8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ

ನಟಿ ಶಿಲ್ಪಾ ಶೆಟ್ಟಿ ಅವರು ತಮಗಾಗಿ ತರುವ ಬಾದಾಮಿಯನ್ನು ಇತರರು ತಿಂದು ಮುಗಿಸುತ್ತಾರೆ! ಅದು ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ
ಶಿಲ್ಪಾ ಶೆಟ್ಟಿ, ಕಿರಣ್​ ಖೇರ್​
Follow us
| Updated By: ಮದನ್​ ಕುಮಾರ್​

Updated on: Jan 09, 2022 | 9:48 AM

ಒಂದಿಲ್ಲೊಂದು ಕಾರಣಕ್ಕೆ ನಟಿ ಶಿಲ್ಪಾ ಶೆಟ್ಟಿ (Shilpa Shetty) ಸುದ್ದಿ ಆಗುತ್ತಲೇ ಇರುತ್ತಾರೆ. ಪತಿ ರಾಜ್​ ಕುಂದ್ರಾ (Raj Kundra) ಅವರಿಂದಾಗಿ ಒಂದಷ್ಟು ದಿನಗಳ ಕಾಲ ಶಿಲ್ಪಾ ಮುಜುಗರ ಅನುಭವಿಸುವಂತಾಯಿತು. ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್​ ಕುಂದ್ರಾ ಅವರು ಸದ್ಯ ತನಿಖೆ ಎದುರಿಸುತ್ತಿದ್ದಾರೆ. ಕಹಿ ಘಟನೆಯನ್ನೆಲ್ಲಾ ಬದಿಗಿಟ್ಟು ಶಿಲ್ಪಾ ಶೆಟ್ಟಿ ಅವರು ಮತ್ತೆ ಕೆಲಸದತ್ತ ಮುಖ ಮಾಡಿದ್ದಾರೆ. ಜನಪ್ರಿಯ ‘ಇಂಡಿಯಾಸ್​ ಗಾಟ್​ ಟ್ಯಾಲೆಂಟ್’ (India’s Got Talent) ಕಾರ್ಯಕ್ರಮದಲ್ಲಿ ಅವರು ಜಡ್ಜ್​ ಆಗಿ ಭಾಗವಹಿಸುತ್ತಿದ್ದಾರೆ. ಈ ವೇಳೆ ಅವರು ಕೇವಲ 8 ಬಾದಾಮಿಗಾಗಿ ಜಗಳ ಮಾಡಿದ್ದಾರೆ! ಆ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇಂಡಿಯಾಸ್​ ಗಾಟ್​ ಟ್ಯಾಲೆಂಟ್​ ಕಾರ್ಯಕ್ರಮದ ಸೆಟ್​ಗೆ ಬರುವಾಗ ಶಿಲ್ಪಾ ಶೆಟ್ಟಿ ಅವರು ಬಾದಾಮಿ ಬೀಜಗಳನ್ನು ತರುತ್ತಾರೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನುವುದರಿಂದ ಸಾಕಷ್ಟು ಆರೋಗ್ಯದ ಉಪಯೋಗಗಳಿವೆ. ಆದರೆ ಶಿಲ್ಪಾ ಶೆಟ್ಟಿ ತರುವ ಬಾದಾಮಿಯನ್ನು ಇತರರು ತಿಂದು ಮುಗಿಸುತ್ತಾರೆ! ಅದು ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ಇವತ್ತು ನಾನು 6 ಬಾದಾಮಿ ತಂದಿದ್ದೇನೆ. ಕಳೆದ ಬಾರಿ ನಾನು 8 ಬಾದಾಮಿ ತಂದಿದ್ದೆ. ನನಗೆ ತಿನ್ನಲು ಸಿಕ್ಕಿದ್ದು ಒಂದು ಬಾದಾಮಿ ಮಾತ್ರ’ ಎಂದು ಅವರು ಟೇಬಲ್​ ಕುಟ್ಟಿ ಮಾತನಾಡಿದರು. ಇದನ್ನೆಲ್ಲ ಕೇಳಿಸಿಕೊಂಡ ಮತ್ತೋರ್ವ ಜಡ್ಜ್​, ಹಿರಿಯ ನಟಿ ಕಿರಣ್​ ಖೇರ್​ ಅವರು ಖಡಕ್​ ಉತ್ತರ ನೀಡಿದರು. ‘ನೀನು ಎಷ್ಟೊಂದು ಕಂಜೂಸ್. ಇಲ್ಲಿ ನಾವು ತುಂಬ ಜನ ಇದ್ದೇವೆ. ​ನೀನು ಕೇವಲ 6-8 ಬಾದಾಮಿ ತರುತ್ತೀದ್ದೀಯ’ ಎಂದು ಮುಖಕ್ಕೆ ಹೊಡೆದಂತೆ ಹೇಳಿದರು. ಅದನ್ನು ಕೇಳಿ ಸೆಟ್​ನಲ್ಲಿ ಇದ್ದ ಎಲ್ಲರೂ ಜೋರಾಗಿ ನಕ್ಕರು.

ಒಟ್ಟಾರೆ ಈ ಪ್ರಸಂಗ ತಮಾಷೆಯಾಗಿತ್ತು. ಅದರ ಪ್ರೋಮೋವನ್ನು ಸೋನಿ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ನಟಿಯಾಗಿ, ಯೋಗ ತರಬೇತುದಾರಳಾಗಿ, ರಿಯಾಲಿಟಿ ಶೋಗಳ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

ಕೋರ್ಟ್​ನಲ್ಲಿದೆ ರಾಜ್​ ಕುಂದ್ರಾ ಪ್ರಕರಣ:

ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಸದ್ಯಕ್ಕೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಕೇಸ್​ ಈಗ ಕೋರ್ಟ್​ನಲ್ಲಿದೆ. ಇತ್ತೀಚೆಗೆ ಅವರು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ’ ಎಂದು ರಾಜ್​ ಕುಂದ್ರಾ ಹೇಳಿದ್ದರು.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?