AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಕ್ಷಣ’ ಸೀರಿಯಲ್​ ನಟಿ ವಿಜಯಲಕ್ಷ್ಮೀ ಅಭಿನಯ, ಬದ್ಧತೆ ಮೆಚ್ಚಿ ಮನಸಾರೆ ಹೊಗಳಿದ ಜಗನ್​

ಮೊದಲ ಸೀರಿಯಲ್​ನಲ್ಲೇ ನಟಿ ವಿಜಯಲಕ್ಷ್ಮೀ ಅವರಿಗೆ ವೀಕ್ಷಕರಿಂದ ಭರ್ಜರಿ ಪ್ರೀತಿ ಸಿಗುತ್ತಿದೆ. ಭೂಪತಿ ಎಂಬ ಪಾತ್ರಕ್ಕೆ ಜಗನ್​ ಬಣ್ಣ ಹಚ್ಚುತ್ತಿದ್ದಾರೆ.

‘ಲಕ್ಷಣ’ ಸೀರಿಯಲ್​ ನಟಿ ವಿಜಯಲಕ್ಷ್ಮೀ ಅಭಿನಯ, ಬದ್ಧತೆ ಮೆಚ್ಚಿ ಮನಸಾರೆ ಹೊಗಳಿದ ಜಗನ್​
ಜಗನ್, ವಿಜಯಲಕ್ಷ್ಮೀ
TV9 Web
| Edited By: |

Updated on: Aug 28, 2021 | 2:21 PM

Share

ಕನ್ನಡ ಕಿರುತೆರೆ ಲೋಕದಲ್ಲಿ ಧಾರಾವಾಹಿಗಳ ನಡುವೆ ಸಖತ್​ ಪೈಪೋಟಿ ಇದೆ. ಹೊಸ ಹೊಸ ಸೀರಿಯಲ್​ಗಳು ಕೂಡ ಜನಮನ ಗೆಲ್ಲುತ್ತಿವೆ. ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷಣ’ ಧಾರಾವಾಹಿ ಆರಂಭ ಆಗಿತ್ತು. ವಿಭಿನ್ನವಾದ ಕಥಾಹಂದರ ಇಟ್ಟುಕೊಂಡು ಈ ಸೀರಿಯಲ್​ ಮೂಡಿಬರುತ್ತಿದೆ. ಪ್ರಮುಖ ಪಾತ್ರದಲ್ಲಿ ಹೊಸ ನಟಿ ವಿಜಯಲಕ್ಷ್ಮೀ ಮತ್ತು ಜಗನ್​ ನಟಿಸುತ್ತಿದ್ದಾರೆ. ಇತ್ತೀಚೆಗೆ ಒಂದು ವಿಶೇಷ ಎಪಿಸೋಡ್​ಅನ್ನು ಚಿತ್ರೀಕರಿಸಲಾಯಿತು. ಅದರಲ್ಲಿ ನಟಿ ವಿಜಯಲಕ್ಷ್ಮೀ ಅವರ ಬದ್ಧತೆ ಕಂಡು ಜಗನ್​ ಫಿದಾ ಆಗಿದ್ದಾರೆ. ಹೊಸ ನಟಿಗೆ ಅವರು ಮನಸಾರೆ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ವಿಜಯಲಕ್ಷ್ಮೀ ಅವರಿಗೆ ದೊಡ್ಡ ಪ್ರೋತ್ಸಾಹ ಸಿಕ್ಕಂತಾಗಿದೆ.

ವಿಜಯಲಕ್ಷ್ಮೀ ಅವರಿಗೆ ಇದು ಮೊದಲ ಸೀರಿಯಲ್​. ತಮ್ಮ ಅಭಿನಯ ಸಾಮರ್ಥ್ಯವನ್ನು ತೋರಿಸಲು ಅವರಿಗೆ ಒಳ್ಳೆಯ ಅವಕಾಶ ಸಿಕ್ಕಿದೆ. ಅದನ್ನು ಅವರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅದು ಇಡೀ ತಂಡಕ್ಕೆ ಮೆಚ್ಚುಗೆ ಆಗುತ್ತಿದೆ. ಈ ಧಾರಾವಾಹಿಯಲ್ಲಿ ಮುಖ್ಯ ಪಾತ್ರ ನಿಭಾಯಿಸುತ್ತಿರುವುದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಜಗನ್​ ನಿರ್ವಹಿಸುತ್ತಿದ್ದಾರೆ. ವಿಜಯಲಕ್ಷ್ಮೀ ಬಗ್ಗೆ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆ ಮೂಲಕ ಹೊಗಳಿಕೆ ಮಾತುಗಳನ್ನು ಹಂಚಿಕೊಂಡರು.

‘ಸತತ 12 ಗಂಟೆಗಳ ಕಾಲ ಮಳೆಯಲ್ಲಿ ಚಿತ್ರೀಕರಿಸಿದರೂ ಕೂಡ ನೀವು ಕಿಂಚಿತ್ತೂ ವಿಚಲಿತ ಆಗಲಿಲ್ಲ. ನಿಮ್ಮ ಬದ್ಧತೆಯನ್ನು ಮೆಚ್ಚುತ್ತೇನೆ. ದೇವರು ನಿಮಗೆ ಒಳ್ಳೆಯದು ಮಾಡಲಿ’ ಎಂದು ಜಗನ್​ ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಕಮೆಂಟ್​ ಮಾಡಿರುವ ಅನೇಕ ವೀಕ್ಷಕರು ಧಾರಾವಾಹಿ ಕಥೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದು ಒಳ್ಳೆಯ ಸಂದೇಶ ಇರುವ ಸೀರಿಯಲ್​ ಎಂಬ ಹೊಗಳಿಕೆ ಕೇಳಿಬರುತ್ತಿದೆ.

ಕಪ್ಪು ಮೈಬಣ್ಣ ಹೊಂದಿದವಳು ಎಂಬ ಕಾರಣಕ್ಕೆ ಕಥಾನಾಯಕಿಯನ್ನು ಎಲ್ಲರೂ ಜರಿಯುತ್ತಾರೆ. ಸಮಾಜದಲ್ಲಿ ಇಂಥ ಅವಮಾನವನ್ನು ಕೋಟ್ಯಂತರ ಜನರು ಪ್ರತಿದಿನ ಅನುಭವಿಸುತ್ತಿದ್ದಾರೆ. ಕಪ್ಪು ಸುಂದರವಲ್ಲ ಎಂಬ ತಪ್ಪು ಕಲ್ಪನೆಯನ್ನು ಹೊಡೆದುಹಾಕಲು ಈ ಸೀರಿಯಲ್​ ಪ್ರಯತ್ನಿಸುತ್ತಿದೆ. ಆ ಕಾರಣಕ್ಕಾಗಿ ಜನರಿಗೆ ಇದು ಇಷ್ಟವಾಗುತ್ತಿದೆ. ಮೊದಲ ಸೀರಿಯಲ್​ನಲ್ಲೇ ವಿಜಯಲಕ್ಷ್ಮೀ ಅವರಿಗೆ ವೀಕ್ಷಕರಿಗೆ ಭರ್ಜರಿ ಪ್ರೀತಿ ಸಿಗುತ್ತಿದೆ.

ಭೂಪತಿ ಎಂಬ ಪಾತ್ರಕ್ಕೆ ಜಗನ್​ ಬಣ್ಣ ಹಚ್ಚುತ್ತಿದ್ದಾರೆ. ಬಾಣಸಿಗನಾಗಿ ಹಾಗೂ ಎಲ್ಲರಿಗೂ ಸಹಾಯ ಮಾಡುವ ವ್ಯಕ್ತಿಯಾಗಿ ಎರಡು ಶೆಡ್​ನಲ್ಲಿ ಜಗನ್​ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ