AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್; ಪ್ಲೇ ಆಗಿತ್ತು ಕಿಚ್ಚನ ವಿಟಿ

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಶೋನ ನಡೆಸಿಕೊಡುತ್ತಿದ್ದಾರೆ. ಈ ಶೋ  ಯಶಸ್ವಿಯಾಗಿ ಸಾಗುತ್ತಿದೆ. ಈ ಮೊದಲು ಅವರು 10 ಟಿವಿ ಶೋಗಳು, ಒಂದು ಒಟಿಟಿ ಶೋ ಹಾಗೂ ಒಂದು ಮಿನಿ ಸೀಸನ್​ನ ನಡೆಸಿಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಅವರು ಯಶಸ್ವಿಯಾಗಿ ನಡೆಸಿಕೊಟ್ಟ ಬಗ್ಗೆ ಅನೇಕರಿಗೆ ಖುಷಿ ಇದೆ.

ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್; ಪ್ಲೇ ಆಗಿತ್ತು ಕಿಚ್ಚನ ವಿಟಿ
ಸುದೀಪ್ ಕುಟುಂಬ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 28, 2024 | 6:30 AM

Share

ಸ್ಪರ್ಧಿಗಳ ಬಿಗ್ ಬಾಸ್ ಜರ್ನಿ ಪೂರ್ಣಗೊಂಡ ಬಳಿಕ ವಿಟಿ ಒಂದನ್ನು ಪ್ಲೇ ಮಾಡಲಾಗುತ್ತದೆ. ಈ ವಿಡಿಯೋದಲ್ಲಿ ಸ್ಪರ್ಧಿಗಳ ಜರ್ನಿ ಬಗ್ಗೆ, ಸ್ಪರ್ಧಿಗಳ ಅಳು ಹಾಗೂ ದುಃಖದ ಬಗ್ಗೆ ಇರುತ್ತದೆ. ಇದೇ ರೀತಿ ಕಿಚ್ಚ ಸುದೀಪ್ ಅವರ ವಿಟಿ ಒಂದು ಪ್ಲೇ ಮಾಡಲಾಗಿತ್ತು. ಇದನ್ನು ನೋಡಿ ಸುದೀಪ್ ಅವರ ಖುಷಿಪಟ್ಟಿದ್ದರು. ಈ ವೇದಿಕೆ ಮೇಲೆ ಸುದೀಪ್ ಜೊತೆ ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಕೂಡ ಇದ್ದರು ಎಂಬುದು ಖುಷಿಯ ವಿಚಾರ ಆಗಿತ್ತು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಶೋನ ನಡೆಸಿಕೊಡುತ್ತಿದ್ದಾರೆ. ಈ ಶೋ  ಯಶಸ್ವಿಯಾಗಿ ಸಾಗುತ್ತಿದೆ. ಈ ಮೊದಲು ಅವರು 10 ಟಿವಿ ಶೋಗಳು, ಒಂದು ಒಟಿಟಿ ಶೋ ಹಾಗೂ ಒಂದು ಮಿನಿ ಸೀಸನ್​ನ ನಡೆಸಿಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಅವರು ಯಶಸ್ವಿಯಾಗಿ ನಡೆಸಿಕೊಟ್ಟ ಬಗ್ಗೆ ಅನೇಕರಿಗೆ ಖುಷಿ ಇದೆ.

ಈ ಮೊದಲು ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಹಾಗೂ ಸಾನ್ವಿ ಒಟ್ಟಾಗಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ಚಿಕ್ಕದಾಗಿದ್ದರು. ವಿಟಿ ಪ್ಲೇ ಮಾಡುವಾಗ, ‘ನಾನು ಅಳೋ ಮೂಡ್​ನಲ್ಲಿ ಇಲ್ಲ’ ಎಂದು ಹೇಳಿದ್ದರು ಪ್ರಿಯಾ. ಹೀಗಾಗಿ, ಫನ್ ಆಗಿರೋ ವಿಡಿಯೋ ಹಂಚಿಕೊಂಡಿದ್ದರು. ಸುದೀಪ್ ಅವರು ಸಾಕಷ್ಟು ಬಾರಿ ರೀ ಟೇಕ್​ಗಳನ್ನು ತೆಗೆದುಕೊಳ್ಳೋ ಪರಿಸ್ಥಿತಿ ಬರುತ್ತದೆ. ಅದನ್ನು ತೋರಿಸಲಾಗಿದೆ.

ಆ ಬಳಿಕ ಮೊದಲ ಸೀಸನ್​ನಿಂದ ಇಲ್ಲಿಯವರೆಗೆ ಏನಾಯ್ತು ಎನ್ನುವ ಪ್ರೋಮೋನ ಹಂಚಿಕೊಳ್ಳಲಾಗಿತ್ತು. ಈ ವಿಡಿಯೋ ಮತ್ತೆ ವೈರಲ್ ಆಗುತ್ತಿದೆ. ಈ ಬಾರಿ ಸುದೀಪ್ ಅವರದ್ದು ಕೊನೆಯ ಸೀಸನ್ ಎನ್ನಲಾಗುತ್ತಿದೆ. ಹೀಗಾಗಿ, ಈ ಬಾರಿ ವಿಶೇಷ ವಿಡಿಯೋ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯೆಯೇ ಶೋ ತೊರೆಯುವ ಘೋಷಣೆ ಮಾಡಿದ್ದಾರೆ. ಇದು ಅವರ ಕೊನೆಯ ಸೀಸನ್ ಆಗಲಿದೆ. ಮುಂದೆ ಯಾರು ಈ ಶೋನ ನಿರೂಪಣೆ ಮಾಡುತ್ತರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?