AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆಯಲ್ಲಿ ಕಿರಣ್​ ರಾಜ್​ ವಿಶೇಷ ಮನವಿ; ಇದನ್ನು ಬಿಗ್​ ಬಾಸ್​ ಸ್ವೀಕರಿಸ್ತಾರ?

ಬಿಗ್​ ಬಾಸ್​ ಮನೆಯೊಳಗೆ 16 ಸ್ಪರ್ಧಿಗಳು ಸೇರಿದ್ದಾರೆ. ಎಲ್ಲರೂ ಧಾರಾವಾಹಿಯಲ್ಲಿ ಗುರುತಿಸಿಕೊಂಡವರು ಎಂಬುದು ವಿಶೇಷ. ಇದು ಮಿನಿ ಸೀಸನ್​ ಆಗಿದ್ದು, ಇಲ್ಲಿ ವಿನ್ನರ್​ ಅಥವಾ ಎಲಿಮಿನೇಷನ್​ ಇರುವುದಿಲ್ಲ.

ದೊಡ್ಮನೆಯಲ್ಲಿ ಕಿರಣ್​ ರಾಜ್​ ವಿಶೇಷ ಮನವಿ; ಇದನ್ನು ಬಿಗ್​ ಬಾಸ್​ ಸ್ವೀಕರಿಸ್ತಾರ?
ಕಿರಣ್​ ರಾಜ್
TV9 Web
| Edited By: |

Updated on: Aug 21, 2021 | 7:13 AM

Share

ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಂತರದಲ್ಲಿ ಹೊರ ಜಗತ್ತಿನ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳುತ್ತದೆ. ಮನೆ ಒಳಗೆ ತೆರಳಿದ ಸ್ಪರ್ಧಿಗಳು ಮೊಬೈಲ್​ ಬಳಕೆ ಮಾಡುವಂತೇ ಇಲ್ಲ. ಈ ಕಾರಣಕ್ಕೆ ಸ್ಪರ್ಧಿಗಳು ಮನೆಯವರ ಜತೆ ಮಾತನಾಡಬೇಕು, ಏನಾದರೂ ಬೇಕಾದರೆ ಬಿಗ್​ ಬಾಸ್​ ಜತೆ ಮಾತನಾಡಬೇಕು. ಈಗ ಬಿಗ್​ ಬಾಸ್​ ಮನೆಯಲ್ಲಿ ಕಿರಣ್​ ರಾಜ್​ ಬಿಗ್​ ಬಾಸ್​ಗೆ ವಿಶೇಷ ಮನವಿಯೊಂದನ್ನು ಇಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯೊಳಗೆ 16 ಸ್ಪರ್ಧಿಗಳು ಸೇರಿದ್ದಾರೆ. ಎಲ್ಲರೂ ಧಾರಾವಾಹಿಯಲ್ಲಿ ಗುರುತಿಸಿಕೊಂಡವರು ಎಂಬುದು ವಿಶೇಷ. ಇದು ಮಿನಿ ಸೀಸನ್​ ಆಗಿದ್ದು, ಇಲ್ಲಿ ವಿನ್ನರ್​ ಅಥವಾ ಎಲಿಮಿನೇಷನ್​ ಇರುವುದಿಲ್ಲ. ಈ ಕಾರಣಕ್ಕೆ ಎಲ್ಲಾ ಸ್ಪರ್ಧಿಗಳು ಹಾಯಾಗಿ ದಿನ ಕಳೆಯುತ್ತಿದ್ದಾರೆ. ಕನ್ನಡತಿ ಧಾರಾವಾಹಿ ಮೂಲಕ ಹೆಚ್ಚು ಮನೆಮಾತಾದ ಕಿರಣ್​ ರಾಜ್​ ಕೂಡ ಬಿಗ್​ ಬಾಸ್​ ಮನೆ ಸೇರಿದ್ದಾರೆ. ಅವರು ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಗಗನ್​ ಚಿನ್ನಪ್ಪ ಹಾಗೂ ಕಿರಣ್​ ರಾಜ್​ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಗಗನ್​, ‘ಇಲ್ಲಿ ನಾವು ನಿತ್ಯ ಒಂದೊಂದು ಕೆಲಸ ಮಾಡುತ್ತಿದ್ದೇವೆ. ಏಕೆಂದರೆ ಇದು ಒಂದು ವಾರದ ಬಿಗ್​ ಬಾಸ್. ಆದರೆ, 100 ದಿನಗಳ ಬಿಗ್​ ಬಾಸ್​ನಲ್ಲಿ ಎಲ್ಲರೂ ಪ್ರತಿ ಕೆಲಸವನ್ನು ಒಂದು ವಾರ ಮಾಡಬೇಕು. ಪಾತ್ರೆ ತೊಳೆಯೋದೆಲ್ಲ ಒಂದು ವಾರ ಮಾಡೋಕೆ ಸಾಧ್ಯವೇ ಇಲ್ಲ’ ಎಂದಿದ್ದಾರೆ. ಇದಕ್ಕೆ ಕಿರಣ್​ ರಾಜ್​ ಕೂಡ ತಲೆ ಆಡಿಸಿದ್ದಾರೆ. ‘ಬಾಳೆ ಎಲೆ ತಂದುಕೊಡಿ ಬಿಗ್​ ಬಾಸ್​’ ಎಂದು ನಾನು ಕೇಳುತ್ತಿದ್ದೆ ಎಂದಿದ್ದಾರೆ ಕಿರಣ್​ ರಾಜ್​.

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸ್ಪರ್ಧಿಗಳು ಹಾಸ್ಯಕ್ಕೆ ಕೆಲ ಮಾತುಗಳನ್ನು ಆಡಿದ್ದರು. ಇದನ್ನು ಅಚ್ಚರಿ ಎಂಬಂತೆ ಬಿಗ್​ ಬಾಸ್​ ಈಡೇರಿಸಿದ್ದರು. ಈಗ ಕಿರಣ್​ ರಾಜ್​ ಬೇಡಿಕೆಯನ್ನು ಬಿಗ್​ ಬಾಸ್​ ಈಡೇರಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಬಿಗ್​ ಬಾಸ್​ ಈ ಭಾನುವಾರ (ಆಗಸ್ಟ್ 22) ಪೂರ್ಣಗೊಳ್ಳಲಿದೆ. ಕೊನೆಯ ದಿನವನ್ನು ನಡೆಸಿಕೊಡೋಕೆ ಕಿಚ್ಚ ಸುದೀಪ್​ ಆಗಮಿಸುತ್ತಿದ್ದಾರೆ ಅನ್ನೋದು ವಿಶೇಷ. ಈ ಎಪಿಸೋಡ್​ಗಾಗಿ ವೀಕ್ಷಕರು ಕಾದು ಕೂತಿದ್ದಾರೆ.

ಇದನ್ನೂ ಓದಿ:

 ‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ