AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆಯಲ್ಲಿ ಕಿರಣ್​ ರಾಜ್​ ವಿಶೇಷ ಮನವಿ; ಇದನ್ನು ಬಿಗ್​ ಬಾಸ್​ ಸ್ವೀಕರಿಸ್ತಾರ?

ಬಿಗ್​ ಬಾಸ್​ ಮನೆಯೊಳಗೆ 16 ಸ್ಪರ್ಧಿಗಳು ಸೇರಿದ್ದಾರೆ. ಎಲ್ಲರೂ ಧಾರಾವಾಹಿಯಲ್ಲಿ ಗುರುತಿಸಿಕೊಂಡವರು ಎಂಬುದು ವಿಶೇಷ. ಇದು ಮಿನಿ ಸೀಸನ್​ ಆಗಿದ್ದು, ಇಲ್ಲಿ ವಿನ್ನರ್​ ಅಥವಾ ಎಲಿಮಿನೇಷನ್​ ಇರುವುದಿಲ್ಲ.

ದೊಡ್ಮನೆಯಲ್ಲಿ ಕಿರಣ್​ ರಾಜ್​ ವಿಶೇಷ ಮನವಿ; ಇದನ್ನು ಬಿಗ್​ ಬಾಸ್​ ಸ್ವೀಕರಿಸ್ತಾರ?
ಕಿರಣ್​ ರಾಜ್
TV9 Web
| Edited By: |

Updated on: Aug 21, 2021 | 7:13 AM

Share

ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಂತರದಲ್ಲಿ ಹೊರ ಜಗತ್ತಿನ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳುತ್ತದೆ. ಮನೆ ಒಳಗೆ ತೆರಳಿದ ಸ್ಪರ್ಧಿಗಳು ಮೊಬೈಲ್​ ಬಳಕೆ ಮಾಡುವಂತೇ ಇಲ್ಲ. ಈ ಕಾರಣಕ್ಕೆ ಸ್ಪರ್ಧಿಗಳು ಮನೆಯವರ ಜತೆ ಮಾತನಾಡಬೇಕು, ಏನಾದರೂ ಬೇಕಾದರೆ ಬಿಗ್​ ಬಾಸ್​ ಜತೆ ಮಾತನಾಡಬೇಕು. ಈಗ ಬಿಗ್​ ಬಾಸ್​ ಮನೆಯಲ್ಲಿ ಕಿರಣ್​ ರಾಜ್​ ಬಿಗ್​ ಬಾಸ್​ಗೆ ವಿಶೇಷ ಮನವಿಯೊಂದನ್ನು ಇಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯೊಳಗೆ 16 ಸ್ಪರ್ಧಿಗಳು ಸೇರಿದ್ದಾರೆ. ಎಲ್ಲರೂ ಧಾರಾವಾಹಿಯಲ್ಲಿ ಗುರುತಿಸಿಕೊಂಡವರು ಎಂಬುದು ವಿಶೇಷ. ಇದು ಮಿನಿ ಸೀಸನ್​ ಆಗಿದ್ದು, ಇಲ್ಲಿ ವಿನ್ನರ್​ ಅಥವಾ ಎಲಿಮಿನೇಷನ್​ ಇರುವುದಿಲ್ಲ. ಈ ಕಾರಣಕ್ಕೆ ಎಲ್ಲಾ ಸ್ಪರ್ಧಿಗಳು ಹಾಯಾಗಿ ದಿನ ಕಳೆಯುತ್ತಿದ್ದಾರೆ. ಕನ್ನಡತಿ ಧಾರಾವಾಹಿ ಮೂಲಕ ಹೆಚ್ಚು ಮನೆಮಾತಾದ ಕಿರಣ್​ ರಾಜ್​ ಕೂಡ ಬಿಗ್​ ಬಾಸ್​ ಮನೆ ಸೇರಿದ್ದಾರೆ. ಅವರು ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಗಗನ್​ ಚಿನ್ನಪ್ಪ ಹಾಗೂ ಕಿರಣ್​ ರಾಜ್​ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಗಗನ್​, ‘ಇಲ್ಲಿ ನಾವು ನಿತ್ಯ ಒಂದೊಂದು ಕೆಲಸ ಮಾಡುತ್ತಿದ್ದೇವೆ. ಏಕೆಂದರೆ ಇದು ಒಂದು ವಾರದ ಬಿಗ್​ ಬಾಸ್. ಆದರೆ, 100 ದಿನಗಳ ಬಿಗ್​ ಬಾಸ್​ನಲ್ಲಿ ಎಲ್ಲರೂ ಪ್ರತಿ ಕೆಲಸವನ್ನು ಒಂದು ವಾರ ಮಾಡಬೇಕು. ಪಾತ್ರೆ ತೊಳೆಯೋದೆಲ್ಲ ಒಂದು ವಾರ ಮಾಡೋಕೆ ಸಾಧ್ಯವೇ ಇಲ್ಲ’ ಎಂದಿದ್ದಾರೆ. ಇದಕ್ಕೆ ಕಿರಣ್​ ರಾಜ್​ ಕೂಡ ತಲೆ ಆಡಿಸಿದ್ದಾರೆ. ‘ಬಾಳೆ ಎಲೆ ತಂದುಕೊಡಿ ಬಿಗ್​ ಬಾಸ್​’ ಎಂದು ನಾನು ಕೇಳುತ್ತಿದ್ದೆ ಎಂದಿದ್ದಾರೆ ಕಿರಣ್​ ರಾಜ್​.

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸ್ಪರ್ಧಿಗಳು ಹಾಸ್ಯಕ್ಕೆ ಕೆಲ ಮಾತುಗಳನ್ನು ಆಡಿದ್ದರು. ಇದನ್ನು ಅಚ್ಚರಿ ಎಂಬಂತೆ ಬಿಗ್​ ಬಾಸ್​ ಈಡೇರಿಸಿದ್ದರು. ಈಗ ಕಿರಣ್​ ರಾಜ್​ ಬೇಡಿಕೆಯನ್ನು ಬಿಗ್​ ಬಾಸ್​ ಈಡೇರಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಬಿಗ್​ ಬಾಸ್​ ಈ ಭಾನುವಾರ (ಆಗಸ್ಟ್ 22) ಪೂರ್ಣಗೊಳ್ಳಲಿದೆ. ಕೊನೆಯ ದಿನವನ್ನು ನಡೆಸಿಕೊಡೋಕೆ ಕಿಚ್ಚ ಸುದೀಪ್​ ಆಗಮಿಸುತ್ತಿದ್ದಾರೆ ಅನ್ನೋದು ವಿಶೇಷ. ಈ ಎಪಿಸೋಡ್​ಗಾಗಿ ವೀಕ್ಷಕರು ಕಾದು ಕೂತಿದ್ದಾರೆ.

ಇದನ್ನೂ ಓದಿ:

 ‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ