AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ

ನಟಿ ಶಿಲ್ಪಾ ಶೆಟ್ಟಿ ಅವರು ತಮಗಾಗಿ ತರುವ ಬಾದಾಮಿಯನ್ನು ಇತರರು ತಿಂದು ಮುಗಿಸುತ್ತಾರೆ! ಅದು ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ
ಶಿಲ್ಪಾ ಶೆಟ್ಟಿ, ಕಿರಣ್​ ಖೇರ್​
TV9 Web
| Edited By: |

Updated on: Jan 09, 2022 | 9:48 AM

Share

ಒಂದಿಲ್ಲೊಂದು ಕಾರಣಕ್ಕೆ ನಟಿ ಶಿಲ್ಪಾ ಶೆಟ್ಟಿ (Shilpa Shetty) ಸುದ್ದಿ ಆಗುತ್ತಲೇ ಇರುತ್ತಾರೆ. ಪತಿ ರಾಜ್​ ಕುಂದ್ರಾ (Raj Kundra) ಅವರಿಂದಾಗಿ ಒಂದಷ್ಟು ದಿನಗಳ ಕಾಲ ಶಿಲ್ಪಾ ಮುಜುಗರ ಅನುಭವಿಸುವಂತಾಯಿತು. ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್​ ಕುಂದ್ರಾ ಅವರು ಸದ್ಯ ತನಿಖೆ ಎದುರಿಸುತ್ತಿದ್ದಾರೆ. ಕಹಿ ಘಟನೆಯನ್ನೆಲ್ಲಾ ಬದಿಗಿಟ್ಟು ಶಿಲ್ಪಾ ಶೆಟ್ಟಿ ಅವರು ಮತ್ತೆ ಕೆಲಸದತ್ತ ಮುಖ ಮಾಡಿದ್ದಾರೆ. ಜನಪ್ರಿಯ ‘ಇಂಡಿಯಾಸ್​ ಗಾಟ್​ ಟ್ಯಾಲೆಂಟ್’ (India’s Got Talent) ಕಾರ್ಯಕ್ರಮದಲ್ಲಿ ಅವರು ಜಡ್ಜ್​ ಆಗಿ ಭಾಗವಹಿಸುತ್ತಿದ್ದಾರೆ. ಈ ವೇಳೆ ಅವರು ಕೇವಲ 8 ಬಾದಾಮಿಗಾಗಿ ಜಗಳ ಮಾಡಿದ್ದಾರೆ! ಆ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇಂಡಿಯಾಸ್​ ಗಾಟ್​ ಟ್ಯಾಲೆಂಟ್​ ಕಾರ್ಯಕ್ರಮದ ಸೆಟ್​ಗೆ ಬರುವಾಗ ಶಿಲ್ಪಾ ಶೆಟ್ಟಿ ಅವರು ಬಾದಾಮಿ ಬೀಜಗಳನ್ನು ತರುತ್ತಾರೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನುವುದರಿಂದ ಸಾಕಷ್ಟು ಆರೋಗ್ಯದ ಉಪಯೋಗಗಳಿವೆ. ಆದರೆ ಶಿಲ್ಪಾ ಶೆಟ್ಟಿ ತರುವ ಬಾದಾಮಿಯನ್ನು ಇತರರು ತಿಂದು ಮುಗಿಸುತ್ತಾರೆ! ಅದು ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ಇವತ್ತು ನಾನು 6 ಬಾದಾಮಿ ತಂದಿದ್ದೇನೆ. ಕಳೆದ ಬಾರಿ ನಾನು 8 ಬಾದಾಮಿ ತಂದಿದ್ದೆ. ನನಗೆ ತಿನ್ನಲು ಸಿಕ್ಕಿದ್ದು ಒಂದು ಬಾದಾಮಿ ಮಾತ್ರ’ ಎಂದು ಅವರು ಟೇಬಲ್​ ಕುಟ್ಟಿ ಮಾತನಾಡಿದರು. ಇದನ್ನೆಲ್ಲ ಕೇಳಿಸಿಕೊಂಡ ಮತ್ತೋರ್ವ ಜಡ್ಜ್​, ಹಿರಿಯ ನಟಿ ಕಿರಣ್​ ಖೇರ್​ ಅವರು ಖಡಕ್​ ಉತ್ತರ ನೀಡಿದರು. ‘ನೀನು ಎಷ್ಟೊಂದು ಕಂಜೂಸ್. ಇಲ್ಲಿ ನಾವು ತುಂಬ ಜನ ಇದ್ದೇವೆ. ​ನೀನು ಕೇವಲ 6-8 ಬಾದಾಮಿ ತರುತ್ತೀದ್ದೀಯ’ ಎಂದು ಮುಖಕ್ಕೆ ಹೊಡೆದಂತೆ ಹೇಳಿದರು. ಅದನ್ನು ಕೇಳಿ ಸೆಟ್​ನಲ್ಲಿ ಇದ್ದ ಎಲ್ಲರೂ ಜೋರಾಗಿ ನಕ್ಕರು.

ಒಟ್ಟಾರೆ ಈ ಪ್ರಸಂಗ ತಮಾಷೆಯಾಗಿತ್ತು. ಅದರ ಪ್ರೋಮೋವನ್ನು ಸೋನಿ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ನಟಿಯಾಗಿ, ಯೋಗ ತರಬೇತುದಾರಳಾಗಿ, ರಿಯಾಲಿಟಿ ಶೋಗಳ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

ಕೋರ್ಟ್​ನಲ್ಲಿದೆ ರಾಜ್​ ಕುಂದ್ರಾ ಪ್ರಕರಣ:

ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಸದ್ಯಕ್ಕೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಕೇಸ್​ ಈಗ ಕೋರ್ಟ್​ನಲ್ಲಿದೆ. ಇತ್ತೀಚೆಗೆ ಅವರು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ’ ಎಂದು ರಾಜ್​ ಕುಂದ್ರಾ ಹೇಳಿದ್ದರು.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು