AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ

ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ಧಾರಾವಾಹಿಯ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ತೆರಳಿದ್ದಾರೆ. ಒಂದು ವಾರಗಳ ಕಾಲ ವಿವಿಧ ರೀತಿಯ ಟಾಸ್ಕ್​ಗಳನ್ನು ಆಡಲಿದ್ದಾರೆ.

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ
ಕಿರಣ್​ ರಾಜ್​
TV9 Web
| Edited By: |

Updated on: Aug 16, 2021 | 7:12 AM

Share

ಬಿಗ್​ ಬಾಸ್​ ಮನೆ ಪ್ರವೇಶಿಸೋಕೆ ಸಾಕಷ್ಟು ಜನರು ಪ್ರಯತ್ನಿಸುತ್ತಿರುತ್ತಾರೆ. ಆದರೆ, ಕೆಲವರು ಈ ಬಗ್ಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ತಮ್ಮ ಬಳಿ ಆಫರ್​ ಬಂದರೂ ಅದನ್ನು ತಿರಸ್ಕರಿಸುತ್ತಾರೆ. ಇದಕ್ಕೆ ಅವರು ನೀಡೋ ಕಾರಣ ಬೇರೆಬೇರೆ. ಕೆಲವರಿಗೆ ಬಿಗ್​ ಬಾಸ್​ ಮನೆ ಒಳಗೆ ಹೋದರೆ ಅಲ್ಲಿ ಬರುವ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಬಗ್ಗೆ ಗೊತ್ತಿರುವುದಿಲ್ಲ. ಜಗಳಗಳು ನಡೆದಾಗ ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ಅದರ ಭಾಗವಾಗಬೇಕಾಗುತ್ತದೆ. ಈ ಕಾರಣಕ್ಕೆ ಕೆಲವರು ಬಿಗ್​ ಬಾಸ್​ ಆಫರ್​ ತಿರಸ್ಕರಿಸುತ್ತಾರೆ. ‘ಕನ್ನಡತಿ’ ಕಿರಣ್​ ರಾಜ್ ಅವರಿಗೂ ಬಿಗ್​ ಬಾಸ್​ ಆಫರ್​ ಬಂದಿತ್ತಂತೆ. ಆದರೆ, ಅದನ್ನು ಅವರು ತಿರಸ್ಕರಿಸಿದ್ದರು. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ಧಾರಾವಾಹಿಯ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ತೆರಳಿದ್ದಾರೆ. ಒಂದು ವಾರಗಳ ಕಾಲ ವಿವಿಧ ರೀತಿಯ ಟಾಸ್ಕ್​ಗಳನ್ನು ಆಡಲಿದ್ದಾರೆ. ಕಿರಣ್​ ರಾಜ್​ ಕೂಡ ಬಿಗ್​ ಬಾಸ್​ ಮನೆಯಲ್ಲಿದ್ದಾರೆ. ಅವರು ಬಿಗ್​ ಬಾಸ್​ ಆಫರ್​ ಬಗ್ಗೆ ಮಾತನಾಡಿದ್ದಾರೆ.

‘ಕನ್ನಡತಿ’ ಧಾರಾವಾಹಿಗಿಂತ ಮೊದಲು ಬಿಗ್​ ಬಾಸ್ ಆಫರ್​ ಬಂದಿತ್ತು. ಆದರೆ, ಒಪ್ಪಿಕೊಂಡಿರಲಿಲ್ಲ. ಸ್ವಲ್ಪ ಆರೋಗ್ಯದ ಸಮಸ್ಯೆ ಆಗಿತ್ತು. ಹಾಗಾಗಿ ಬಿಗ್​ ಬಾಸ್​ ಆಫರ್​ ತಿರಸ್ಕರಿಸಿದ್ದೆ’ ಎಂದಿದ್ದಾರೆ. ಇದರ ಜತೆಗೆ ಅವರು ಮತ್ತೊಂದಷ್ಟು ಕಾರಣವನ್ನು ನೀಡಿದ್ದಾರೆ.

‘ಭವಿಷ್ಯದಲ್ಲಿ ಬಿಗ್​ ಬಾಸ್​ ಆಫರ್​ ಬಂದ್ರೆ ಮಾಡ್ತೀರಾ’ ಎಂದು ಅಕುಲ್​ ಬಾಲಾಜಿ ಪ್ರಶ್ನೆ ಮಾಡಿದರು. ಇದಕ್ಕೆ ಕಿರಣ್​ ರಾಜ್​, ‘ಆ ಸಮಯ ನೋಡಿಕೊಂಡು ನಿರ್ಧಾರ ಮಾಡ್ತೀನಿ. ಆಗ ಏನಾಗಿರುತ್ತೆ ಎಂದು ಹೇಳೋಕೆ ಆಗಲ್ಲ’ ಎಂದರು. ‘ಬಿಗ್​ ಬಾಸ್​ ಬಗ್ಗೆ ಇರೋ ಭಯಗಳೇನು’ ಎನ್ನುವ ಪ್ರಶ್ನೆ ಅಕುಲ್​ ಕಡೆಯಿಂದ ಬಂತು. ‘ನನ್ನ ತಪ್ಪಿದ್ದಾಗ ನಾನು ಎದುರಿನವರು ಹೇಳಿದ್ದನ್ನು ಕೇಳುತ್ತೇನೆ. ಆದರೆ, ಸುಖಾಸುಮ್ಮನೆ ಇನ್ಸಲ್ಟ್​ ಸ್ವೀಕರಿಸೋಕೆ ನಾನು ರೆಡಿ ಇಲ್ಲ. ಆಗ ಕೋಪ ಬರುತ್ತದೆ. ನಾನು ಎಲ್ಲರಿಗೂ ಗೌರವ ಕೊಡ್ತೀನಿ, ಎದುರಿನ ವ್ಯಕ್ತಿಗಳಿಂದಲೂ ನಾನು ಅದನ್ನೇ ನಿರೀಕ್ಷೆ ಮಾಡುತ್ತೇನೆ ’ ಎಂದರು ಕಿರಣ್​ ರಾಜ್​.

ಕಿರಣ್​ ರಾಜ್​ ಹೇಳಿದಂತೆ ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದಿಲ್ಲ. ಕೆಲವೊಮ್ಮೆ ಪರಿಸ್ಥಿತಿಗಳು ಬದಲಾಗುತ್ತವೆ. ಅನಾವಶ್ಯಕ ಜಗಳಗಳು ಹುಟ್ಟಿಕೊಳ್ಳುವ ಸಾಧ್ಯತೆ ಇರುತ್ತದೆ. ಇದು ಬೇಸರ ತರಬಹುದು ಎನ್ನುವ ಭಯಕ್ಕೆ ಕಿರಣ್​ ರಾಜ್​ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ.

ಇದನ್ನೂ ಓದಿ:

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು