AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್​ ಬಾಸ್​’ ಮನೆಗೆ ಬಂದ ‘ಲಕ್ಷಣ’ ಧಾರಾವಾಹಿ ನಟಿ ಭಾಗ್ಯಶ್ರೀ; ವೀಕ್ಷಕರಿಂದ ಸಖತ್​ ಮೆಚ್ಚುಗೆ

ಕನ್ನಡದ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ಈ ವರ್ಷ 10ರ ಸಂಭ್ರಮ. ಹತ್ತನೇ ಸೀಸನ್​ ಆದ್ದರಿಂದ ಸಂಭ್ರಮ ಜೋರಾಗಿದೆ. ಕಿಚ್ಚ ಸುದೀಪ್​ ಅವರು ಎಂದಿನ ಹುಮ್ಮಸ್ಸಿನಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ‘ಲಕ್ಷಣ’ ಧಾರಾವಾಹಿ ನಟಿ ಭಾಗ್ಯಶ್ರೀ ಅವರು ಈ ರಿಯಾಲಿಟಿ ಶೋಗೆ ಬಂದಿದ್ದಾರೆ. ಅದ್ದೂರಿಯಾಗಿ ಶೋಗೆ ಚಾಲನೆ ಸಿಕ್ಕಿದೆ.

Bigg Boss Kannada: ‘ಬಿಗ್​ ಬಾಸ್​’ ಮನೆಗೆ ಬಂದ ‘ಲಕ್ಷಣ’ ಧಾರಾವಾಹಿ ನಟಿ ಭಾಗ್ಯಶ್ರೀ; ವೀಕ್ಷಕರಿಂದ ಸಖತ್​ ಮೆಚ್ಚುಗೆ
ಭಾಗ್ಯಶ್ರೀ
ಮದನ್​ ಕುಮಾರ್​
| Edited By: |

Updated on:Oct 09, 2023 | 9:04 AM

Share

ಡಿಫರೆಂಟ್​ ಸ್ವಭಾವದ ವ್ಯಕ್ತಿಗಳು ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದಿದ್ದಾರೆ. ವಿನಯ್​, ನೀತು ವನಜಾಕ್ಷಿ, ನಮ್ರತಾ ಗೌಡ, ಸ್ನೇಹಿತ್​ ಗೌಡ, ಈಶಾನಿ, ತುಕಾಲಿ ಸಂತೋಷ್​, ಸಿರಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ದೊಡ್ಮನೆ ಒಳಗೆ ಬಂದಿದ್ದಾರೆ. 9ನೇ ಸ್ಪರ್ಧಿಯಾಗಿ ಕಿರುತೆರೆಯ ‘ಲಕ್ಷಣ’ ಧಾರಾವಾಹಿ (Lakshana Serial) ನಟಿ ಭಾಗ್ಯಶ್ರೀ ಅವರು ಈ ರಿಯಾಲಿಟಿ ಶೋಗೆ ಬಂದಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಸಮಾಜಸೇವೆ, ಕಿರುತೆರೆ, ಸಿನಿಮಾ ಮುಂತಾದ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರು ಮಾತ್ರವಲ್ಲದೇ ಒಂದಷ್ಟು ವಿವಾದ ಮಾಡಿಕೊಂಡವರು ಕೂಡ ಬಿಗ್​ ಬಾಸ್​ (Bigg Boss Kannada) ಶೋಗೆ ಕಾಲಿಟ್ಟಿದ್ದಾರೆ. ಎಲ್ಲರನ್ನೂ ಸುದೀಪ್​ ಅವರು ಆಡಿಯನ್ಸ್​ ವೋಟಿಂಗ್​ ಮೂಲಕ ಆಯ್ಕೆ ಮಾಡಿ ಒಳಗೆ ಕಳಿಸಿದ್ದಾರೆ. ಈ ರಿಯಾಲಿಟಿ ಶೋ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರ ಆಗಲಿದೆ.

ಕನ್ನಡದ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ಈ ವರ್ಷ 10ರ ಸಂಭ್ರಮ. ಹತ್ತನೇ ಸೀಸನ್​ ಆದ್ದರಿಂದ ಸಂಭ್ರಮ ಜೋರಾಗಿದೆ. ಕಿಚ್ಚ ಸುದೀಪ್​ ಅವರು ಎಂದಿನ ಹುಮ್ಮಸ್ಸಿನಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಹೊಸದಾಗಿ ನಿರ್ಮಾಣ ಆಗಿರುವ ದೊಡ್ಮನೆಯ ವಿನ್ಯಾಸ ಬಹಳ ವಿಶೇಷವಾಗಿದೆ. ಹೊಸ ನಿಯಮಗಳನ್ನು ಕೂಡ ಸೇರ್ಪಡೆ ಮಾಡಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಮೇಲಿನ ಹೈಪ್​ ಹೆಚ್ಚಾಗಿದೆ.

Bigg Boss Kannada: ‘ರಂಗೋಲಿ’ ನಟಿ ಸಿರಿ ಈಗ ಬಿಗ್​ ಬಾಸ್​ ಸ್ಪರ್ಧಿ; 7ನೇ ಕಂಟೆಸ್ಟೆಂಟ್​ ಆಗಿ ದೊಡ್ಮನೆ ಪ್ರವೇಶ

ಕನ್ನಡ ಕಿರುತೆರೆಯ ಫೇಮಸ್​ ನಟಿ:

‘ಲಕ್ಷಣ’ ಧಾರಾವಾಹಿಯಲ್ಲಿ ನಟಿಸಿರುವ ಭಾಗ್ಯಶ್ರೀ ಅವರಿಗೆ ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಇದೆ. ‘ಇದು ದೊಡ್ಡ ಚಾಲೆಂಜಿಂಗ್​. ಇದನ್ನು ನಾನು ಸ್ವೀಕರಿಸಬೇಕು. ಹಾಗಾಗಿ ಬಿಗ್​ ಬಾಸ್​ ಆಯೋಜಕರಿಂದ ಕರೆ ಬಂದಾಗ ನೋ ಎನ್ನಲಿಲ್ಲ. ಬದುಕು ನನಗೆ ಸಾಕಷ್ಟು ಪಾಠಗಳನ್ನು ಕಲಿಸಿದೆ. ಪ್ರೇಕ್ಷಕರಿಗೆ ನಾನು ಇಷ್ಟ ಆಗುತ್ತೇನೆ ಎಂಬ ಭರವಸೆ ನನಗಿದೆ. ಯಾವಾಗಲೂ ಖುಷಿಯಾಗಿ ಇರುವುದು ಹೇಗೆ ಎಂಬುದನ್ನು ತಿಳಿಸಿಕೊಡಲು ನಾನು ಬಂದಿದ್ದೇನೆ’ ಎಂದಿದ್ದಾರೆ ಭಾಗ್ಯಶ್ರೀ.

ನಿರೀಕ್ಷಿತ ಪ್ರಮಾಣದಲ್ಲಿ ಆಡಿಯನ್ಸ್​ ವೋಟಿಂಗ್​ ಪಡೆಯದೇ ರಕ್ಷತ್​, ವರ್ತೂರು ಸಂತೋಷ್​, ಚಿತ್ರಾಲ್​, ಸಂಗೀತಾ ಶೃಂಗೇರಿ, ಡ್ರೋನ್​ ಪ್ರತಾಪ್​ ಅವರು ಹೋಲ್ಡ್​ನಲ್ಲಿ ಇದ್ದಾರೆ. ಆದರೆ ಈ ವಿಚಾರದಲ್ಲಿ ಭಾಗ್ಯಶ್ರೀ ಅವರು ವೀಕ್ಷಕರಿಂದ ಮೆಚ್ಚುಗೆ ಪಡೆದಿದ್ದಾರೆ. ಆಡಿಯನ್ಸ್​ ವೋಟಿಂಗ್​ನಲ್ಲಿ ಶೇಕಡ 80 ಬಂದಿರಬಹುದು ಎಂದು ಭಾಗ್ಯಶ್ರೀ ಊಹಿಸಿದರು. ನಿರೀಕ್ಷೆಯಂತೆಯೇ 81 ಪರ್ಸೆಂಟ್​ ವೋಟ್​ ಪಡೆದು ಅವರು ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 pm, Sun, 8 October 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ