AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆಯಲ್ಲಿ ಕಿರಣ್​ ರಾಜ್​ ವಿಶೇಷ ಮನವಿ; ಇದನ್ನು ಬಿಗ್​ ಬಾಸ್​ ಸ್ವೀಕರಿಸ್ತಾರ?

ಬಿಗ್​ ಬಾಸ್​ ಮನೆಯೊಳಗೆ 16 ಸ್ಪರ್ಧಿಗಳು ಸೇರಿದ್ದಾರೆ. ಎಲ್ಲರೂ ಧಾರಾವಾಹಿಯಲ್ಲಿ ಗುರುತಿಸಿಕೊಂಡವರು ಎಂಬುದು ವಿಶೇಷ. ಇದು ಮಿನಿ ಸೀಸನ್​ ಆಗಿದ್ದು, ಇಲ್ಲಿ ವಿನ್ನರ್​ ಅಥವಾ ಎಲಿಮಿನೇಷನ್​ ಇರುವುದಿಲ್ಲ.

ದೊಡ್ಮನೆಯಲ್ಲಿ ಕಿರಣ್​ ರಾಜ್​ ವಿಶೇಷ ಮನವಿ; ಇದನ್ನು ಬಿಗ್​ ಬಾಸ್​ ಸ್ವೀಕರಿಸ್ತಾರ?
ಕಿರಣ್​ ರಾಜ್
Follow us
TV9 Web
| Updated By: ಮದನ್​ ಕುಮಾರ್​

Updated on: Aug 21, 2021 | 7:13 AM

ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಂತರದಲ್ಲಿ ಹೊರ ಜಗತ್ತಿನ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳುತ್ತದೆ. ಮನೆ ಒಳಗೆ ತೆರಳಿದ ಸ್ಪರ್ಧಿಗಳು ಮೊಬೈಲ್​ ಬಳಕೆ ಮಾಡುವಂತೇ ಇಲ್ಲ. ಈ ಕಾರಣಕ್ಕೆ ಸ್ಪರ್ಧಿಗಳು ಮನೆಯವರ ಜತೆ ಮಾತನಾಡಬೇಕು, ಏನಾದರೂ ಬೇಕಾದರೆ ಬಿಗ್​ ಬಾಸ್​ ಜತೆ ಮಾತನಾಡಬೇಕು. ಈಗ ಬಿಗ್​ ಬಾಸ್​ ಮನೆಯಲ್ಲಿ ಕಿರಣ್​ ರಾಜ್​ ಬಿಗ್​ ಬಾಸ್​ಗೆ ವಿಶೇಷ ಮನವಿಯೊಂದನ್ನು ಇಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯೊಳಗೆ 16 ಸ್ಪರ್ಧಿಗಳು ಸೇರಿದ್ದಾರೆ. ಎಲ್ಲರೂ ಧಾರಾವಾಹಿಯಲ್ಲಿ ಗುರುತಿಸಿಕೊಂಡವರು ಎಂಬುದು ವಿಶೇಷ. ಇದು ಮಿನಿ ಸೀಸನ್​ ಆಗಿದ್ದು, ಇಲ್ಲಿ ವಿನ್ನರ್​ ಅಥವಾ ಎಲಿಮಿನೇಷನ್​ ಇರುವುದಿಲ್ಲ. ಈ ಕಾರಣಕ್ಕೆ ಎಲ್ಲಾ ಸ್ಪರ್ಧಿಗಳು ಹಾಯಾಗಿ ದಿನ ಕಳೆಯುತ್ತಿದ್ದಾರೆ. ಕನ್ನಡತಿ ಧಾರಾವಾಹಿ ಮೂಲಕ ಹೆಚ್ಚು ಮನೆಮಾತಾದ ಕಿರಣ್​ ರಾಜ್​ ಕೂಡ ಬಿಗ್​ ಬಾಸ್​ ಮನೆ ಸೇರಿದ್ದಾರೆ. ಅವರು ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಗಗನ್​ ಚಿನ್ನಪ್ಪ ಹಾಗೂ ಕಿರಣ್​ ರಾಜ್​ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಗಗನ್​, ‘ಇಲ್ಲಿ ನಾವು ನಿತ್ಯ ಒಂದೊಂದು ಕೆಲಸ ಮಾಡುತ್ತಿದ್ದೇವೆ. ಏಕೆಂದರೆ ಇದು ಒಂದು ವಾರದ ಬಿಗ್​ ಬಾಸ್. ಆದರೆ, 100 ದಿನಗಳ ಬಿಗ್​ ಬಾಸ್​ನಲ್ಲಿ ಎಲ್ಲರೂ ಪ್ರತಿ ಕೆಲಸವನ್ನು ಒಂದು ವಾರ ಮಾಡಬೇಕು. ಪಾತ್ರೆ ತೊಳೆಯೋದೆಲ್ಲ ಒಂದು ವಾರ ಮಾಡೋಕೆ ಸಾಧ್ಯವೇ ಇಲ್ಲ’ ಎಂದಿದ್ದಾರೆ. ಇದಕ್ಕೆ ಕಿರಣ್​ ರಾಜ್​ ಕೂಡ ತಲೆ ಆಡಿಸಿದ್ದಾರೆ. ‘ಬಾಳೆ ಎಲೆ ತಂದುಕೊಡಿ ಬಿಗ್​ ಬಾಸ್​’ ಎಂದು ನಾನು ಕೇಳುತ್ತಿದ್ದೆ ಎಂದಿದ್ದಾರೆ ಕಿರಣ್​ ರಾಜ್​.

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸ್ಪರ್ಧಿಗಳು ಹಾಸ್ಯಕ್ಕೆ ಕೆಲ ಮಾತುಗಳನ್ನು ಆಡಿದ್ದರು. ಇದನ್ನು ಅಚ್ಚರಿ ಎಂಬಂತೆ ಬಿಗ್​ ಬಾಸ್​ ಈಡೇರಿಸಿದ್ದರು. ಈಗ ಕಿರಣ್​ ರಾಜ್​ ಬೇಡಿಕೆಯನ್ನು ಬಿಗ್​ ಬಾಸ್​ ಈಡೇರಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಬಿಗ್​ ಬಾಸ್​ ಈ ಭಾನುವಾರ (ಆಗಸ್ಟ್ 22) ಪೂರ್ಣಗೊಳ್ಳಲಿದೆ. ಕೊನೆಯ ದಿನವನ್ನು ನಡೆಸಿಕೊಡೋಕೆ ಕಿಚ್ಚ ಸುದೀಪ್​ ಆಗಮಿಸುತ್ತಿದ್ದಾರೆ ಅನ್ನೋದು ವಿಶೇಷ. ಈ ಎಪಿಸೋಡ್​ಗಾಗಿ ವೀಕ್ಷಕರು ಕಾದು ಕೂತಿದ್ದಾರೆ.

ಇದನ್ನೂ ಓದಿ:

 ‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ