AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ಮೂಲ ನಿಯಮ ಮುರಿದ ಕಿರಣ್ ಶಾಸ್ತ್ರಿಗೆ ಕಠಿಣ ಶಿಕ್ಷೆ

ಕಿರಣ್ ಶಾಸ್ತ್ರಿ ಅವರು ಪದೇ ಪದೇ ಬಿಗ್ ಬಾಸ್ ಮನೆಯಲ್ಲಿ ಮೂಲ ನಿಯಮವನ್ನು ಮುರಿದಿದ್ದಾರೆ. ಹಾಗಾಗಿ ಅವರಿಗೆ ಶಿಕ್ಷೆ ನೀಡಲಾಗಿದೆ. ಶಿಕ್ಷೆ ನೀಡಿದ ಬಳಿಕ ಕಿರಣ್ ಶಾಸ್ತ್ರಿ ಅವರು ಗಳಗಳನೆ ಅತ್ತಿದ್ದಾರೆ. ಅಲ್ಲದೇ, ಶಿಕ್ಷೆ ಪಾಲಿಸುವ ಬದಲು ಇನ್ನುಳಿದ ಸ್ಪರ್ಧಿಗಳ ಮೇಲೆ ಸೇಡು ತೀರಿಸಿಕೊಳ್ಳಲು ಅವರು ಪ್ಲ್ಯಾನ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯ ಮೂಲ ನಿಯಮ ಮುರಿದ ಕಿರಣ್ ಶಾಸ್ತ್ರಿಗೆ ಕಠಿಣ ಶಿಕ್ಷೆ
Kiran ShastriImage Credit source: Colors Kannada
ಮದನ್​ ಕುಮಾರ್​
|

Updated on: Sep 17, 2026 | 10:37 PM

Share

‘ಬಿಗ್ ಬಾಸ್ ಕನ್ನಡ’ ಶೋನಲ್ಲಿ ಕೆಲವು ಮೂಲ ನಿಯಮಗಳು ಇವೆ. ಅದರಲ್ಲಿ ಮುಖ್ಯವಾಗಿದ್ದು ಏನೆಂದರೆ, ಲೈಟ್ ಆಫ್ ಆಗುವುದಕ್ಕೂ ಮುನ್ನ ಯಾರೂ ನಿದ್ರೆ ಮಾಡುವಂತಿಲ್ಲ. ಒಂದು ವೇಳೆ ಈ ನಿಯಮ ಮುರಿದರೆ ಶಿಕ್ಷೆ ನೀಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ. ಲೈಟ್ ಆಫ್ ಆಗುವುದಕ್ಕೂ ಮುನ್ನ ಕಿರಣ್ ಶಾಸ್ತ್ರಿ ನಿದ್ರೆ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಹಾಗಾಗಿ ಅವರಿಗೆ ಶಿಕ್ಷೆ ನೀಡಲಾಗಿದೆ.

ಸ್ಪರ್ಧಿಗಳು ಪದೇಪದೇ ನಿದ್ರೆ ಮಾಡಿರುವುದು ಬಿಗ್ ಬಾಸ್ ಗಮನಕ್ಕೆ ಬಂದಿದೆ. ಆದ್ದರಿಂದ ಸ್ಪರ್ಧಿಗಳು ತಮ್ಮಲ್ಲೇ ಚರ್ಚಿಸಿ ಇಬ್ಬರು ತಪ್ಪಿತಸ್ತರ ಹೆಸರನ್ನು ತಿಳಿಸುವಂತೆ ಸೂಚಿಸಲಾಯಿತು. ಎಲ್ಲರೂ ಸೇರಿ ಕಿರಣ್ ಶಾಸ್ತ್ರಿ ಮತ್ತು ಲಿಖಿತ್ ಹೆಸರನ್ನು ಅಂತಿಮಗೊಳಿಸಿದರು. ಹಾಗಾಗಿ ಈ ಇಬ್ಬರು ಸ್ಪರ್ಧಿಗಳಿಗೆ ಬಿಗ್​ ಬಾಸ್ ಒಂದು ಶಿಕ್ಷೆ ನೀಡಿದರು.

ಕಿರಣ್ ಶಾಸ್ತ್ರಿ ಮತ್ತು ಲಿಖಿತ್ ಅವರ ಹಾಸಿಗೆ, ದಿಂಬು ಮತ್ತು ಹೊದಿಕೆಯನ್ನು ಹಿಂಪಡೆಯಲಾಗಿದೆ. ಆದ್ದರಿಂದ ರಾತ್ರಿ ವೇಳೆ ಮಲಗುವುದು ಕಷ್ಟ ಆಗಲಿದೆ. ಎಲ್ಲರೂ ಸೇರಿ ತಮ್ಮನ್ನು ಟಾರ್ಗೆಟ್ ಮಾಡಿದ್ದಕ್ಕೆ ಕಿರಣ್ ಶಾಸ್ತ್ರಿ ಅವರಿಗೆ ಬೇಸರ ಆಗಿದೆ. ಎಲ್ಲರ ಎದುರಲ್ಲಿ ಅವರು ಕಣ್ಣೀರು ಹಾಕಿದ್ದಾರೆ. ಸಂಗೀತಾ ಭಟ್, ಆಸಿಯಾ ಮುಂತಾದವರು ಶಾಸ್ತ್ರಿಯನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ.

ಲಿಖಿತ್ ಮತ್ತು ಕಿರಣ್ ಶಾಸ್ತ್ರಿಗೆ ಶಿಕ್ಷೆ ನೀಡಲಾಗಿದ್ದರೂ ಕೂಡ ಆ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಇನ್ನುಳಿದ ಸ್ಪರ್ಧಿಗಳಿಗೆ ನೀಡಲಾಗಿದೆ. ಒಂದು ವೇಳೆ ಲಿಖಿತ್ ಮತ್ತು ಕಿರಣ್ ಶಾಸ್ತ್ರಿ ಶಿಕ್ಷೆ ಅನುಭವಿಸುವಲ್ಲಿ ವಿಫಲವಾದರೆ ಅದರ ಪರಿಣಾಮವನ್ನು ಬೇರೆ ಎಲ್ಲ ಸ್ಪರ್ಧಿಗಳೂ ಎದುರಿಸಬೇಕಾಗುತ್ತದೆ. ಹಾಗಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ.

ಇದನ್ನೂ ಓದಿ: ‘ಬಳೆ ಹಾಕಿಕೊಂಡು ಕುಳಿತುಕೊಳ್ಳಿ’ ಎಂದ ಕಿರಣ್ ಶಾಸ್ತ್ರಿ; ಬಿಗ್ ಬಾಸ್‌ ಮನೆಯಲ್ಲಿ ಮತ್ತೆ ಬಳೆ ವಿವಾದ

ಬಿಗ್ ಬಾಸ್ ನೀಡಿರುವ ಶಿಕ್ಷೆಯನ್ನು ಅನುಭವಿಸದೇ ಬೆಡ್ ಮೇಲೆ ಮಲಗಲು ಕಿರಣ್ ಶಾಸ್ತ್ರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆ ರೀತಿ ಮಾಡುವುದರಿಂದ ಇನ್ನುಳಿದ ಸ್ಪರ್ಧಿಗಳಿಗೆ ಶಿಕ್ಷೆ ಕೊಡಿಸಲು ಅವರು ನಿರ್ಧರಿಸಿದ್ದಾರೆ. ಇದು ನಿದ್ರೆಯ ವಿಚಾರವಾದರೆ ಇನ್ನೂ ಹಲವು ನಿಯಮಗಳನ್ನು ಕೂಡ ಕೆಲವು ಸ್ಪರ್ಧಿಗಳು ಸರಿಯಾಗಿ ಪಾಲಿಸುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ