AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ

ನಟಿ ಶಿಲ್ಪಾ ಶೆಟ್ಟಿ ಅವರು ತಮಗಾಗಿ ತರುವ ಬಾದಾಮಿಯನ್ನು ಇತರರು ತಿಂದು ಮುಗಿಸುತ್ತಾರೆ! ಅದು ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ
ಶಿಲ್ಪಾ ಶೆಟ್ಟಿ, ಕಿರಣ್​ ಖೇರ್​
Follow us
TV9 Web
| Updated By: ಮದನ್​ ಕುಮಾರ್​

Updated on: Jan 09, 2022 | 9:48 AM

ಒಂದಿಲ್ಲೊಂದು ಕಾರಣಕ್ಕೆ ನಟಿ ಶಿಲ್ಪಾ ಶೆಟ್ಟಿ (Shilpa Shetty) ಸುದ್ದಿ ಆಗುತ್ತಲೇ ಇರುತ್ತಾರೆ. ಪತಿ ರಾಜ್​ ಕುಂದ್ರಾ (Raj Kundra) ಅವರಿಂದಾಗಿ ಒಂದಷ್ಟು ದಿನಗಳ ಕಾಲ ಶಿಲ್ಪಾ ಮುಜುಗರ ಅನುಭವಿಸುವಂತಾಯಿತು. ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್​ ಕುಂದ್ರಾ ಅವರು ಸದ್ಯ ತನಿಖೆ ಎದುರಿಸುತ್ತಿದ್ದಾರೆ. ಕಹಿ ಘಟನೆಯನ್ನೆಲ್ಲಾ ಬದಿಗಿಟ್ಟು ಶಿಲ್ಪಾ ಶೆಟ್ಟಿ ಅವರು ಮತ್ತೆ ಕೆಲಸದತ್ತ ಮುಖ ಮಾಡಿದ್ದಾರೆ. ಜನಪ್ರಿಯ ‘ಇಂಡಿಯಾಸ್​ ಗಾಟ್​ ಟ್ಯಾಲೆಂಟ್’ (India’s Got Talent) ಕಾರ್ಯಕ್ರಮದಲ್ಲಿ ಅವರು ಜಡ್ಜ್​ ಆಗಿ ಭಾಗವಹಿಸುತ್ತಿದ್ದಾರೆ. ಈ ವೇಳೆ ಅವರು ಕೇವಲ 8 ಬಾದಾಮಿಗಾಗಿ ಜಗಳ ಮಾಡಿದ್ದಾರೆ! ಆ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇಂಡಿಯಾಸ್​ ಗಾಟ್​ ಟ್ಯಾಲೆಂಟ್​ ಕಾರ್ಯಕ್ರಮದ ಸೆಟ್​ಗೆ ಬರುವಾಗ ಶಿಲ್ಪಾ ಶೆಟ್ಟಿ ಅವರು ಬಾದಾಮಿ ಬೀಜಗಳನ್ನು ತರುತ್ತಾರೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನುವುದರಿಂದ ಸಾಕಷ್ಟು ಆರೋಗ್ಯದ ಉಪಯೋಗಗಳಿವೆ. ಆದರೆ ಶಿಲ್ಪಾ ಶೆಟ್ಟಿ ತರುವ ಬಾದಾಮಿಯನ್ನು ಇತರರು ತಿಂದು ಮುಗಿಸುತ್ತಾರೆ! ಅದು ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ಇವತ್ತು ನಾನು 6 ಬಾದಾಮಿ ತಂದಿದ್ದೇನೆ. ಕಳೆದ ಬಾರಿ ನಾನು 8 ಬಾದಾಮಿ ತಂದಿದ್ದೆ. ನನಗೆ ತಿನ್ನಲು ಸಿಕ್ಕಿದ್ದು ಒಂದು ಬಾದಾಮಿ ಮಾತ್ರ’ ಎಂದು ಅವರು ಟೇಬಲ್​ ಕುಟ್ಟಿ ಮಾತನಾಡಿದರು. ಇದನ್ನೆಲ್ಲ ಕೇಳಿಸಿಕೊಂಡ ಮತ್ತೋರ್ವ ಜಡ್ಜ್​, ಹಿರಿಯ ನಟಿ ಕಿರಣ್​ ಖೇರ್​ ಅವರು ಖಡಕ್​ ಉತ್ತರ ನೀಡಿದರು. ‘ನೀನು ಎಷ್ಟೊಂದು ಕಂಜೂಸ್. ಇಲ್ಲಿ ನಾವು ತುಂಬ ಜನ ಇದ್ದೇವೆ. ​ನೀನು ಕೇವಲ 6-8 ಬಾದಾಮಿ ತರುತ್ತೀದ್ದೀಯ’ ಎಂದು ಮುಖಕ್ಕೆ ಹೊಡೆದಂತೆ ಹೇಳಿದರು. ಅದನ್ನು ಕೇಳಿ ಸೆಟ್​ನಲ್ಲಿ ಇದ್ದ ಎಲ್ಲರೂ ಜೋರಾಗಿ ನಕ್ಕರು.

ಒಟ್ಟಾರೆ ಈ ಪ್ರಸಂಗ ತಮಾಷೆಯಾಗಿತ್ತು. ಅದರ ಪ್ರೋಮೋವನ್ನು ಸೋನಿ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ನಟಿಯಾಗಿ, ಯೋಗ ತರಬೇತುದಾರಳಾಗಿ, ರಿಯಾಲಿಟಿ ಶೋಗಳ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

ಕೋರ್ಟ್​ನಲ್ಲಿದೆ ರಾಜ್​ ಕುಂದ್ರಾ ಪ್ರಕರಣ:

ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಸದ್ಯಕ್ಕೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಕೇಸ್​ ಈಗ ಕೋರ್ಟ್​ನಲ್ಲಿದೆ. ಇತ್ತೀಚೆಗೆ ಅವರು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ’ ಎಂದು ರಾಜ್​ ಕುಂದ್ರಾ ಹೇಳಿದ್ದರು.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?