AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಮಾನ ಮಾಡಿದವರಿಗೆ ಕಿಚ್ಚ ಸುದೀಪ್​ ಎದುರೇ ಉತ್ತರಿಸಿದ ‘ಕನ್ನಡತಿ’ ಕಿರಣ್​ ರಾಜ್​

ಕಿರಣ್​ ರಾಜ್​ ಬಿಗ್​ ಬಾಸ್​ ಮಿನಿ ಸೀಸನ್​ಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಅವರಿಗೆ ಹೊಂದಿಕೊಳ್ಳೋದು ಕೊಂಚ ಕಷ್ಟವಾಯಿತಾದರೂ ನಂತರ ಎಲ್ಲರ ಜತೆ ಬೆರೆತರು.

ಅವಮಾನ ಮಾಡಿದವರಿಗೆ ಕಿಚ್ಚ ಸುದೀಪ್​ ಎದುರೇ ಉತ್ತರಿಸಿದ ‘ಕನ್ನಡತಿ’ ಕಿರಣ್​ ರಾಜ್​
ಅವಮಾನ ಮಾಡಿದವರಿಗೆ ಕಿಚ್ಚ ಸುದೀಪ್​ ಎದುರೇ ಉತ್ತರಿಸಿದ ‘ಕನ್ನಡತಿ’ ಕಿರಣ್​ ರಾಜ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 06, 2021 | 9:52 PM

Share

ಕಿರಣ್​ ರಾಜ್ ಆ್ಯಟಿಟ್ಯೂಡ್​ ಸಾಕಷ್ಟು ಜನರಿಗೆ ಇಷ್ಟವಾಗುತ್ತದೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ನಟನೆ ಮಾತ್ರವಲ್ಲದೆ, ಸಾಮಾಜಿಕ ಕೆಲಸಗಳ ಮೂಲಕವೂ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಹಾಗಂತ ಅವರ ಜೀವನ ಸುಲಭವಾಗಿರಲಿಲ್ಲ. ಆರಂಭದಲ್ಲಿ ತುಂಬಾನೇ ಕಷ್ಟಪಟ್ಟು ನಟನೆ ಕ್ಷೇತ್ರಕ್ಕೆ ಬಂದ ಅವರು, ಈಗ ಕಿರುತೆರೆ ಹಾಗೂ ಹಿರಿತೆರೆ ಎರಡಲ್ಲೂ ಬ್ಯುಸಿಯಾಗಿದ್ದಾರೆ. ಆರಂಭದ ದಿನಗಳಲ್ಲಿ ಕಿರಣ್​ ರಾಜ್​ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದರು. ಇದಕ್ಕೆ ಅವರು ಈಗ ಉತ್ತರಿಸಿದ್ದಾರೆ.

ಕಿರಣ್​ ರಾಜ್​ ಬಿಗ್​ ಬಾಸ್​ ಮಿನಿ ಸೀಸನ್​ಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಅವರಿಗೆ ಹೊಂದಿಕೊಳ್ಳೋದು ಕೊಂಚ ಕಷ್ಟವಾಯಿತಾದರೂ ನಂತರ ಎಲ್ಲರ ಜತೆ ಬೆರೆತರು. ಕೊನೆಯ ದಿನ ಅವರು ಕೆಲ ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡರು. ಈ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೆ. ಅಲ್ಲದೆ ಹಳೆಯ ಘಟನೆ ನೆನೆದು ಅವರು ಭಾವುಕರಾದರು.

ಬಿಗ್​ ಬಾಸ್​ ಮಿನಿ ಸೀಸನ್​ ಪೂರ್ಣಗೊಂಡಿದೆ. ಕೊನೆಯ ದಿನ ಸುದೀಪ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡಿದ್ದಾರೆ. ಈ ವೇಳೆ ವಿವಿಧ ಪ್ರಶಸ್ತಿಗಳನ್ನು ಸ್ಪರ್ಧಿಗಳಿಗೆ ನೀಡಲಾಗಿದೆ. ‘ಸ್ಟೈಲಿಶ್​ ಹುಡುಗ’ ಪ್ರಶಸ್ತಿಯನ್ನು ಸುದೀಪ್​ ಘೋಷಣೆ ಮಾಡಿದರು. ಈ ಪ್ರಶಸ್ತಿ ಕಿರಣ್ ರಾಜ್​ಗೆ ಒಲಿದಿದೆ. ಅವರು ವೇದಿಕೆ ಮೇಲೆ ಬಂದು ಈ ಪ್ರಶಸ್ತಿ ಸ್ವೀಕರಿಸಿದರು.

‘ಈ ಬಗ್ಗೆ ಏನಾದರೂ ಹೇಳೋದು ಇದೆಯೇ’ ಎಂದು ಸುದೀಪ್​ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಕಿರಣ್​ ರಾಜ್​, ‘ಕಾಲೇಜಿನಲ್ಲಿ ಒಂದು ಸಲ ಆದ ಘಟನೆ ನೆನಪಿಗೆ ಬರುತ್ತದೆ. ನನಗೆ ಡ್ರೆಸ್​ ಸರಿಯಾಗಿ ಹಾಕೋಕೆ ಬರಲ್ಲ ಎಂದು ನನ್ನ ಗೆಳೆಯರು ನನ್ನನ್ನು ಅವಾಯ್ಡ್​ ಮಾಡ್ತಾ ಇದ್ರು. ಡ್ರೆಸ್​ ಬಗ್ಗೆ ನಂಗೆ ಗೊತ್ತಿರಲಿಲ್ಲ. ಆಗ ತುಂಬಾ ಅವಮಾನಗಳನ್ನು ನೋಡಿದ್ದೇನೆ. ಪ್ರತಿಯೊಂದಕ್ಕೂ ಉತ್ತರ ಇರುತ್ತದೆ. ಬಹುಶಃ ಅಂದಿನ ಘಟನೆಗೆ ಇದು ಉತ್ತರ’ ಎಂದರು.

ಇದನ್ನೂ ಓದಿ: ‘ನಾನು ಎಷ್ಟು ಟೇಕ್​ ತೆಗೆದುಕೊಳ್ತೀನಿ ಅಂತ ಬೆಟ್​ ಕಟ್ಟುತ್ತಿದ್ದರು’; ಅವಮಾನದ ಹಾದಿ ನೆನೆದ ಕಿರಣ್​ ರಾಜ್

Kiran Raj: ಕೊರೊನಾ ಸಂಕಷ್ಟದಲ್ಲಿ ಪ್ರತಿದಿನ ಸಾವಿರ ಜನರಿಗೆ ಊಟ ಹಾಕುತ್ತಿರುವ ‘ಕನ್ನಡತಿ’ ಕಿರಣ್ ರಾಜ್

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ