AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಭಾನುವಾರವೂ ಇಲ್ಲ ಕಿಚ್ಚ ಸುದೀಪ್​; ಈ ವಾರದ ಎಲಿಮಿನೇಷನ್ ಕಥೆ ಏನು?

ಸುದೀಪ್ ವಿದೇಶದಲ್ಲೇ ಇದ್ದಾರೆ. ಈ ಕಾರಣಕ್ಕೆ ಅವರು ಈ ವಾರ ಬಿಗ್ ಬಾಸ್​ ನಡೆಸಿಕೊಡೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪ್ರತಿ ಶುಕ್ರವಾರ ನಡೆಯುತ್ತಿದ್ದ ಕಳಪೆ, ಉತ್ತಮ ಪ್ರಕ್ರಿಯೆ ಶನಿವಾರ ನಡೆದಿದೆ.

ಬಿಗ್ ಬಾಸ್​ನಲ್ಲಿ ಭಾನುವಾರವೂ ಇಲ್ಲ ಕಿಚ್ಚ ಸುದೀಪ್​; ಈ ವಾರದ ಎಲಿಮಿನೇಷನ್ ಕಥೆ ಏನು?
ಸುದೀಪ್
TV9 Web
| Edited By: |

Updated on: Oct 23, 2022 | 4:10 PM

Share

ಕಿಚ್ಚ ಸುದೀಪ್ (Kichcha Sudeep) ಅವರ ನಿರೂಪಣೆ ಕಣ್ತುಂಬಿಕೊಳ್ಳಲೆಂದೇ ‘ಬಿಗ್ ಬಾಸ್​’ ನೋಡುವವರು ಅನೇಕರಿದ್ದಾರೆ. ಅವರಿಗೆ ಈ ವಾರ ನಿರಾಸೆ ಉಂಟಾಗಿದೆ. ಕಿಚ್ಚ ಸುದೀಪ್ ಅವರು ಶನಿವಾರದ ಎಪಿಸೋಡ್​ಗೆ ಗೈರಾಗಿದ್ದರು. ಅದೇ ರೀತಿ ಭಾನುವಾರದ ಎಪಿಸೋಡ್​ನಲ್ಲೂ ಸುದೀಪ್ ಕಾಣಿಸಿಕೊಂಡಿಲ್ಲ. ಈ ಕಾರಣಕ್ಕೆ ಎಲಿಮಿನೇಷನ್​ಗೆ ಕಲರ್ಸ್​ ಕನ್ನಡ (Colors Kannada) ವಾಹಿನಿಯವರು ಹಳೆಯ ತಂತ್ರವನ್ನು ಬಳಕೆ ಮಾಡಿಕೊಂಡಿದ್ದಾರೆ. ವೀಕೆಂಡ್​ನಲ್ಲಿ ಸುದೀಪ್ ಇಲ್ಲದೆ ಬಿಗ್ ಬಾಸ್ ನೋಡೋದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಪತ್ನಿ ಪ್ರಿಯಾ ಜತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿದ್ದಾರೆ. ಸದ್ಯ ಸುದೀಪ್ ವಿದೇಶದಲ್ಲೇ ಇದ್ದಾರೆ. ಈ ಕಾರಣಕ್ಕೆ ಅವರು ಈ ವಾರ ಬಿಗ್ ಬಾಸ್​ ನಡೆಸಿಕೊಡೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪ್ರತಿ ಶುಕ್ರವಾರ ನಡೆಯುತ್ತಿದ್ದ ಕಳಪೆ, ಉತ್ತಮ ಪ್ರಕ್ರಿಯೆ ಶನಿವಾರ ನಡೆದಿದೆ. ಭಾನುವಾರದ ಎಲಿಮಿನೇಷನ್ ಪ್ರಕ್ರಿಯೆಗೆ ಹಳೆಯ ಮೆಥಡ್ ಬಳಕೆ ಮಾಡಲಾಗಿದೆ.

ಇದನ್ನೂ ಓದಿ
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

ಕಳೆದ ವರ್ಷ ಬಿಗ್ ಬಾಸ್ ನಡೆಯುತ್ತಿರುವಾಗಲೇ ಕೊವಿಡ್ ಕಾಣಿಸಿಕೊಂಡಿತ್ತು. ಈ ವೇಳೆ ಸುದೀಪ್​ಗೂ ಕೊರೊನಾ ಅಂಟಿತ್ತು. ಹೀಗಾಗಿ ಅವರು ಕೆಲ ವಾರ ಬಿಗ್ ಬಾಸ್​ ನಿರೂಪಣೆಗೆ ಬಂದಿರಲಿಲ್ಲ. ಆಗ ವಿವಿಧ ರೀತಿಯ ಟಾಸ್ಕ್​ಗಳನ್ನು ನೀಡಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗಿತ್ತು. ಈ ಬಾರಿಯೂ ಅದೇ ರೀತಿ ಮಾಡಲು ನಿರ್ಧರಿಸಲಾಗಿದೆ. ಈ ವಾರ ನಾಮಿನೇಷನ್​​ಗೆ ಒಳಗಾದವರಿಗೆ ವಿವಿಧ ರೀತಿಯ ಟಾಸ್ಕ್​ ನೀಡಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗಿದೆ. ಈ ಕುರಿತು ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಈ ಮೂಲಕ ಸುದೀಪ್ ಈ ವಾರವೂ ಬರೋದಿಲ್ಲ ಎಂಬುದು ಖಚಿತವಾಗಿದೆ.

ಇದನ್ನೂ ಓದಿ: BBK9: ಮ್ಯಾಚ್​ ಫಿಕ್ಸಿಂಗ್​ ಆರೋಪದ ಮರು ವಾರವೇ ಬಿಗ್ ಬಾಸ್​ ಶೋಗೆ ಸುದೀಪ್​ ಗೈರು; ಮುನಿಸಿಕೊಂಡ್ರಾ ಕಿಚ್ಚ?

ಈ ವಾರ ಮಯೂರಿ, ಆರ್ಯವರ್ಧನ್ ಗುರೂಜಿ, ಪ್ರಶಾಂತ್ ಸಂಬರ್ಗಿ, ಕಾವ್ಯಶ್ರೀ ಗೌಡ, ನೇಹಾ ಗೌಡ, ಸಾನ್ಯಾ ಐಯ್ಯರ್, ರೂಪೇಶ್ ಶೆಟ್ಟಿ ಹಾಗೂ ದಿವ್ಯಾ ಉರುಡುಗ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈ ಪೈಕಿ ಯಾರು ಹೊರಹೋಗುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!