AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಆಟದ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದ ಸುದೀಪ್; ಎಚ್ಚೆತ್ತುಕೊಳ್ಳಲೇ ಇಲ್ಲ ಮನೆ ಮಂದಿ

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹನುಮಂತ ಅವರ ಗೆಲುವು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸುದೀಪ್ ಅವರು ಹನುಮಂತ ಆಟದ ಬಗ್ಗೆ ಮುಂಚೆಯೇ ಎಚ್ಚರಿಕೆ ನೀಡಿದ್ದ ವಿಡಿಯೋಗಳು ವೈರಲ್ ಆಗಿವೆ. ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ ಹನುಮಂತ ಅವರ ಬುದ್ಧಿವಂತಿಕೆ ಮತ್ತು ಆಟದ ತಂತ್ರಗಳು ಎಲ್ಲರನ್ನು ಆಶ್ಚರ್ಯಗೊಳಿಸಿವೆ.

ಹನುಮಂತನ ಆಟದ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದ ಸುದೀಪ್; ಎಚ್ಚೆತ್ತುಕೊಳ್ಳಲೇ ಇಲ್ಲ ಮನೆ ಮಂದಿ
ಇತರ ಸ್ಪರ್ಧಿಗಳ ಜೊತೆ ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 27, 2025 | 10:34 AM

Share

ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಎಂದು ಸುದೀಪ್ ಘೋಷಣೆ ಮಾಡಿದಾಗಿನಿಂದಲೂ ಚರ್ಚೆ ಜೋರಾಗಿದೆ. ಇವರು ನಿಜವಾದ ವಿನ್ನರ್ ಎಂದು ಎಲ್ಲರೂ ಹೊಗಳುತ್ತಿದ್ದಾರೆ. ಹೀಗಿರುವಾಗಲೇ ಸುದೀಪ್ ಅವರು ಹನುಮಂತ ಅವರ ಆಟದ ಬಗ್ಗೆ ಈ ಮೊದಲು ಎಚ್ಚರಿಕೆ ನೀಡಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ.

ಹನುಮಂತ ಒಂದು ಲುಂಗಿ ಹಾಗೂ ಶರ್ಟ್ ಆಗಿ ದೊಡ್ಮನೆಗೆ ಎಂಟ್ರಿ ಪಡೆದವವರು. ಅದೂ ವೈಲ್ಡ್ ಕಾರ್ಡ್ ಮೂಲಕ. ಈಗ ವೈಲ್ಡ್ ಕಾರ್ಡ್ ಸ್ಪರ್ಧಿ ದೊಡ್ಮನೆಯಲ್ಲಿ ಗೆದ್ದಿದ್ದು ಇದೇ ಮೊದಲು ಅನ್ನೋದು ವಿಶೇಷ. ಹನುಮಂತನ ಆಟದ ಬಗ್ಗೆ ಸುದೀಪ್ ಅವರು ಇತರ ಸ್ಪರ್ಧಿಗಳಿಗೆ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ, ಯಾರೊಬ್ಬರೂ ಈ ಎಚ್ಚರಿಕೆಯನ್ನು ಗಂಭೀರವಾಗಿ ಸ್ವೀಕರಿಸಿರಲಿಲ್ಲ.

‘ಹನುಮಂತ ದಡ್ಡನಾ ಅಥವಾ ಬುದ್ಧಿವಂತನಾ’ ಎಂದು ಕೇಳಿದಾಗ ಒಬ್ಬೊಬ್ಬರು ಒಂದೊಂದು ರೀತಿಯ ಉತ್ತರ ಕೊಟ್ಟಿದ್ದರು. ಹನುಮಂತ ಅವರು ಬುದ್ಧಿವಂತ ಎಂದು ಸುದೀಪ್ ಹೇಳುತ್ತಲೇ ಬರುತ್ತಿದ್ದರು. ಆದರೆ, ಯಾರೊಬ್ಬರೂ ಇದನ್ನು ಅಷ್ಟು ಗಂಭೀರವಾಗಿ ಕಿವಿಮೇಲೆ ಹಾಕಿಕೊಂಡಿರಲಿಲ್ಲ.

ವೇದಿಕೆ ಮೇಲೆ ಮಾತನಾಡುವಾಗ ಸುದೀಪ್ ಅವರು ಒಂದು ಮಾತನ್ನು ಹೇಳಿದ್ದರು. ‘ಮನೆ ಒಳಗೆ ಬಂದಿದ್ದು ಆಮೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಅದು ಮೊಲ ಅಂತ ಕೊನೆಗೆ ಗೊತ್ತಾಯ್ತು’ ಎಂದು ಸುದೀಪ್ ಹೇಳಿದರು. ಅಂದರೆ ಹನುಮಂತ ಅವರು ನಿಧಾನವಾಗಿ ಆಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಸಖತ್ ಶಾರ್ಪ್ ಇದ್ದಾರೆ ಎಂಬುದು ಅವರ ಮಾತಿನ ಅರ್ಥ ಆಗಿತ್ತು.

ಇದನ್ನೂ ಓದಿ: ಹನುಮಂತಂದು ಸಿಂಪತಿ ಕಾರ್ಡ್ ಎಂದವರು ಇದನ್ನು ಓದಲೇಬೇಕು; ದೋಸ್ತ ಮಾಡಿದ ಸಾಧನೆ ಒಂದೆರಡಲ್ಲ

ಹನುಮಂತ ಅವರು 50 ಲಕ್ಷ ರೂಪಾಯಿ ಬಹುಮಾನ ಮೊತ್ತ ಹಾಗೂ ಆಕರ್ಷಕ ಕಪ್ ಜೊತೆ ಮನೆಗೆ ತೆರಳಿದ್ದಾರೆ. ಅವರಿಗೆ ‘ಬಾಯ್ಸ್ vs ಗರ್ಲ್ಸ್’ ಶೋನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್