Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ವೆಕೇಶನ್ ಮುಗಿಸಿದವರಿಗೆ ಸುದೀಪ್ ಕ್ಲಾಸ್; ಈ ವಾರವೂ ಕಿಚ್ಚನ ಪಾಠ

ಈ ವಾರದ ಬಿಗ್ ಬಾಸ್ ಕನ್ನಡದಲ್ಲಿ ಕುಟುಂಬ ಸದಸ್ಯರ ಭೇಟಿಯ ನಂತರ, ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಲಿದ್ದಾರೆ. ಮನೆಯಲ್ಲಿ ನಡೆದ ಘಟನೆಗಳು ಮತ್ತು ಸ್ಪರ್ಧಿಗಳ ನಡವಳಿಕೆಗಳ ಕುರಿತು ಅವರು ಚರ್ಚಿಸಲಿದ್ದಾರೆ. ಪ್ರಮುಖವಾಗಿ ಗೌತಮಿ ಮತ್ತು ಮಂಜು ಕುಟುಂಬದ ವಿಚಾರ ಪ್ರಮುಖವಾಗಿ ಚರ್ಚೆಯಾಗಲಿದೆ.

ಬಿಗ್ ಬಾಸ್ ಮನೆಯಲ್ಲಿ ವೆಕೇಶನ್ ಮುಗಿಸಿದವರಿಗೆ ಸುದೀಪ್ ಕ್ಲಾಸ್; ಈ ವಾರವೂ ಕಿಚ್ಚನ ಪಾಠ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Jan 04, 2025 | 2:52 PM

ಕಿಚ್ಚ ಸುದೀಪ್ ಅವರು ಪ್ರತಿ ವಾರ ಬಿಗ್ ಬಾಸ್​ನಲ್ಲಿ ಶನಿವಾರದ ಎಪಿಸೋಡ್​ನ ಸ್ಪರ್ಧಿಗಳಿಗೆ ಬುದ್ಧಿವಾದ ಹೇಳಲು ಬಯಸಿದರೆ ಭಾನುವಾರದ ಎಪಿಸೋಡ್​ನ ಫನ್ ಆಗಿ ನಡೆಸಿಕೊಡುತ್ತಾರೆ. ಈ ವಾರ ದೊಡ್ಮನೆಯಲ್ಲಿ ಎಲ್ಲವೂ ಫನ್ ಆಗಿ ನಡೆಯಿತು. ಮನೆಯಿಂದ ಸ್ಪರ್ಧಿಗಳ ಕುಟುಂಬದವರು ಬಂದಿದ್ದರು. ಹೀಗಾಗಿ, ಎಲ್ಲರೂ ಸಖತ್ ಜಾಲಿಯಾಗಿದ್ದರು. ಹೀಗಾಗಿ, ವೀಕೆಂಡ್ ಎಪಿಸೋಡ್ ಫನ್ ಆಗಿರುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಈ ವಾರವೂ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಳ್ಳೋದು ಪಕ್ಕಾ ಆಗಿದೆ.

ಕಿಚ್ಚ ಸುದೀಪ್ ಶನಿವಾರ ಬೆಳಿಗ್ಗೆಯೇ ವೇದಿಕೆ ಏರಿ ಎಪಿಸೋಡ್ ನಡೆಸಿಕೊಡುತ್ತಾರೆ. ಇದರ ಮೊದಲ ಪ್ರೋಮೋನ ಮಧ್ಯಾಹ್ನ ಹಂಚಿಕೊಳ್ಳಲಾಗುತ್ತದೆ. ಆ ಎಪಿಸೋಡ್​ನಲ್ಲಿ ಸುದೀಪ್ ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ? ಅವರು ಕ್ಲಾಸ್ ತೆಗೆದುಕೊಳ್ಳುವ ಮೂಡ್​ನಲ್ಲಿದ್ದಾರಾ ಅಥವಾ ಸೈಲೆಂಟ್ ಆಗಿದ್ದಾರಾ ಎಂಬಿತ್ಯಾದಿ ಸೂಚನೆ ಸಿಗುತ್ತದೆ. ಈಗ ರಿಲೀಸ್ ಆಗಿರೋ ಪ್ರೋಮೋ ನೋಡಿದರೆ ಸುದೀಪ್​ ಕ್ಲಾಸ್ ತೆಗೆದುಕೊಳ್ಳೋದು ಪಕ್ಕಾ ಆಗಿದೆ.

ಫ್ಯಾಮಿಲಿ ವೀಕ್ ಹಾಗೂ ಸುದೀಪ್ ಅವರು ಮಾಡಿಕೊಟ್ಟ ಅಡುಗೆಯ ಕಾರಣಕ್ಕೆ ಎಲ್ಲವೂ ಫನ್ ಆಗಿತ್ತು. ಸ್ಪರ್ಧೆ ಎಂಬುದನ್ನು ಮರೆತು ಎಲ್ಲರೂ ಒಟ್ಟಾಗಿ ಬೆರೆತರು. ಕುಟುಂಬದ ಜೊತೆ ಸಮಯ ಕಳೆದರು. ಇದನ್ನೇ ಇಟ್ಟುಕೊಂಡು ಸುದೀಪ್ ಈ ವಾರದ ಎಪಿಸೋಡ್ ನಡೆಸಕೊಡಲಿದ್ದಾರೆ. ‘ಈ ವಾರ ಸ್ಪರ್ಧಿಗಳು ರಕ್ತ ಸಂಬಂಧಿಗಳನ್ನು ಭೇಟಿ ಮಾಡಿದರು. ಮನೆ ಊಟ ತಿಂದು ಮೈಮರೆತವರು ಯಾರು? ಮನೆಯವರ ಮಾತು ಕೇಳಿ ಎಚ್ಚರ ಆದವರು ಯಾರು’ ಎಂದು ಸುದೀಪ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್’ ಸಿನಿಮಾ ಗಳಿಕೆ ಬೀಟ್ ಮಾಡುವ ಸನಿಹದಲ್ಲಿದೆ ಸುದೀಪ್ ನಟನೆಯ ‘ಮ್ಯಾಕ್ಸ್’

ಈ ವಾರ ಮನೆಯಿಂದ ಬಂದ ಅನೇಕರು ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮಂಜು ಕುಟುಂಬದವರು ಗೌತಮಿ ಜೊತೆಗಿನ ಬಾಂಧವ್ಯ ವಿಚಾರವನ್ನು ಪ್ರಶ್ನೆ ಮಾಡಿದ್ದಾರೆ. ಗೌತಮಿ ಪತಿ ಮಂಜು ಅವರಿಂದ ದೂರ ಇರುವಂತೆ ಪತ್ನಿಗೆ ಸಲಹೆ ನೀಡಿದ್ದಾರೆ. ಹೀಗಾಗಿ, ಸ್ಪರ್ಧಿಗಳಿಗೆ ಒಂದಷ್ಟು ಇನ್​ಪುಟ್ ಅಂತೂ ಸಿಕ್ಕಿದೆ. ಈ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ