AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐವರು ಆರೋಪಿಗಳು ಅರೆಸ್ಟ್; ಗಲಾಟೆಗೆ ಕಾರಣ ಬಹಿರಂಗ​

Kirik Keerthi Assault Case: ಡಿ.2ರ ಮಧ್ಯರಾತ್ರಿ ಕಿರಿಕ್​ ಕೀರ್ತಿ ಜತೆ ಐವರು ಅಪರಿಚಿತ ವ್ಯಕ್ತಿಗಳು ಗಲಾಟೆ ಮಾಡಿಕೊಂಡಿದ್ದರು. ಕಿರಿಕ್​ ಕೀರ್ತಿಯ ತಲೆಗೆ ಬಿಯರ್​ ಬಾಟಲ್​ನಿಂದ ಹೊಡೆಯಲಾಗಿತ್ತು.

ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐವರು ಆರೋಪಿಗಳು ಅರೆಸ್ಟ್; ಗಲಾಟೆಗೆ ಕಾರಣ ಬಹಿರಂಗ​
ಕಿರಿಕ್ ಕೀರ್ತಿ
TV9 Web
| Edited By: |

Updated on:Dec 13, 2021 | 10:07 AM

Share

ಕೆಲವೇ ದಿನಗಳ ಹಿಂದೆ ಸದಾಶಿವನಗರದ ಪಬ್​ವೊಂದರಲ್ಲಿ ಕಿರಿಕ್​ ಕೀರ್ತಿ (Kirik Keerthi) ಅವರ ಮೇಲೆ ಹಲ್ಲೆ (Assault) ನಡೆದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಕಿರಿಕ್​ ಕೀರ್ತಿ ದೂರು ನೀಡಿದ್ದರು. ಅದರ ಅನ್ವಯ ತನಿಖೆ ಆರಂಭಿಸಿದ ಸದಾಶಿವನಗರ ಠಾಣೆ ಪೊಲೀಸರು (Sadashivanagar Police) ಐವರು ಆರೋಪಿಗಳನ್ನು ಈಗ ಬಂಧಿಸಿದ್ದಾರೆ. ಅನಿಲ್, ವಿಜಯ್, ಅಜಯ್ ಸೇರಿ ಐವರು ವ್ಯಕ್ತಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಡಿ.2ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಪಬ್​ನಲ್ಲಿ ನಡೆದ ಗಲಾಟೆಯಲ್ಲಿ ಕಿರಿಕ್​ ಕೀರ್ತಿಯ ಅವರ ತಲೆಗೆ ಬಿಯರ್​ ಬಾಟಲ್​ನಿಂದ ಹೊಡೆಯಲಾಗಿತ್ತು. ಕೂಡಲೇ ಅವರು ಆಸ್ಪತ್ರೆಗೆ ತೆರಳಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದರು. ಬಂಧನಕ್ಕೆ ಒಳಗಾಗಿರುವ ಐವರು ಆರೋಪಿಗಳು ಅಂದಿನ ಗಲಾಟೆಗೆ ಕಾರಣ ಏನು ಎಂಬುದನ್ನು ಪೊಲೀಸರ ಎದುರು ಬಾಯಿ ಬಿಟ್ಟಿದ್ದಾರೆ.

ಕಿರುತೆರೆ ನಿರೂಪಕನಾಗಿ ಕಿರಿಕ್​ ಕೀರ್ತಿ ಗುರುತಿಸಿಕೊಂಡಿದ್ದಾರೆ. ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಆ ನಂತರ ಅವರು ಕೆಲವು ಸಿನಿಮಾಗಳಲ್ಲೂ ನಟಿಸಿದರು. ಸೋಶಿಯಲ್​ ಮೀಡಿಯಾದಲ್ಲೂ ಅವರನ್ನು ಅನೇಕರ ಫಾಲೋ ಮಾಡುತ್ತಾರೆ.

ಪಬ್​ ಗಲಾಟೆಗೆ ಕಾರಣ ಏನು?

ಡಿ.2ರ ರಾತ್ರಿ ಸದಾಶಿವನಗರದ ಪಬ್​​ವೊಂದಕ್ಕೆ ಕಿರಿಕ್ ಕೀರ್ತಿ ತೆರಳಿದ್ದರು. ಅವರು ಕುಳಿತಿದ್ದ ಪಕ್ಕದ ಟೇಬಲ್​ನಲ್ಲಿ ಅನಿಲ್, ವಿಜಯ್, ಅಜಯ್ ಹಾಗೂ ಸ್ನೇಹಿತರು ಕುಳಿತಿದ್ದರು. ಈ ವೇಳೆ ಅನಿಲ್ ತನಗೆ ಕಿರಿಕ್ ಕೀರ್ತಿಯ ಪರಿಚಯವಿದೆ ಎಂದು ಸ್ನೇಹಿತರ ಬಳಿ ಹೇಳಿಕೊಂಡಿದ್ದ. ಹಾಗಿದ್ದರೆ ಹೋಗಿ ಮಾತನಾಡಿಸು ಎಂದು ಜೊತೆಯಲ್ಲಿದ್ದ ಸ್ನೇಹಿತರು ಒತ್ತಾಯಿಸಿದರು. ಈ ವೇಳೆ ಕಿರಿಕ್ ಕೀರ್ತಿ ಬಳಿ ಬಂದು ನಾನ್ಯಾರು ಗೊತ್ತಾಯ್ತಾ ಎಂದು ಅನಿಲ್ ಕೇಳಿದ. ನನಗೆ ಗೊತ್ತಿಲ್ಲ ಎಂದು ಕೀರ್ತಿ ಉತ್ತರಿಸಿದರು.

ಈ ಎಲ್ಲ ಘಟನೆಗಳನ್ನು ಅವರ ಸ್ನೇಹಿತರು ತಮ್ಮ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ವಿಡಿಯೋ ಯಾಕೆ ಮಾಡಿಕೊಳ್ಳುತ್ತಾ ಇದ್ದೀರಿ ಎಂದು ಕಿರಿಕ್ ಕೀರ್ತಿ ಪ್ರಶ್ನಿಸಿದ್ದರು. ಈ ವೇಳೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಐವರು ಎಸ್ಕೇಪ್ ಆಗಿದ್ದರು. ಅಂದು ನಡೆದ ಘಟನೆಯನ್ನು ಪೊಲೀಸರ ಎದುರು ಐವರು ಆರೋಪಿಗಳು ವಿವರಿಸಿದ್ದಾರೆ.

ಇದನ್ನೂ ಓದಿ:

ಪಬ್​ನಲ್ಲಿ ಬಿಯರ್​ ಬಾಟಲ್​ನಿಂದ ಹಲ್ಲೆಗೆ ಒಳಗಾದ ಕಿರಿಕ್​ ಕೀರ್ತಿ ಪರಿಸ್ಥಿತಿ ಹೇಗಿದೆ? ಇಲ್ಲಿದೆ ವಿಡಿಯೋ

ಬೆಂಗಳೂರು: ಹೆಂಡತಿಯನ್ನು ಚುಡಾಯಿಸಿದ ಆರೋಪ, ವ್ಯಕ್ತಿ ಮೇಲೆ ಹಲ್ಲೆ

Published On - 9:58 am, Mon, 13 December 21

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ