Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ

ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ಧಾರಾವಾಹಿಯ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ತೆರಳಿದ್ದಾರೆ. ಒಂದು ವಾರಗಳ ಕಾಲ ವಿವಿಧ ರೀತಿಯ ಟಾಸ್ಕ್​ಗಳನ್ನು ಆಡಲಿದ್ದಾರೆ.

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ
ಕಿರಣ್​ ರಾಜ್​
Follow us
TV9 Web
| Updated By: ಮದನ್​ ಕುಮಾರ್​

Updated on: Aug 16, 2021 | 7:12 AM

ಬಿಗ್​ ಬಾಸ್​ ಮನೆ ಪ್ರವೇಶಿಸೋಕೆ ಸಾಕಷ್ಟು ಜನರು ಪ್ರಯತ್ನಿಸುತ್ತಿರುತ್ತಾರೆ. ಆದರೆ, ಕೆಲವರು ಈ ಬಗ್ಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ತಮ್ಮ ಬಳಿ ಆಫರ್​ ಬಂದರೂ ಅದನ್ನು ತಿರಸ್ಕರಿಸುತ್ತಾರೆ. ಇದಕ್ಕೆ ಅವರು ನೀಡೋ ಕಾರಣ ಬೇರೆಬೇರೆ. ಕೆಲವರಿಗೆ ಬಿಗ್​ ಬಾಸ್​ ಮನೆ ಒಳಗೆ ಹೋದರೆ ಅಲ್ಲಿ ಬರುವ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಬಗ್ಗೆ ಗೊತ್ತಿರುವುದಿಲ್ಲ. ಜಗಳಗಳು ನಡೆದಾಗ ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ಅದರ ಭಾಗವಾಗಬೇಕಾಗುತ್ತದೆ. ಈ ಕಾರಣಕ್ಕೆ ಕೆಲವರು ಬಿಗ್​ ಬಾಸ್​ ಆಫರ್​ ತಿರಸ್ಕರಿಸುತ್ತಾರೆ. ‘ಕನ್ನಡತಿ’ ಕಿರಣ್​ ರಾಜ್ ಅವರಿಗೂ ಬಿಗ್​ ಬಾಸ್​ ಆಫರ್​ ಬಂದಿತ್ತಂತೆ. ಆದರೆ, ಅದನ್ನು ಅವರು ತಿರಸ್ಕರಿಸಿದ್ದರು. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ಧಾರಾವಾಹಿಯ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ತೆರಳಿದ್ದಾರೆ. ಒಂದು ವಾರಗಳ ಕಾಲ ವಿವಿಧ ರೀತಿಯ ಟಾಸ್ಕ್​ಗಳನ್ನು ಆಡಲಿದ್ದಾರೆ. ಕಿರಣ್​ ರಾಜ್​ ಕೂಡ ಬಿಗ್​ ಬಾಸ್​ ಮನೆಯಲ್ಲಿದ್ದಾರೆ. ಅವರು ಬಿಗ್​ ಬಾಸ್​ ಆಫರ್​ ಬಗ್ಗೆ ಮಾತನಾಡಿದ್ದಾರೆ.

‘ಕನ್ನಡತಿ’ ಧಾರಾವಾಹಿಗಿಂತ ಮೊದಲು ಬಿಗ್​ ಬಾಸ್ ಆಫರ್​ ಬಂದಿತ್ತು. ಆದರೆ, ಒಪ್ಪಿಕೊಂಡಿರಲಿಲ್ಲ. ಸ್ವಲ್ಪ ಆರೋಗ್ಯದ ಸಮಸ್ಯೆ ಆಗಿತ್ತು. ಹಾಗಾಗಿ ಬಿಗ್​ ಬಾಸ್​ ಆಫರ್​ ತಿರಸ್ಕರಿಸಿದ್ದೆ’ ಎಂದಿದ್ದಾರೆ. ಇದರ ಜತೆಗೆ ಅವರು ಮತ್ತೊಂದಷ್ಟು ಕಾರಣವನ್ನು ನೀಡಿದ್ದಾರೆ.

‘ಭವಿಷ್ಯದಲ್ಲಿ ಬಿಗ್​ ಬಾಸ್​ ಆಫರ್​ ಬಂದ್ರೆ ಮಾಡ್ತೀರಾ’ ಎಂದು ಅಕುಲ್​ ಬಾಲಾಜಿ ಪ್ರಶ್ನೆ ಮಾಡಿದರು. ಇದಕ್ಕೆ ಕಿರಣ್​ ರಾಜ್​, ‘ಆ ಸಮಯ ನೋಡಿಕೊಂಡು ನಿರ್ಧಾರ ಮಾಡ್ತೀನಿ. ಆಗ ಏನಾಗಿರುತ್ತೆ ಎಂದು ಹೇಳೋಕೆ ಆಗಲ್ಲ’ ಎಂದರು. ‘ಬಿಗ್​ ಬಾಸ್​ ಬಗ್ಗೆ ಇರೋ ಭಯಗಳೇನು’ ಎನ್ನುವ ಪ್ರಶ್ನೆ ಅಕುಲ್​ ಕಡೆಯಿಂದ ಬಂತು. ‘ನನ್ನ ತಪ್ಪಿದ್ದಾಗ ನಾನು ಎದುರಿನವರು ಹೇಳಿದ್ದನ್ನು ಕೇಳುತ್ತೇನೆ. ಆದರೆ, ಸುಖಾಸುಮ್ಮನೆ ಇನ್ಸಲ್ಟ್​ ಸ್ವೀಕರಿಸೋಕೆ ನಾನು ರೆಡಿ ಇಲ್ಲ. ಆಗ ಕೋಪ ಬರುತ್ತದೆ. ನಾನು ಎಲ್ಲರಿಗೂ ಗೌರವ ಕೊಡ್ತೀನಿ, ಎದುರಿನ ವ್ಯಕ್ತಿಗಳಿಂದಲೂ ನಾನು ಅದನ್ನೇ ನಿರೀಕ್ಷೆ ಮಾಡುತ್ತೇನೆ ’ ಎಂದರು ಕಿರಣ್​ ರಾಜ್​.

ಕಿರಣ್​ ರಾಜ್​ ಹೇಳಿದಂತೆ ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದಿಲ್ಲ. ಕೆಲವೊಮ್ಮೆ ಪರಿಸ್ಥಿತಿಗಳು ಬದಲಾಗುತ್ತವೆ. ಅನಾವಶ್ಯಕ ಜಗಳಗಳು ಹುಟ್ಟಿಕೊಳ್ಳುವ ಸಾಧ್ಯತೆ ಇರುತ್ತದೆ. ಇದು ಬೇಸರ ತರಬಹುದು ಎನ್ನುವ ಭಯಕ್ಕೆ ಕಿರಣ್​ ರಾಜ್​ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ.

ಇದನ್ನೂ ಓದಿ:

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ