AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿ ಆರಂಭಕ್ಕೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ

ಜೀ ಕನ್ನಡದಲ್ಲಿ ಜೂನ್ 16 ರಿಂದ ‘ಕರ್ಣ’ ಧಾರಾವಾಹಿ ಪ್ರಸಾರ ಆರಂಭವಾಗಲಿದೆ. ಕಿರಣ್ ರಾಜ್ ಮುಖ್ಯ ಪಾತ್ರದಲ್ಲಿದ್ದು, ನಮ್ರತಾ ಗೌಡ ಮತ್ತು ಭವ್ಯಾ ಗೌಡ ನಾಯಕಿಯರಾಗಿ ನಟಿಸಲಿದ್ದಾರೆ. ಸೋಮವಾರದಿಂದ ಶುಕ್ರವಾರ ರಾತ್ರಿ 8 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿಯಲ್ಲಿ ವೈದ್ಯನಾಗಿ ಕರ್ಣನ ಪಾತ್ರವನ್ನು ಕಿರಣ್ ರಾಜ್ ನಿರ್ವಹಿಸುತ್ತಾರೆ.

‘ಕರ್ಣ’ ಧಾರಾವಾಹಿ ಆರಂಭಕ್ಕೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ
ಕರ್ಣ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 05, 2025 | 10:56 AM

Share

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ (Karna Serial) ಪ್ರಸಾರ ಕಾಣಲಿದೆ ಎಂದು ಈ ಮೊದಲೇ ಮಾಹಿತಿ ಘೋಷಣೆ ಆಗಿತ್ತು. ಈವರೆಗೆ ಧಾರಾವಾಹಿಗಳ ಪ್ರೋಮೋಗಳು ಮಾತ್ರ ಬಿಡುಗಡೆ ಕಂಡಿದ್ದವು. ಆದರೆ, ಧಾರಾವಾಹಿ ಪ್ರಸಾರದ ಬಗ್ಗೆ ಮಾಹಿತಿ ಹೊರ ಬಿದ್ದಿರಲಿಲ್ಲ. ಈಗ ಧಾರಾವಾಹಿ ಪ್ರಸಾರದ ಬಗ್ಗೆ ಮಾಹಿತಿಯೊಂದು ಕೇಳಿ ಬಂದಿದೆ. ಈ ಧಾರಾವಾಹಿ ಜೂನ್ 16ರಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ ಎಂದು ವರದಿ ಆಗಿದೆ.

ಸಾಮಾನ್ಯವಾಗಿ ಹೊಸ ಧಾರಾವಾಹಿಗಳು ಸೋಮವಾರ ಪ್ರಸಾರ ಕಾಣುತ್ತವೆ. ಈಗ ‘ಕರ್ಣ’ ಧಾರಾವಾಹಿ ಕೂಡ ಸೋಮವಾರದಿಂದ ಪ್ರಸಾರ ಕಾಣಲಿದೆ. ಈ ಧಾರಾವಾಹಿಯಲ್ಲಿ ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯನ ಪಾತ್ರ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ
Image
ಸೋಶಿಯಲ್ ಮೀಡಿಯಾಗೆ ಶೋಭಾ ಶೆಟ್ಟಿ ಗುಡ್​ ಬೈ; ಖಿನ್ನತೆಗೊಳಗಾದ್ರಾ ನಟಿ?
Image
‘ಅಭಿಮಾನ, ಪ್ರೀತಿ ಕುಟುಂಬದ ನೋವಿಗೆ ಕಾರಣವಾಗಬಾರದು’; ಶಿವಣ್ಣ ಭಾವುಕ ಪೋಸ್ಟ್
Image
‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ
View this post on Instagram

A post shared by Zee Kannada (@zeekannada)

‘ಕರ್ಣ’ ಧಾರಾವಾಹಿಯಲ್ಲಿ ಮತ್ತೊಂದು ವಿಶೇಷ ಇದೆ. ಅದುವೇ ಎರಡು ನಾಯಕಿಯರು. ಹೌದು,ಕರ್ಣ ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಅವರು ನಾಯಕಿಯರು ಎಂದು ತಿಳಿದು ಬಂದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಅಭಿಮಾನಿಗಳು ಇಷ್ಟು ವರ್ಷಗಳ ಕಾಲ ಕಾದಿದ್ದರು.

ಇದನ್ನೂ ಓದಿ: ‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ

ಹಾಗಾದರೆ ಧಾರಾವಾಹಿಯ ಸಮಯ?  ಈ ಧಾರಾವಾಹಿ ಸೋಮವಾರದಿಂದ-ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರ ಕಾಣಲಿದೆ. ಈ ಸಮಯದಲ್ಲಿ ಸದ್ಯ ‘ಲಕ್ಷ್ಮೀ ನಿವಾಸ’ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನಿತ್ಯ ಒಂದು ಗಂಟೆ ಪ್ರಸಾರ ಕಾಣುತ್ತಿದೆ. ಅದನ್ನು ಅರ್ಧಗಂಟೆಗೆ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧಾರಾವಾಹಿ ಕಥೆ ಏನು?

ಕರ್ಣನ ತುಂಬಾನೇ ಶ್ರೀಮಂತ ಹುಡುಗ. ಅವನು ವೈದ್ಯ. ಎಲ್ಲರಿಗೂ ಅವನು ಪ್ರೀತಿ ಪಾತ್ರನು. ಆದರೆ, ಕುಟುಂಬದವರಿಗೆ ಮಾತ್ರವಲ್ಲ. ಕುಟುಂಬದವರು ಅವನನ್ನು ಕಾಲ ಕಸದ ರೀತಿಯಲ್ಲಿ ನೋಡುತ್ತಾರೆ. ಅತ್ತ ಇಬ್ಬರು ನಾಯಕಿಯರು ಅಕ್ಕ-ತಂಗಿ. ಇಬ್ಬರಿಗೂ ಒಬ್ಬನ ಮೇಲೆ ಪ್ರೀತಿ ಮೂಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಧಾರಾವಾಹಿ ನೋಡಿದ ಬಳಿಕ ಕಥೆಯ ಬಗ್ಗೆ ಸ್ಪಷ್ಟನೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್