AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್​ ಬಾಸ್​’ ಮನೆಗೆ ಬಂದ ‘ಲಕ್ಷಣ’ ಧಾರಾವಾಹಿ ನಟಿ ಭಾಗ್ಯಶ್ರೀ; ವೀಕ್ಷಕರಿಂದ ಸಖತ್​ ಮೆಚ್ಚುಗೆ

ಕನ್ನಡದ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ಈ ವರ್ಷ 10ರ ಸಂಭ್ರಮ. ಹತ್ತನೇ ಸೀಸನ್​ ಆದ್ದರಿಂದ ಸಂಭ್ರಮ ಜೋರಾಗಿದೆ. ಕಿಚ್ಚ ಸುದೀಪ್​ ಅವರು ಎಂದಿನ ಹುಮ್ಮಸ್ಸಿನಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ‘ಲಕ್ಷಣ’ ಧಾರಾವಾಹಿ ನಟಿ ಭಾಗ್ಯಶ್ರೀ ಅವರು ಈ ರಿಯಾಲಿಟಿ ಶೋಗೆ ಬಂದಿದ್ದಾರೆ. ಅದ್ದೂರಿಯಾಗಿ ಶೋಗೆ ಚಾಲನೆ ಸಿಕ್ಕಿದೆ.

Bigg Boss Kannada: ‘ಬಿಗ್​ ಬಾಸ್​’ ಮನೆಗೆ ಬಂದ ‘ಲಕ್ಷಣ’ ಧಾರಾವಾಹಿ ನಟಿ ಭಾಗ್ಯಶ್ರೀ; ವೀಕ್ಷಕರಿಂದ ಸಖತ್​ ಮೆಚ್ಚುಗೆ
ಭಾಗ್ಯಶ್ರೀ
ಮದನ್​ ಕುಮಾರ್​
| Edited By: |

Updated on:Oct 09, 2023 | 9:04 AM

Share

ಡಿಫರೆಂಟ್​ ಸ್ವಭಾವದ ವ್ಯಕ್ತಿಗಳು ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದಿದ್ದಾರೆ. ವಿನಯ್​, ನೀತು ವನಜಾಕ್ಷಿ, ನಮ್ರತಾ ಗೌಡ, ಸ್ನೇಹಿತ್​ ಗೌಡ, ಈಶಾನಿ, ತುಕಾಲಿ ಸಂತೋಷ್​, ಸಿರಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ದೊಡ್ಮನೆ ಒಳಗೆ ಬಂದಿದ್ದಾರೆ. 9ನೇ ಸ್ಪರ್ಧಿಯಾಗಿ ಕಿರುತೆರೆಯ ‘ಲಕ್ಷಣ’ ಧಾರಾವಾಹಿ (Lakshana Serial) ನಟಿ ಭಾಗ್ಯಶ್ರೀ ಅವರು ಈ ರಿಯಾಲಿಟಿ ಶೋಗೆ ಬಂದಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಸಮಾಜಸೇವೆ, ಕಿರುತೆರೆ, ಸಿನಿಮಾ ಮುಂತಾದ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರು ಮಾತ್ರವಲ್ಲದೇ ಒಂದಷ್ಟು ವಿವಾದ ಮಾಡಿಕೊಂಡವರು ಕೂಡ ಬಿಗ್​ ಬಾಸ್​ (Bigg Boss Kannada) ಶೋಗೆ ಕಾಲಿಟ್ಟಿದ್ದಾರೆ. ಎಲ್ಲರನ್ನೂ ಸುದೀಪ್​ ಅವರು ಆಡಿಯನ್ಸ್​ ವೋಟಿಂಗ್​ ಮೂಲಕ ಆಯ್ಕೆ ಮಾಡಿ ಒಳಗೆ ಕಳಿಸಿದ್ದಾರೆ. ಈ ರಿಯಾಲಿಟಿ ಶೋ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರ ಆಗಲಿದೆ.

ಕನ್ನಡದ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ಈ ವರ್ಷ 10ರ ಸಂಭ್ರಮ. ಹತ್ತನೇ ಸೀಸನ್​ ಆದ್ದರಿಂದ ಸಂಭ್ರಮ ಜೋರಾಗಿದೆ. ಕಿಚ್ಚ ಸುದೀಪ್​ ಅವರು ಎಂದಿನ ಹುಮ್ಮಸ್ಸಿನಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಹೊಸದಾಗಿ ನಿರ್ಮಾಣ ಆಗಿರುವ ದೊಡ್ಮನೆಯ ವಿನ್ಯಾಸ ಬಹಳ ವಿಶೇಷವಾಗಿದೆ. ಹೊಸ ನಿಯಮಗಳನ್ನು ಕೂಡ ಸೇರ್ಪಡೆ ಮಾಡಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಮೇಲಿನ ಹೈಪ್​ ಹೆಚ್ಚಾಗಿದೆ.

Bigg Boss Kannada: ‘ರಂಗೋಲಿ’ ನಟಿ ಸಿರಿ ಈಗ ಬಿಗ್​ ಬಾಸ್​ ಸ್ಪರ್ಧಿ; 7ನೇ ಕಂಟೆಸ್ಟೆಂಟ್​ ಆಗಿ ದೊಡ್ಮನೆ ಪ್ರವೇಶ

ಕನ್ನಡ ಕಿರುತೆರೆಯ ಫೇಮಸ್​ ನಟಿ:

‘ಲಕ್ಷಣ’ ಧಾರಾವಾಹಿಯಲ್ಲಿ ನಟಿಸಿರುವ ಭಾಗ್ಯಶ್ರೀ ಅವರಿಗೆ ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಇದೆ. ‘ಇದು ದೊಡ್ಡ ಚಾಲೆಂಜಿಂಗ್​. ಇದನ್ನು ನಾನು ಸ್ವೀಕರಿಸಬೇಕು. ಹಾಗಾಗಿ ಬಿಗ್​ ಬಾಸ್​ ಆಯೋಜಕರಿಂದ ಕರೆ ಬಂದಾಗ ನೋ ಎನ್ನಲಿಲ್ಲ. ಬದುಕು ನನಗೆ ಸಾಕಷ್ಟು ಪಾಠಗಳನ್ನು ಕಲಿಸಿದೆ. ಪ್ರೇಕ್ಷಕರಿಗೆ ನಾನು ಇಷ್ಟ ಆಗುತ್ತೇನೆ ಎಂಬ ಭರವಸೆ ನನಗಿದೆ. ಯಾವಾಗಲೂ ಖುಷಿಯಾಗಿ ಇರುವುದು ಹೇಗೆ ಎಂಬುದನ್ನು ತಿಳಿಸಿಕೊಡಲು ನಾನು ಬಂದಿದ್ದೇನೆ’ ಎಂದಿದ್ದಾರೆ ಭಾಗ್ಯಶ್ರೀ.

ನಿರೀಕ್ಷಿತ ಪ್ರಮಾಣದಲ್ಲಿ ಆಡಿಯನ್ಸ್​ ವೋಟಿಂಗ್​ ಪಡೆಯದೇ ರಕ್ಷತ್​, ವರ್ತೂರು ಸಂತೋಷ್​, ಚಿತ್ರಾಲ್​, ಸಂಗೀತಾ ಶೃಂಗೇರಿ, ಡ್ರೋನ್​ ಪ್ರತಾಪ್​ ಅವರು ಹೋಲ್ಡ್​ನಲ್ಲಿ ಇದ್ದಾರೆ. ಆದರೆ ಈ ವಿಚಾರದಲ್ಲಿ ಭಾಗ್ಯಶ್ರೀ ಅವರು ವೀಕ್ಷಕರಿಂದ ಮೆಚ್ಚುಗೆ ಪಡೆದಿದ್ದಾರೆ. ಆಡಿಯನ್ಸ್​ ವೋಟಿಂಗ್​ನಲ್ಲಿ ಶೇಕಡ 80 ಬಂದಿರಬಹುದು ಎಂದು ಭಾಗ್ಯಶ್ರೀ ಊಹಿಸಿದರು. ನಿರೀಕ್ಷೆಯಂತೆಯೇ 81 ಪರ್ಸೆಂಟ್​ ವೋಟ್​ ಪಡೆದು ಅವರು ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 pm, Sun, 8 October 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ