AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದರೆ ಕಾವ್ಯಾ ಹೊರಗೆ ಹೋಗ್ತಾರೆ; ಗಿಲ್ಲಿಗೆ ಎಚ್ಚರಿಸಿದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಕ್ಲೋಸ್ ಆಗಿದ್ದರು. ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ಜೋಡಿ ಆಟ ಒಬ್ಬರ ಮೇಲೆ ಪ್ರಭಾವ ಬೀರಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ಮತ್ತು ರಾಶಿಕಾ ಶೆಟ್ಟಿ ಹಾಗೂ ಸೂರಜ್ ಜೋಡಿಯಾಗಿ ಇದ್ದಾರೆ. ಒಬ್ಬರ ಮೇಲೆ ಮತ್ತೊಬ್ಬರ ಆಟದ ಪ್ರಭಾವ ಬೀಳುತ್ತಲೇ ಇದೆ. ಈ ಬಗ್ಗೆ ಸುದೀಪ್ ಎಚ್ಚರಿಸಿದರು.

ಹೀಗೆ ಆದರೆ ಕಾವ್ಯಾ ಹೊರಗೆ ಹೋಗ್ತಾರೆ; ಗಿಲ್ಲಿಗೆ ಎಚ್ಚರಿಸಿದ ಸುದೀಪ್
ಕಾವ್ಯಾ-ಗಿಲ್ಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 06, 2025 | 10:55 PM

Share

ಬಿಗ್ ಬಾಸ್ ಮನೆಯಲ್ಲಿರುವಾಗ ಹೊರಗಿನ ಜಗತ್ತಿನಿಂದ ದೂರ ಇರಬೇಕಾಗುತ್ತದೆ. ಹೀಗಾಗಿ ಬಿಗ್ ಬಾಸ್ ಮನೆಯ ಒಳಗೆ ಕೆಲವೊಮ್ಮೆ ಸಾಕಷ್ಟು ಫ್ರೆಂಡ್​ಶಿಪ್ ಬೆಳೆಯುತ್ತದೆ. ಈ ಆಟ ಒಬ್ಬರ ಮೇಲೆ ಒಬ್ಬರಿಗೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಇದು ಅವರಿಗೆ ಗೊತ್ತಾಗುವುದೇ ಇಲ್ಲ. ಈಗ ಈ ಬಗ್ಗೆ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ‘ಹೀಗೆ ಆದರೆ ಒಬ್ಬರು ಹೋಗ್ತೀರಿ’ ಎಂದರು.

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಕ್ಲೋಸ್ ಆಗಿದ್ದರು. ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ಜೋಡಿ ಆಟ ಒಬ್ಬರ ಮೇಲೆ ಪ್ರಭಾವ ಬೀರಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ಮತ್ತು ರಾಶಿಕಾ ಶೆಟ್ಟಿ ಹಾಗೂ ಸೂರಜ್ ಜೋಡಿಯಾಗಿ ಇದ್ದಾರೆ. ಒಬ್ಬರ ಮೇಲೆ ಮತ್ತೊಬ್ಬರ ಆಟದ ಪ್ರಭಾವ ಬೀಳುತ್ತಲೇ ಇದೆ. ಈ ಬಗ್ಗೆ ಸುದೀಪ್ ಎಚ್ಚರಿಸಿದರು.

‘ಬಿಗ್ ಬಾಸ್ ಮನೆಯಲ್ಲಿ ಜೋಡಿ ಆಗಿರೋದು ತಪ್ಪಲ್ಲ. ಆದರೆ, ಒಬ್ಬರ ಪ್ರಭಾವ ಮತ್ತೊಬ್ಬರ ಆಟದ ಮೇಲೆ ಪ್ರಭಾವ ಬೀರುತ್ತಿದೆ ಎಂದಾಗ ಒಬ್ಬರು ಮನೆಯಿಂದ ಹೋಗಬಹುದು. ಅದಕ್ಕೆ ನೀವು ಕಾರಣ ಆಗಬಹುದು’ ಎಂದರು. ಜಾನ್ವಿ-ಅಶ್ವಿನಿ ಒಟ್ಟಾಗಿದ್ದರು. ಈಗ ಜಾನ್ವಿ ಹೋಗಿದ್ದಾರೆ. ಈ ಬಗ್ಗೆ ಮಾತನಾಡಿದ ಸುದೀಪ್. ‘ಅಂಚಲ್ಲಿ ಒಬ್ಬರೇ ಕೂತಿದ್ದಾರೆ ನೋಡಿ’ ಎಂದು ಅಶ್ವಿನಿ ಉದಾಹರಣೆ ಕೊಟ್ಟು ಹೇಳಿದರು.

ಗಿಲ್ಲಿ ಬಳಿಯೂ ಈ ವಿಷಯವನ್ನು ಸುದೀಪ್ ಚರ್ಚೆ ಮಾಡಿದರು. ‘ನಿಮ್ಮ (ಕಾವ್ಯಾ-ಗಿಲ್ಲಿ) ಮಧ್ಯೆ ಒಳ್ಳೆಯ ಗೆಳೆತನ ಇರಬಹುದು. ಆದರೆ, ಅವರ ಆಟವನ್ನು  ಅವರಿಗೆ ಆಡೋಕೆ ಬಿಡಿ. ನಿಮ್ಮ ಪ್ರಭಾವದಿಂದ ಅವರು ಹೊರಗೆ ಹೋಗೋ ರೀತಿ ಆದರೆ, ‘ಕಾವು ಹೋಗಿ ಬಾ. ಹೊರಗೆ ಬಂದಮೇಲೆ ಸಿಕ್ತೀನಿ. ಈ ಫ್ರೆಂಡ್​ಶಿಪ್​ನ ಹೀಗೆಯೇ ಮುಂದುವರಿಸೋಣ ಎಂದು ಹೇಳ್ತೀರಾ?’ ಎಂದು ಸುದೀಪ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ‘ಸುದೀಪ್ ಸರ್ ಅದ್ನ ಹೇಳ್ತಿರ್ತಾನೆ’ ಎಂಬ ಹೇಳಿಕೆ; ವಿಡಿಯೋ ಹಾಕಿ ರಜತ್​ಗೆ ಪ್ರಶ್ನೆ ಮಾಡಿದ ಕಿಚ್ಚ ‘ಕಳೆದ 11 ಸೀಸನ್​ಗಳಲ್ಲಿ ಜೋಡಿ ಆಗಿ ಅನೇಕರು ಆಡಿದ್ದಾರೆ. ಆದರೆ, ಅವರೆಲ್ಲರೂ ಮನೆಯಿಂದ ಹೊರ ಹೋಗಿದ್ದಾರೆ. ಅವರಿಗೆ ಗೆಲ್ಲೋಕೆ ಆಗಿಲ್ಲ’ ಎಂದು ಸುದೀಪ್ ಹೇಳಿದರು. ರಾಶಿಕಾ ಹಾಗೂ ಸೂರಜ್​ಗೂ ಈ ಬಗ್ಗೆ ಎಚ್ಚರಿಸಿದರು. ‘ನೀವು ಇಬ್ಬರೂ ಪ್ರತ್ಯೇಕವಾಗಿ ಆಡೋಣ ಎಂದು ಹೇಳ್ತೀರಾ. ಆ ಬಳಿಕ ಮತ್ತೆ ಒಂದಾಗುತ್ತಿರಾ’ ಎಂದರು ಸುದೀಪ್. ಎಲ್ಲರೂ ತಿದ್ದಿಕೊಳ್ಳುವ ಭರವಸೆ ಕೊಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!