AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಆಟದ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದ ಸುದೀಪ್; ಎಚ್ಚೆತ್ತುಕೊಳ್ಳಲೇ ಇಲ್ಲ ಮನೆ ಮಂದಿ

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹನುಮಂತ ಅವರ ಗೆಲುವು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸುದೀಪ್ ಅವರು ಹನುಮಂತ ಆಟದ ಬಗ್ಗೆ ಮುಂಚೆಯೇ ಎಚ್ಚರಿಕೆ ನೀಡಿದ್ದ ವಿಡಿಯೋಗಳು ವೈರಲ್ ಆಗಿವೆ. ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ ಹನುಮಂತ ಅವರ ಬುದ್ಧಿವಂತಿಕೆ ಮತ್ತು ಆಟದ ತಂತ್ರಗಳು ಎಲ್ಲರನ್ನು ಆಶ್ಚರ್ಯಗೊಳಿಸಿವೆ.

ಹನುಮಂತನ ಆಟದ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದ ಸುದೀಪ್; ಎಚ್ಚೆತ್ತುಕೊಳ್ಳಲೇ ಇಲ್ಲ ಮನೆ ಮಂದಿ
ಇತರ ಸ್ಪರ್ಧಿಗಳ ಜೊತೆ ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 27, 2025 | 10:34 AM

Share

ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಎಂದು ಸುದೀಪ್ ಘೋಷಣೆ ಮಾಡಿದಾಗಿನಿಂದಲೂ ಚರ್ಚೆ ಜೋರಾಗಿದೆ. ಇವರು ನಿಜವಾದ ವಿನ್ನರ್ ಎಂದು ಎಲ್ಲರೂ ಹೊಗಳುತ್ತಿದ್ದಾರೆ. ಹೀಗಿರುವಾಗಲೇ ಸುದೀಪ್ ಅವರು ಹನುಮಂತ ಅವರ ಆಟದ ಬಗ್ಗೆ ಈ ಮೊದಲು ಎಚ್ಚರಿಕೆ ನೀಡಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ.

ಹನುಮಂತ ಒಂದು ಲುಂಗಿ ಹಾಗೂ ಶರ್ಟ್ ಆಗಿ ದೊಡ್ಮನೆಗೆ ಎಂಟ್ರಿ ಪಡೆದವವರು. ಅದೂ ವೈಲ್ಡ್ ಕಾರ್ಡ್ ಮೂಲಕ. ಈಗ ವೈಲ್ಡ್ ಕಾರ್ಡ್ ಸ್ಪರ್ಧಿ ದೊಡ್ಮನೆಯಲ್ಲಿ ಗೆದ್ದಿದ್ದು ಇದೇ ಮೊದಲು ಅನ್ನೋದು ವಿಶೇಷ. ಹನುಮಂತನ ಆಟದ ಬಗ್ಗೆ ಸುದೀಪ್ ಅವರು ಇತರ ಸ್ಪರ್ಧಿಗಳಿಗೆ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ, ಯಾರೊಬ್ಬರೂ ಈ ಎಚ್ಚರಿಕೆಯನ್ನು ಗಂಭೀರವಾಗಿ ಸ್ವೀಕರಿಸಿರಲಿಲ್ಲ.

‘ಹನುಮಂತ ದಡ್ಡನಾ ಅಥವಾ ಬುದ್ಧಿವಂತನಾ’ ಎಂದು ಕೇಳಿದಾಗ ಒಬ್ಬೊಬ್ಬರು ಒಂದೊಂದು ರೀತಿಯ ಉತ್ತರ ಕೊಟ್ಟಿದ್ದರು. ಹನುಮಂತ ಅವರು ಬುದ್ಧಿವಂತ ಎಂದು ಸುದೀಪ್ ಹೇಳುತ್ತಲೇ ಬರುತ್ತಿದ್ದರು. ಆದರೆ, ಯಾರೊಬ್ಬರೂ ಇದನ್ನು ಅಷ್ಟು ಗಂಭೀರವಾಗಿ ಕಿವಿಮೇಲೆ ಹಾಕಿಕೊಂಡಿರಲಿಲ್ಲ.

ವೇದಿಕೆ ಮೇಲೆ ಮಾತನಾಡುವಾಗ ಸುದೀಪ್ ಅವರು ಒಂದು ಮಾತನ್ನು ಹೇಳಿದ್ದರು. ‘ಮನೆ ಒಳಗೆ ಬಂದಿದ್ದು ಆಮೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಅದು ಮೊಲ ಅಂತ ಕೊನೆಗೆ ಗೊತ್ತಾಯ್ತು’ ಎಂದು ಸುದೀಪ್ ಹೇಳಿದರು. ಅಂದರೆ ಹನುಮಂತ ಅವರು ನಿಧಾನವಾಗಿ ಆಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಸಖತ್ ಶಾರ್ಪ್ ಇದ್ದಾರೆ ಎಂಬುದು ಅವರ ಮಾತಿನ ಅರ್ಥ ಆಗಿತ್ತು.

ಇದನ್ನೂ ಓದಿ: ಹನುಮಂತಂದು ಸಿಂಪತಿ ಕಾರ್ಡ್ ಎಂದವರು ಇದನ್ನು ಓದಲೇಬೇಕು; ದೋಸ್ತ ಮಾಡಿದ ಸಾಧನೆ ಒಂದೆರಡಲ್ಲ

ಹನುಮಂತ ಅವರು 50 ಲಕ್ಷ ರೂಪಾಯಿ ಬಹುಮಾನ ಮೊತ್ತ ಹಾಗೂ ಆಕರ್ಷಕ ಕಪ್ ಜೊತೆ ಮನೆಗೆ ತೆರಳಿದ್ದಾರೆ. ಅವರಿಗೆ ‘ಬಾಯ್ಸ್ vs ಗರ್ಲ್ಸ್’ ಶೋನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು