ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ

ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ಧಾರಾವಾಹಿಯ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ತೆರಳಿದ್ದಾರೆ. ಒಂದು ವಾರಗಳ ಕಾಲ ವಿವಿಧ ರೀತಿಯ ಟಾಸ್ಕ್​ಗಳನ್ನು ಆಡಲಿದ್ದಾರೆ.

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ
ಕಿರಣ್​ ರಾಜ್​
Follow us
| Updated By: ಮದನ್​ ಕುಮಾರ್​

Updated on: Aug 16, 2021 | 7:12 AM

ಬಿಗ್​ ಬಾಸ್​ ಮನೆ ಪ್ರವೇಶಿಸೋಕೆ ಸಾಕಷ್ಟು ಜನರು ಪ್ರಯತ್ನಿಸುತ್ತಿರುತ್ತಾರೆ. ಆದರೆ, ಕೆಲವರು ಈ ಬಗ್ಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ತಮ್ಮ ಬಳಿ ಆಫರ್​ ಬಂದರೂ ಅದನ್ನು ತಿರಸ್ಕರಿಸುತ್ತಾರೆ. ಇದಕ್ಕೆ ಅವರು ನೀಡೋ ಕಾರಣ ಬೇರೆಬೇರೆ. ಕೆಲವರಿಗೆ ಬಿಗ್​ ಬಾಸ್​ ಮನೆ ಒಳಗೆ ಹೋದರೆ ಅಲ್ಲಿ ಬರುವ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಬಗ್ಗೆ ಗೊತ್ತಿರುವುದಿಲ್ಲ. ಜಗಳಗಳು ನಡೆದಾಗ ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ಅದರ ಭಾಗವಾಗಬೇಕಾಗುತ್ತದೆ. ಈ ಕಾರಣಕ್ಕೆ ಕೆಲವರು ಬಿಗ್​ ಬಾಸ್​ ಆಫರ್​ ತಿರಸ್ಕರಿಸುತ್ತಾರೆ. ‘ಕನ್ನಡತಿ’ ಕಿರಣ್​ ರಾಜ್ ಅವರಿಗೂ ಬಿಗ್​ ಬಾಸ್​ ಆಫರ್​ ಬಂದಿತ್ತಂತೆ. ಆದರೆ, ಅದನ್ನು ಅವರು ತಿರಸ್ಕರಿಸಿದ್ದರು. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ಧಾರಾವಾಹಿಯ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ತೆರಳಿದ್ದಾರೆ. ಒಂದು ವಾರಗಳ ಕಾಲ ವಿವಿಧ ರೀತಿಯ ಟಾಸ್ಕ್​ಗಳನ್ನು ಆಡಲಿದ್ದಾರೆ. ಕಿರಣ್​ ರಾಜ್​ ಕೂಡ ಬಿಗ್​ ಬಾಸ್​ ಮನೆಯಲ್ಲಿದ್ದಾರೆ. ಅವರು ಬಿಗ್​ ಬಾಸ್​ ಆಫರ್​ ಬಗ್ಗೆ ಮಾತನಾಡಿದ್ದಾರೆ.

‘ಕನ್ನಡತಿ’ ಧಾರಾವಾಹಿಗಿಂತ ಮೊದಲು ಬಿಗ್​ ಬಾಸ್ ಆಫರ್​ ಬಂದಿತ್ತು. ಆದರೆ, ಒಪ್ಪಿಕೊಂಡಿರಲಿಲ್ಲ. ಸ್ವಲ್ಪ ಆರೋಗ್ಯದ ಸಮಸ್ಯೆ ಆಗಿತ್ತು. ಹಾಗಾಗಿ ಬಿಗ್​ ಬಾಸ್​ ಆಫರ್​ ತಿರಸ್ಕರಿಸಿದ್ದೆ’ ಎಂದಿದ್ದಾರೆ. ಇದರ ಜತೆಗೆ ಅವರು ಮತ್ತೊಂದಷ್ಟು ಕಾರಣವನ್ನು ನೀಡಿದ್ದಾರೆ.

‘ಭವಿಷ್ಯದಲ್ಲಿ ಬಿಗ್​ ಬಾಸ್​ ಆಫರ್​ ಬಂದ್ರೆ ಮಾಡ್ತೀರಾ’ ಎಂದು ಅಕುಲ್​ ಬಾಲಾಜಿ ಪ್ರಶ್ನೆ ಮಾಡಿದರು. ಇದಕ್ಕೆ ಕಿರಣ್​ ರಾಜ್​, ‘ಆ ಸಮಯ ನೋಡಿಕೊಂಡು ನಿರ್ಧಾರ ಮಾಡ್ತೀನಿ. ಆಗ ಏನಾಗಿರುತ್ತೆ ಎಂದು ಹೇಳೋಕೆ ಆಗಲ್ಲ’ ಎಂದರು. ‘ಬಿಗ್​ ಬಾಸ್​ ಬಗ್ಗೆ ಇರೋ ಭಯಗಳೇನು’ ಎನ್ನುವ ಪ್ರಶ್ನೆ ಅಕುಲ್​ ಕಡೆಯಿಂದ ಬಂತು. ‘ನನ್ನ ತಪ್ಪಿದ್ದಾಗ ನಾನು ಎದುರಿನವರು ಹೇಳಿದ್ದನ್ನು ಕೇಳುತ್ತೇನೆ. ಆದರೆ, ಸುಖಾಸುಮ್ಮನೆ ಇನ್ಸಲ್ಟ್​ ಸ್ವೀಕರಿಸೋಕೆ ನಾನು ರೆಡಿ ಇಲ್ಲ. ಆಗ ಕೋಪ ಬರುತ್ತದೆ. ನಾನು ಎಲ್ಲರಿಗೂ ಗೌರವ ಕೊಡ್ತೀನಿ, ಎದುರಿನ ವ್ಯಕ್ತಿಗಳಿಂದಲೂ ನಾನು ಅದನ್ನೇ ನಿರೀಕ್ಷೆ ಮಾಡುತ್ತೇನೆ ’ ಎಂದರು ಕಿರಣ್​ ರಾಜ್​.

ಕಿರಣ್​ ರಾಜ್​ ಹೇಳಿದಂತೆ ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದಿಲ್ಲ. ಕೆಲವೊಮ್ಮೆ ಪರಿಸ್ಥಿತಿಗಳು ಬದಲಾಗುತ್ತವೆ. ಅನಾವಶ್ಯಕ ಜಗಳಗಳು ಹುಟ್ಟಿಕೊಳ್ಳುವ ಸಾಧ್ಯತೆ ಇರುತ್ತದೆ. ಇದು ಬೇಸರ ತರಬಹುದು ಎನ್ನುವ ಭಯಕ್ಕೆ ಕಿರಣ್​ ರಾಜ್​ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ.

ಇದನ್ನೂ ಓದಿ:

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ