ. ಆದರೆ, ಅವರೆಲ್ಲರೂ ಮನೆಯಿಂದ ಹೊರ ಹೋಗಿದ್ದಾರೆ. ಅವರಿಗೆ ಗೆಲ್ಲೋಕೆ ಆಗಿಲ್ಲ’ ಎಂದು ಸುದೀಪ್ ಹೇಳಿದರು. ರಾಶಿಕಾ ಹಾಗೂ ಸೂರಜ್​ಗೂ ಈ ಬಗ್ಗೆ ಎಚ್ಚರಿಸಿದರು. ‘ನೀವು ಇಬ್ಬರೂ ಪ್ರತ್ಯೇಕವಾಗಿ ಆಡೋಣ ಎಂದು ಹೇಳ್ತೀರಾ. ಆ ಬಳಿಕ ಮತ್ತೆ ಒಂದಾಗುತ್ತಿರಾ’ ಎಂದರು ಸುದೀಪ್. ಎಲ್ಲರೂ ತಿದ್ದಿಕೊಳ್ಳುವ ಭರವಸೆ ಕೊಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ