Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​

ಕಿರಣ್ ರಾಜ್​ ಮೊದಲಿನಿಂದಲೂ ಸಾಮಾಜಿಕ ಕೆಲಸ ಮಾಡುತ್ತಾ ಬಂದಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಈ ಕಾರ್ಯವನ್ನು ಹೆಚ್ಚಿಸಿದ್ದರು. ಈಗಲೂ ಅವರ ಕಡೆಯಿಂದ ಒಳ್ಳೆಯ ಕೆಲಸ ಆಗುತ್ತಿದೆ. ಬರ್ತ್​ಡೇ ದಿನ ಕಿರಣ್ ರಾಜ್​ ಅವರು ವಿಶೇಷವಾಗಿ ಸಹಾಯ ಮಾಡುತ್ತಿದ್ದಾರೆ.

Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​
ಕಿರಣ್ ರಾಜ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 04, 2022 | 6:28 PM

ಹೀರೋಗಳ ಬರ್ತ್​ಡೇಗೆ ಫ್ಯಾನ್ಸ್ ಹೂವಿನ ಹಾರ, ಕೇಕ್ ಹಿಡಿದು ಬರುತ್ತಾರೆ. ಸ್ಟಾರ್​ಗಳಿಗೆ ವಿಶೇಷ ಗಿಫ್ಟ್ ಕೂಡ ಅಭಿಮಾನಿಗಳ ಕಡೆಯಿಂದ ಸಿಗುತ್ತದೆ. ಆದರೆ, ನಟ ಕಿರಣ್ ರಾಜ್ (Kiran Raj) ಈ ವಿಚಾರದಲ್ಲಿ ಭಿನ್ನವಾಗಿ ಕಾಣಿಸುತ್ತಾರೆ. ಜುಲೈ 5ರಂದು ಅವರ ಬರ್ತ್​ಡೇ (Kiran Raj Birthday). ಈ ವಿಶೇಷ ದಿನಕ್ಕೂ ಮೊದಲು ಅವರು ಫ್ಯಾನ್ಸ್​ಗೆ ಗಿಫ್ಟ್ ನೀಡುವ ಕೆಲಸ ಆರಂಭಿಸಿದ್ದಾರೆ. ಈ ಮೂಲಕ ಬರ್ತ್​ಡೇಯನ್ನು ಭಿನ್ನವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಕಾರ್ಯಕ್ಕೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಕನ್ನಡತಿ’ ಧಾರಾವಾಹಿ ಮೂಲಕ ಕಿರಣ್ ರಾಜ್ ಕರ್ನಾಟಕದಲ್ಲಿ ಹೆಚ್ಚು ಗುರುತಿಸಿಕೊಂಡರು. ನಂತರ ಸಿನಿಮಾಗಳಿಂದಲೂ ಅವರಿಗೆ ಆಫರ್ ಬಂತು. ಇತ್ತೀಚೆಗೆ ಅವರ ನಟನೆಯ ‘ಬಡ್ಡೀಸ್’ ಸಿನಿಮಾಗೆ ಫ್ಯಾನ್ಸ್​ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ. ಹುಟ್ಟುಹಬ್ಬದ ಸಮಯದಲ್ಲೇ ಈ ಸಿನಿಮಾ ಯಶಸ್ಸು ಕಂಡಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ. ಕಿರಣ್ ರಾಜ್​ ಈಗ ಅನೇಕರಿಗೆ ಸಹಾಯ ಮಾಡುತ್ತಾ ಮಾದರಿ ಆಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಿರಣ್ ರಾಜ್, ‘ಜುಲೈ 5 ನನ್ನ  ಹುಟ್ಟುಹಬ್ಬ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಕಾಮನ್ ಡಿಪಿ ಹಾಕಿಕೊಳ್ಳುವ ಮೂಲಕ ನನಗೆ ವಿಶೇಷವಾಗಿ ವಿಶ್ ಮಾಡುತ್ತಾ ಬಂದಿದ್ದಾರೆ. ಅಂತಹ ಅಭಿಮಾನಿಗಳನ್ನು ಗುರುತಿಸಿ ನಾನೇ ಅವರಿಗೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಉಡುಗೊರೆ ನೀಡಲಿದ್ದೇನೆ’ ಎನ್ನುತ್ತಾರೆ ಕಿರಣ್ ರಾಜ್.

ಇದನ್ನೂ ಓದಿ
Image
ಕಿರಣ್​ ರಾಜ್ ಫ್ಯಾನ್ಸ್​ಗೆ ಡಬಲ್ ಧಮಾಕಾ; ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ನಟ
Image
‘ಬಡ್ಡೀಸ್’ ಸಿನಿಮಾ ಪ್ರಚಾರ ವಾಹನಕ್ಕೆ ಅಪಘಾತ; ‘ದೃಷ್ಟಿ ಜಾಸ್ತಿನೆ ಆಗಿರಬೇಕು’ ಎಂದ ನಟ ಕಿರಣ್ ರಾಜ್
Image
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ಕಿರಣ್ ರಾಜ್​ ಮೊದಲಿನಿಂದಲೂ ಸಾಮಾಜಿಕ ಕೆಲಸ ಮಾಡುತ್ತಾ ಬಂದಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಈ ಕಾರ್ಯವನ್ನು ಹೆಚ್ಚಿಸಿದ್ದರು. ಈಗಲೂ ಅವರ ಕಡೆಯಿಂದ ಒಳ್ಳೆಯ ಕೆಲಸ ಆಗುತ್ತಿದೆ. ಬರ್ತ್​ಡೇ ದಿನ ಕಿರಣ್ ರಾಜ್​ ಅವರು ವಿಶೇಷವಾಗಿ ಸಹಾಯ ಮಾಡುತ್ತಿದ್ದಾರೆ. ಕಿರಣ್ ರಾಜ್ ತಮ್ಮ ಜನ್ಮದಿನದ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಊರುಗಳಲ್ಲಿರುವ ಅನಾಥಾಶ್ರಮ, ವೃದ್ಧಾಶ್ರಮಗಳಲ್ಲಿ ಅನ್ನದಾನ, ಬ್ಲಾಂಕೆಟ್‌ ವಿತರಣೆ ಮುಂತಾದ ಉತ್ತಮ ಕಾರ್ಯಗಳನ್ನು ನಡೆಸಲಿದ್ದಾರೆ.

ಇತ್ತೀಚೆಗೆ ಅವರ ನಟನೆಯ ‘ಬಡ್ಡೀಸ್’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರಕ್ಕೆ ಫ್ಯಾನ್ಸ್ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕಿರಣ್ ರಾಜ್ ಹೀರೋ ಆಗಿ ನಟಿಸಿರುವ ಮೊದಲ ಸಿನಿಮಾ ಇದು. ಮೊದಲ ಸಿನಿಮಾಗೆ ಇಷ್ಟು ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿರುವ ಬಗ್ಗೆ ಅವರಿಗೆ ಖುಷಿ ಇದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಹಾಗೂ ಭುವಿ ಮದುವೆ ನಡೆದಿದ್ದು, ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ:  ‘ಹರ್ಷ ಮತ್ತು ಭುವಿ ಪಾತ್ರಗಳನ್ನು ನಿಜ ಜೀವನಕ್ಕೆ ಕನೆಕ್ಟ್​ ಮಾಡಬೇಡಿ’; ಕಿರಣ್ ರಾಜ್ ವಿಶೇಷ ಮನವಿ

ಕಿರಣ್ ರಾಜ್ ಚಾರ್ಲಿ ಶ್ವಾನ ದತ್ತು ಪಡೆದಿದ್ದು ಕೂಡ ಸಿನಿಮೀಯ ರೀತಿಯಲ್ಲೇ; ಹೊರಬಿತ್ತು ಅಚ್ಚರಿಯ ವಿಚಾರ

Published On - 6:10 pm, Mon, 4 July 22

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ