AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​

ಕಿರಣ್ ರಾಜ್​ ಮೊದಲಿನಿಂದಲೂ ಸಾಮಾಜಿಕ ಕೆಲಸ ಮಾಡುತ್ತಾ ಬಂದಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಈ ಕಾರ್ಯವನ್ನು ಹೆಚ್ಚಿಸಿದ್ದರು. ಈಗಲೂ ಅವರ ಕಡೆಯಿಂದ ಒಳ್ಳೆಯ ಕೆಲಸ ಆಗುತ್ತಿದೆ. ಬರ್ತ್​ಡೇ ದಿನ ಕಿರಣ್ ರಾಜ್​ ಅವರು ವಿಶೇಷವಾಗಿ ಸಹಾಯ ಮಾಡುತ್ತಿದ್ದಾರೆ.

Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​
ಕಿರಣ್ ರಾಜ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 04, 2022 | 6:28 PM

Share

ಹೀರೋಗಳ ಬರ್ತ್​ಡೇಗೆ ಫ್ಯಾನ್ಸ್ ಹೂವಿನ ಹಾರ, ಕೇಕ್ ಹಿಡಿದು ಬರುತ್ತಾರೆ. ಸ್ಟಾರ್​ಗಳಿಗೆ ವಿಶೇಷ ಗಿಫ್ಟ್ ಕೂಡ ಅಭಿಮಾನಿಗಳ ಕಡೆಯಿಂದ ಸಿಗುತ್ತದೆ. ಆದರೆ, ನಟ ಕಿರಣ್ ರಾಜ್ (Kiran Raj) ಈ ವಿಚಾರದಲ್ಲಿ ಭಿನ್ನವಾಗಿ ಕಾಣಿಸುತ್ತಾರೆ. ಜುಲೈ 5ರಂದು ಅವರ ಬರ್ತ್​ಡೇ (Kiran Raj Birthday). ಈ ವಿಶೇಷ ದಿನಕ್ಕೂ ಮೊದಲು ಅವರು ಫ್ಯಾನ್ಸ್​ಗೆ ಗಿಫ್ಟ್ ನೀಡುವ ಕೆಲಸ ಆರಂಭಿಸಿದ್ದಾರೆ. ಈ ಮೂಲಕ ಬರ್ತ್​ಡೇಯನ್ನು ಭಿನ್ನವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಕಾರ್ಯಕ್ಕೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಕನ್ನಡತಿ’ ಧಾರಾವಾಹಿ ಮೂಲಕ ಕಿರಣ್ ರಾಜ್ ಕರ್ನಾಟಕದಲ್ಲಿ ಹೆಚ್ಚು ಗುರುತಿಸಿಕೊಂಡರು. ನಂತರ ಸಿನಿಮಾಗಳಿಂದಲೂ ಅವರಿಗೆ ಆಫರ್ ಬಂತು. ಇತ್ತೀಚೆಗೆ ಅವರ ನಟನೆಯ ‘ಬಡ್ಡೀಸ್’ ಸಿನಿಮಾಗೆ ಫ್ಯಾನ್ಸ್​ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ. ಹುಟ್ಟುಹಬ್ಬದ ಸಮಯದಲ್ಲೇ ಈ ಸಿನಿಮಾ ಯಶಸ್ಸು ಕಂಡಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ. ಕಿರಣ್ ರಾಜ್​ ಈಗ ಅನೇಕರಿಗೆ ಸಹಾಯ ಮಾಡುತ್ತಾ ಮಾದರಿ ಆಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಿರಣ್ ರಾಜ್, ‘ಜುಲೈ 5 ನನ್ನ  ಹುಟ್ಟುಹಬ್ಬ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಕಾಮನ್ ಡಿಪಿ ಹಾಕಿಕೊಳ್ಳುವ ಮೂಲಕ ನನಗೆ ವಿಶೇಷವಾಗಿ ವಿಶ್ ಮಾಡುತ್ತಾ ಬಂದಿದ್ದಾರೆ. ಅಂತಹ ಅಭಿಮಾನಿಗಳನ್ನು ಗುರುತಿಸಿ ನಾನೇ ಅವರಿಗೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಉಡುಗೊರೆ ನೀಡಲಿದ್ದೇನೆ’ ಎನ್ನುತ್ತಾರೆ ಕಿರಣ್ ರಾಜ್.

ಇದನ್ನೂ ಓದಿ
Image
ಕಿರಣ್​ ರಾಜ್ ಫ್ಯಾನ್ಸ್​ಗೆ ಡಬಲ್ ಧಮಾಕಾ; ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ನಟ
Image
‘ಬಡ್ಡೀಸ್’ ಸಿನಿಮಾ ಪ್ರಚಾರ ವಾಹನಕ್ಕೆ ಅಪಘಾತ; ‘ದೃಷ್ಟಿ ಜಾಸ್ತಿನೆ ಆಗಿರಬೇಕು’ ಎಂದ ನಟ ಕಿರಣ್ ರಾಜ್
Image
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ಕಿರಣ್ ರಾಜ್​ ಮೊದಲಿನಿಂದಲೂ ಸಾಮಾಜಿಕ ಕೆಲಸ ಮಾಡುತ್ತಾ ಬಂದಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಈ ಕಾರ್ಯವನ್ನು ಹೆಚ್ಚಿಸಿದ್ದರು. ಈಗಲೂ ಅವರ ಕಡೆಯಿಂದ ಒಳ್ಳೆಯ ಕೆಲಸ ಆಗುತ್ತಿದೆ. ಬರ್ತ್​ಡೇ ದಿನ ಕಿರಣ್ ರಾಜ್​ ಅವರು ವಿಶೇಷವಾಗಿ ಸಹಾಯ ಮಾಡುತ್ತಿದ್ದಾರೆ. ಕಿರಣ್ ರಾಜ್ ತಮ್ಮ ಜನ್ಮದಿನದ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಊರುಗಳಲ್ಲಿರುವ ಅನಾಥಾಶ್ರಮ, ವೃದ್ಧಾಶ್ರಮಗಳಲ್ಲಿ ಅನ್ನದಾನ, ಬ್ಲಾಂಕೆಟ್‌ ವಿತರಣೆ ಮುಂತಾದ ಉತ್ತಮ ಕಾರ್ಯಗಳನ್ನು ನಡೆಸಲಿದ್ದಾರೆ.

ಇತ್ತೀಚೆಗೆ ಅವರ ನಟನೆಯ ‘ಬಡ್ಡೀಸ್’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರಕ್ಕೆ ಫ್ಯಾನ್ಸ್ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕಿರಣ್ ರಾಜ್ ಹೀರೋ ಆಗಿ ನಟಿಸಿರುವ ಮೊದಲ ಸಿನಿಮಾ ಇದು. ಮೊದಲ ಸಿನಿಮಾಗೆ ಇಷ್ಟು ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿರುವ ಬಗ್ಗೆ ಅವರಿಗೆ ಖುಷಿ ಇದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಹಾಗೂ ಭುವಿ ಮದುವೆ ನಡೆದಿದ್ದು, ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ:  ‘ಹರ್ಷ ಮತ್ತು ಭುವಿ ಪಾತ್ರಗಳನ್ನು ನಿಜ ಜೀವನಕ್ಕೆ ಕನೆಕ್ಟ್​ ಮಾಡಬೇಡಿ’; ಕಿರಣ್ ರಾಜ್ ವಿಶೇಷ ಮನವಿ

ಕಿರಣ್ ರಾಜ್ ಚಾರ್ಲಿ ಶ್ವಾನ ದತ್ತು ಪಡೆದಿದ್ದು ಕೂಡ ಸಿನಿಮೀಯ ರೀತಿಯಲ್ಲೇ; ಹೊರಬಿತ್ತು ಅಚ್ಚರಿಯ ವಿಚಾರ

Published On - 6:10 pm, Mon, 4 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ