AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

Kannadathi Serial: ‘ಅಜ್ನಬಿ ಬನೇ ಹಮ್ಸಫರ್’ ಹೆಸರಿನಲ್ಲಿ ‘ಕನ್ನಡತಿ’ ಧಾರಾವಾಹಿ ಹಿಂದಿಗೆ ಡಬ್​ ಆಗಲಿದೆ. ಈ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.

ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​
TV9 Web
| Edited By: |

Updated on:Apr 21, 2022 | 10:01 AM

Share

ಕಿರುತೆರೆಯ ಖ್ಯಾತ ನಟ ಕಿರಣ್​ ರಾಜ್​ (Kiran Raj) ಹಾಗೂ ನಟಿ ರಂಜನಿ ರಾಘವನ್​ ಅವರು ಅಭಿನಯಿಸುತ್ತಿರುವ ‘ಕನ್ನಡತಿ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ವಿಶೇಷ ಕಥಾಹಂದರ ಇರುವ ಈ ಸೀರಿಯಲ್​ಗೆ ದೊಡ್ಡ ಪ್ರೇಕ್ಷಕರ ವರ್ಗ ಇದೆ. ಕಿರಣ್​ ರಾಜ್​ ಹಾಗೂ ರಂಜನಿ ರಾಘವನ್​ ಜೋಡಿಯನ್ನು ಜನರು ಇಷ್ಟಪಟ್ಟಿದ್ದಾರೆ. ಈಗ ಅನೇಕ ತಿರುವುಗಳೊಂದಿಗೆ ಕುತೂಹಲದ ಘಟ್ಟವನ್ನು ಈ ಸೀರಿಯಲ್​ ತಲುಪಿದೆ. ಇದರ ಜೊತೆಗೆ ಕರುನಾಡಿನ ಗಡಿ ಮೀರಲು ಕೂಡ ‘ಕನ್ನಡತಿ’ ಧಾರಾವಾಹಿ (Kannadathi Serial) ಪ್ರಯತ್ನಿಸಿದೆ. ಹೌದು, ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಕನ್ನಡತಿ’ ಈಗ ಹಿಂದಿಗೆ ಡಬ್​ ಆಗುತ್ತಿದೆ. ಆ ಮೂಲಕ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪಲು ತಯಾರಿ ನಡೆಯುತ್ತಿದೆ. ಕನ್ನಡದ ಸೀರಿಯಲ್​ ಈ ರೀತಿ ದೇಶಾದ್ಯಂತ ಹವಾ ಸೃಷ್ಟಿ ಮಾಡುತ್ತಿರುವುದು ಕಿರಣ್​ ರಾಜ್​ ಹಾಗೂ ರಂಜನಿ ರಾಘವನ್​ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಸೀರಿಯಲ್​ನಲ್ಲಿ ಹರ್ಷ ಎಂಬ ಪಾತ್ರವನ್ನು ಕಿರಣ್​ ರಾಜ್​ ನಿಭಾಯಿಸುತ್ತಿದ್ದು, ಭುವಿ ಎಂಬ ಪಾತ್ರಕ್ಕೆ ರಂಜನಿ ರಾಘವನ್ (Ranjani Raghavan) ಬಣ್ಣ ಹಚ್ಚಿದ್ದಾರೆ. ಕನ್ನಡದ ಸೊಗಡಿನ ಈ ಕಥೆಯನ್ನು ಹಿಂದಿ ಪ್ರೇಕ್ಷಕರು ಹೇಗೆ ಸ್ವೀಕರಿಸಲಿದ್ದಾರೆ ಎಂಬ ಕೌತುಕ ಈಗ ಮನೆ ಮಾಡಿದೆ.

ನಟ ಕಿರಣ್ ರಾಜ್ ಅವರಿಗೆ ಹಿಂದಿ ಕಿರುತೆರೆ ಹೊಸದೇನಲ್ಲ. ಈ ಮೊದಲು ಕೂಡ ಹಿಂದಿ ಕಲರ್ಸ್ ವಾಹಿನಿಯ ಸಾಕಷ್ಟು ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಲ್ಲಿ ಕಿರಣ್ ರಾಜ್ ಅಭಿನಯಿಸಿದ್ದಾರೆ. ಆ ಮೂಲಕ ಅಲ್ಲಿನ ಪ್ರೇಕ್ಷಕರಿಗೆ ಅವರು ಪರಿಚಿತರಾಗಿದ್ದಾರೆ. ಈಗ ‘ಕನ್ನಡತಿ’ ಡಬ್ಬಿಂಗ್​ ವರ್ಷನ್​ ಮೂಲಕ ಮತ್ತೆ ಅವರು ಹಿಂದಿ ಕಿರುತೆರೆ ವೀಕ್ಷಕರನ್ನು ರಂಜಿಸಲಿದ್ದಾರೆ. ‘ಅಜ್ನಬಿ ಬನೇ ಹಮ್ಸಫರ್’ ಹೆಸರಿನಲ್ಲಿ ಈ ಧಾರಾವಾಹಿ ಹಿಂದಿಗೆ ಡಬ್​ ಆಗಲಿದೆ. ಕಲರ್ಸ್​ ರಿಷ್ತೆ ಯುಕೆ ವಾಹಿನಿಯಲ್ಲಿ ಶೀಘ್ರವೇ ಇದರ ಪ್ರಸಾರ ಆರಂಭವಾಗಲಿದೆ. ಮರಾಠಿಗೂ ಈ ಸೀರಿಯಲ್​ ಡಬ್​ ಆಗಿದೆ.

ಮೊದಲ ಬಾರಿಗೆ ಲಾಕ್​ ಡೌನ್​ ಆರಂಭ ಆದಾಗ ಕಿರುತೆರೆಯಲ್ಲಿ ಡಬ್ಬಿಂಗ್​ ಟ್ರೆಂಡ್​ ಹೆಚ್ಚಿತ್ತು. ಹಿಂದಿಯ ಅನೇಕ ಜನಪ್ರಿಯ ಧಾರಾವಾಹಿಗಳು ಕನ್ನಡಕ್ಕೆ ಡಬ್​ ಆಗಿ ಪ್ರಸಾರವಾದವು. ಅವುಗಳಿಗೆ ಭರ್ಜರಿ ಟಿಆರ್​ಪಿ ಕೂಡ ಸಿಕ್ಕಿತ್ತು. ಇನ್ನೇನು ಕನ್ನಡದ ಕಿರುತೆರೆಯನ್ನು ಡಬ್ಬಿಂಗ್​ ಧಾರಾವಾಹಿಗಳೇ ಆಕ್ರಮಿಸಿಕೊಳ್ಳುತ್ತವೆ ಎಂಬ ಚಿಂತೆ ಅನೇಕರನ್ನು ಕಾಡಿತ್ತು. ಆದರೆ ಹಾಗಾಗಿಲ್ಲ. ಕನ್ನಡದ ಮೂಲ ಕಂಟೆಂಟ್​ಗಳು ಈಗ ಮತ್ತೆ ಶೈನ್​ ಆಗುತ್ತಿವೆ. ಈ ನಡುವೆ ಕನ್ನಡದ ಧಾರಾವಾಹಿ ಹಿಂದಿಗೆ ಡಬ್ ಆಗುತ್ತಿರುವುದು ವಿಶೇಷ.

ಕಿರಣ್​ ರಾಜ್​ ಅವರಿಗೆ ‘ಕನ್ನಡತಿ’ ಸೀರಿಯಲ್​ನಿಂದ ಒಂದು ಇಮೇಜ್​ ಸಿಕ್ಕಿದೆ. ತಮ್ಮದೇ ಆದ ಅಭಿಮಾನಿ ಬಳಗವನ್ನು ಅವರು ಹೊಂದಿದ್ದಾರೆ. ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಅವರು ಸಕ್ರಿಯರಾಗಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿ, ಜನರನ್ನು ರಂಜಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಭರ್ಜರಿ ಗಂಡು’ ಚಿತ್ರದ ಶೂಟಿಂಗ್​ ಮುಗಿಸಿದ್ದಾರೆ. ಈಗ ‘ಬಡ್ಡೀಸ್​’ ಸಿನಿಮಾದ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಟೀಸರ್ ಏಪ್ರಿಲ್ 25ರಂದು ಬಿಡುಗಡೆ ಆಗಲಿದೆ. ಅದಕ್ಕಾಗಿ ಕಿರಣ್​ ರಾಜ್​ ಅಭಿಮಾನಿಗಳು ಕಾದಿದ್ದಾರೆ. ಜೂನ್​ನಲ್ಲಿ ಸಿನಿಮಾ ತೆರೆಕಾಣುವ ಸಾಧ್ಯತೆ ಇದೆ. ಇತ್ತೀಚೆಗೆ ಪೋಸ್ಟರ್​ ರಿಲೀಸ್​ ಮೂಲಕ ಈ ಸಿನಿಮಾ ಗಮನ ಸೆಳೆದಿತ್ತು.

ಇದನ್ನೂ ಓದಿ:

ಮಂಗಳಮ್ಮನ ವಿರುದ್ಧ ತಿರುಗಿಬಿದ್ದ ಭುವಿ; ‘ಕನ್ನಡತಿ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್​

ಮೇಕಪ್ ಇಲ್ಲದ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ರಂಜನಿ ರಾಘವನ್; ಅಭಿಮಾನಿಗಳಿಂದ ಮೆಚ್ಚುಗೆ

Published On - 9:57 am, Thu, 21 April 22

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!