AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ವೆಕೇಶನ್ ಮುಗಿಸಿದವರಿಗೆ ಸುದೀಪ್ ಕ್ಲಾಸ್; ಈ ವಾರವೂ ಕಿಚ್ಚನ ಪಾಠ

ಈ ವಾರದ ಬಿಗ್ ಬಾಸ್ ಕನ್ನಡದಲ್ಲಿ ಕುಟುಂಬ ಸದಸ್ಯರ ಭೇಟಿಯ ನಂತರ, ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಲಿದ್ದಾರೆ. ಮನೆಯಲ್ಲಿ ನಡೆದ ಘಟನೆಗಳು ಮತ್ತು ಸ್ಪರ್ಧಿಗಳ ನಡವಳಿಕೆಗಳ ಕುರಿತು ಅವರು ಚರ್ಚಿಸಲಿದ್ದಾರೆ. ಪ್ರಮುಖವಾಗಿ ಗೌತಮಿ ಮತ್ತು ಮಂಜು ಕುಟುಂಬದ ವಿಚಾರ ಪ್ರಮುಖವಾಗಿ ಚರ್ಚೆಯಾಗಲಿದೆ.

ಬಿಗ್ ಬಾಸ್ ಮನೆಯಲ್ಲಿ ವೆಕೇಶನ್ ಮುಗಿಸಿದವರಿಗೆ ಸುದೀಪ್ ಕ್ಲಾಸ್; ಈ ವಾರವೂ ಕಿಚ್ಚನ ಪಾಠ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 04, 2025 | 2:52 PM

Share

ಕಿಚ್ಚ ಸುದೀಪ್ ಅವರು ಪ್ರತಿ ವಾರ ಬಿಗ್ ಬಾಸ್​ನಲ್ಲಿ ಶನಿವಾರದ ಎಪಿಸೋಡ್​ನ ಸ್ಪರ್ಧಿಗಳಿಗೆ ಬುದ್ಧಿವಾದ ಹೇಳಲು ಬಯಸಿದರೆ ಭಾನುವಾರದ ಎಪಿಸೋಡ್​ನ ಫನ್ ಆಗಿ ನಡೆಸಿಕೊಡುತ್ತಾರೆ. ಈ ವಾರ ದೊಡ್ಮನೆಯಲ್ಲಿ ಎಲ್ಲವೂ ಫನ್ ಆಗಿ ನಡೆಯಿತು. ಮನೆಯಿಂದ ಸ್ಪರ್ಧಿಗಳ ಕುಟುಂಬದವರು ಬಂದಿದ್ದರು. ಹೀಗಾಗಿ, ಎಲ್ಲರೂ ಸಖತ್ ಜಾಲಿಯಾಗಿದ್ದರು. ಹೀಗಾಗಿ, ವೀಕೆಂಡ್ ಎಪಿಸೋಡ್ ಫನ್ ಆಗಿರುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಈ ವಾರವೂ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಳ್ಳೋದು ಪಕ್ಕಾ ಆಗಿದೆ.

ಕಿಚ್ಚ ಸುದೀಪ್ ಶನಿವಾರ ಬೆಳಿಗ್ಗೆಯೇ ವೇದಿಕೆ ಏರಿ ಎಪಿಸೋಡ್ ನಡೆಸಿಕೊಡುತ್ತಾರೆ. ಇದರ ಮೊದಲ ಪ್ರೋಮೋನ ಮಧ್ಯಾಹ್ನ ಹಂಚಿಕೊಳ್ಳಲಾಗುತ್ತದೆ. ಆ ಎಪಿಸೋಡ್​ನಲ್ಲಿ ಸುದೀಪ್ ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ? ಅವರು ಕ್ಲಾಸ್ ತೆಗೆದುಕೊಳ್ಳುವ ಮೂಡ್​ನಲ್ಲಿದ್ದಾರಾ ಅಥವಾ ಸೈಲೆಂಟ್ ಆಗಿದ್ದಾರಾ ಎಂಬಿತ್ಯಾದಿ ಸೂಚನೆ ಸಿಗುತ್ತದೆ. ಈಗ ರಿಲೀಸ್ ಆಗಿರೋ ಪ್ರೋಮೋ ನೋಡಿದರೆ ಸುದೀಪ್​ ಕ್ಲಾಸ್ ತೆಗೆದುಕೊಳ್ಳೋದು ಪಕ್ಕಾ ಆಗಿದೆ.

ಫ್ಯಾಮಿಲಿ ವೀಕ್ ಹಾಗೂ ಸುದೀಪ್ ಅವರು ಮಾಡಿಕೊಟ್ಟ ಅಡುಗೆಯ ಕಾರಣಕ್ಕೆ ಎಲ್ಲವೂ ಫನ್ ಆಗಿತ್ತು. ಸ್ಪರ್ಧೆ ಎಂಬುದನ್ನು ಮರೆತು ಎಲ್ಲರೂ ಒಟ್ಟಾಗಿ ಬೆರೆತರು. ಕುಟುಂಬದ ಜೊತೆ ಸಮಯ ಕಳೆದರು. ಇದನ್ನೇ ಇಟ್ಟುಕೊಂಡು ಸುದೀಪ್ ಈ ವಾರದ ಎಪಿಸೋಡ್ ನಡೆಸಕೊಡಲಿದ್ದಾರೆ. ‘ಈ ವಾರ ಸ್ಪರ್ಧಿಗಳು ರಕ್ತ ಸಂಬಂಧಿಗಳನ್ನು ಭೇಟಿ ಮಾಡಿದರು. ಮನೆ ಊಟ ತಿಂದು ಮೈಮರೆತವರು ಯಾರು? ಮನೆಯವರ ಮಾತು ಕೇಳಿ ಎಚ್ಚರ ಆದವರು ಯಾರು’ ಎಂದು ಸುದೀಪ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್’ ಸಿನಿಮಾ ಗಳಿಕೆ ಬೀಟ್ ಮಾಡುವ ಸನಿಹದಲ್ಲಿದೆ ಸುದೀಪ್ ನಟನೆಯ ‘ಮ್ಯಾಕ್ಸ್’

ಈ ವಾರ ಮನೆಯಿಂದ ಬಂದ ಅನೇಕರು ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮಂಜು ಕುಟುಂಬದವರು ಗೌತಮಿ ಜೊತೆಗಿನ ಬಾಂಧವ್ಯ ವಿಚಾರವನ್ನು ಪ್ರಶ್ನೆ ಮಾಡಿದ್ದಾರೆ. ಗೌತಮಿ ಪತಿ ಮಂಜು ಅವರಿಂದ ದೂರ ಇರುವಂತೆ ಪತ್ನಿಗೆ ಸಲಹೆ ನೀಡಿದ್ದಾರೆ. ಹೀಗಾಗಿ, ಸ್ಪರ್ಧಿಗಳಿಗೆ ಒಂದಷ್ಟು ಇನ್​ಪುಟ್ ಅಂತೂ ಸಿಕ್ಕಿದೆ. ಈ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​