AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿ ಆರಂಭಕ್ಕೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ

ಜೀ ಕನ್ನಡದಲ್ಲಿ ಜೂನ್ 16 ರಿಂದ ‘ಕರ್ಣ’ ಧಾರಾವಾಹಿ ಪ್ರಸಾರ ಆರಂಭವಾಗಲಿದೆ. ಕಿರಣ್ ರಾಜ್ ಮುಖ್ಯ ಪಾತ್ರದಲ್ಲಿದ್ದು, ನಮ್ರತಾ ಗೌಡ ಮತ್ತು ಭವ್ಯಾ ಗೌಡ ನಾಯಕಿಯರಾಗಿ ನಟಿಸಲಿದ್ದಾರೆ. ಸೋಮವಾರದಿಂದ ಶುಕ್ರವಾರ ರಾತ್ರಿ 8 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿಯಲ್ಲಿ ವೈದ್ಯನಾಗಿ ಕರ್ಣನ ಪಾತ್ರವನ್ನು ಕಿರಣ್ ರಾಜ್ ನಿರ್ವಹಿಸುತ್ತಾರೆ.

‘ಕರ್ಣ’ ಧಾರಾವಾಹಿ ಆರಂಭಕ್ಕೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ
ಕರ್ಣ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 05, 2025 | 10:56 AM

Share

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ (Karna Serial) ಪ್ರಸಾರ ಕಾಣಲಿದೆ ಎಂದು ಈ ಮೊದಲೇ ಮಾಹಿತಿ ಘೋಷಣೆ ಆಗಿತ್ತು. ಈವರೆಗೆ ಧಾರಾವಾಹಿಗಳ ಪ್ರೋಮೋಗಳು ಮಾತ್ರ ಬಿಡುಗಡೆ ಕಂಡಿದ್ದವು. ಆದರೆ, ಧಾರಾವಾಹಿ ಪ್ರಸಾರದ ಬಗ್ಗೆ ಮಾಹಿತಿ ಹೊರ ಬಿದ್ದಿರಲಿಲ್ಲ. ಈಗ ಧಾರಾವಾಹಿ ಪ್ರಸಾರದ ಬಗ್ಗೆ ಮಾಹಿತಿಯೊಂದು ಕೇಳಿ ಬಂದಿದೆ. ಈ ಧಾರಾವಾಹಿ ಜೂನ್ 16ರಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ ಎಂದು ವರದಿ ಆಗಿದೆ.

ಸಾಮಾನ್ಯವಾಗಿ ಹೊಸ ಧಾರಾವಾಹಿಗಳು ಸೋಮವಾರ ಪ್ರಸಾರ ಕಾಣುತ್ತವೆ. ಈಗ ‘ಕರ್ಣ’ ಧಾರಾವಾಹಿ ಕೂಡ ಸೋಮವಾರದಿಂದ ಪ್ರಸಾರ ಕಾಣಲಿದೆ. ಈ ಧಾರಾವಾಹಿಯಲ್ಲಿ ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯನ ಪಾತ್ರ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ
Image
ಸೋಶಿಯಲ್ ಮೀಡಿಯಾಗೆ ಶೋಭಾ ಶೆಟ್ಟಿ ಗುಡ್​ ಬೈ; ಖಿನ್ನತೆಗೊಳಗಾದ್ರಾ ನಟಿ?
Image
‘ಅಭಿಮಾನ, ಪ್ರೀತಿ ಕುಟುಂಬದ ನೋವಿಗೆ ಕಾರಣವಾಗಬಾರದು’; ಶಿವಣ್ಣ ಭಾವುಕ ಪೋಸ್ಟ್
Image
‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ
View this post on Instagram

A post shared by Zee Kannada (@zeekannada)

‘ಕರ್ಣ’ ಧಾರಾವಾಹಿಯಲ್ಲಿ ಮತ್ತೊಂದು ವಿಶೇಷ ಇದೆ. ಅದುವೇ ಎರಡು ನಾಯಕಿಯರು. ಹೌದು,ಕರ್ಣ ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಅವರು ನಾಯಕಿಯರು ಎಂದು ತಿಳಿದು ಬಂದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಅಭಿಮಾನಿಗಳು ಇಷ್ಟು ವರ್ಷಗಳ ಕಾಲ ಕಾದಿದ್ದರು.

ಇದನ್ನೂ ಓದಿ: ‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ

ಹಾಗಾದರೆ ಧಾರಾವಾಹಿಯ ಸಮಯ?  ಈ ಧಾರಾವಾಹಿ ಸೋಮವಾರದಿಂದ-ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರ ಕಾಣಲಿದೆ. ಈ ಸಮಯದಲ್ಲಿ ಸದ್ಯ ‘ಲಕ್ಷ್ಮೀ ನಿವಾಸ’ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನಿತ್ಯ ಒಂದು ಗಂಟೆ ಪ್ರಸಾರ ಕಾಣುತ್ತಿದೆ. ಅದನ್ನು ಅರ್ಧಗಂಟೆಗೆ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧಾರಾವಾಹಿ ಕಥೆ ಏನು?

ಕರ್ಣನ ತುಂಬಾನೇ ಶ್ರೀಮಂತ ಹುಡುಗ. ಅವನು ವೈದ್ಯ. ಎಲ್ಲರಿಗೂ ಅವನು ಪ್ರೀತಿ ಪಾತ್ರನು. ಆದರೆ, ಕುಟುಂಬದವರಿಗೆ ಮಾತ್ರವಲ್ಲ. ಕುಟುಂಬದವರು ಅವನನ್ನು ಕಾಲ ಕಸದ ರೀತಿಯಲ್ಲಿ ನೋಡುತ್ತಾರೆ. ಅತ್ತ ಇಬ್ಬರು ನಾಯಕಿಯರು ಅಕ್ಕ-ತಂಗಿ. ಇಬ್ಬರಿಗೂ ಒಬ್ಬನ ಮೇಲೆ ಪ್ರೀತಿ ಮೂಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಧಾರಾವಾಹಿ ನೋಡಿದ ಬಳಿಕ ಕಥೆಯ ಬಗ್ಗೆ ಸ್ಪಷ್ಟನೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್