AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೈಮ್ಯಾಕ್ಸ್ ಹಂತದಲ್ಲಿ ‘ಲಕ್ಷಣ’ ಧಾರಾವಾಹಿ; ವಿಡಿಯೋ ಹಂಚಿಕೊಂಡ ಸುಕೃತಾ ನಾಗ್

ಶೂಟಿಂಗ್ ಜರ್ನಿಯನ್ನು ನೆನಪಿಸುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ ಸುಕೃತಾ. ಈ ವಿಡಿಯೋ ಸಖತ್ ಫನ್ ಆಗಿದೆ. ‘ಕೆಲವು ಸುಂದರ ವ್ಯಕ್ತಿಗಳೊಂದಿಗೆ ಒಂದು ಸುಂದರ ಪ್ರಯಾಣ’ ಎಂದು ಈ ವಿಡಿಯೋಗೆ ಅವರು ಕ್ಯಾಪ್ಶನ್ ನೀಡಿದ್ದಾರೆ.

ಕ್ಲೈಮ್ಯಾಕ್ಸ್ ಹಂತದಲ್ಲಿ ‘ಲಕ್ಷಣ’ ಧಾರಾವಾಹಿ; ವಿಡಿಯೋ ಹಂಚಿಕೊಂಡ ಸುಕೃತಾ ನಾಗ್
ಸುಕೃತಾ
ರಾಜೇಶ್ ದುಗ್ಗುಮನೆ
|

Updated on: Oct 05, 2023 | 7:42 AM

Share

ಕಲರ್ಸ್ ಕನ್ನಡದಲ್ಲಿ ಪ್ರತೀ ವರ್ಷ ಬಿಗ್ ಬಾಸ್ ಬರುವ ಸಂದರ್ಭದಲ್ಲಿ ಕೆಲವು ಧಾರಾವಾಹಿಗಳು ಕೊನೆಗೊಳ್ಳೋದು ಸಾಮಾನ್ಯ. ಈ ವರ್ಷವೂ ಅದು ಮುಂದುವರಿದಿದೆ. ಈ ಮೊದಲೇ ಹೇಳಿದಂತೆ ‘ತ್ರಿಪುರ ಸುಂದರಿ’ ಧಾರಾವಾಹಿ (Tripura Sundari Serial) ಕೊನೆಗೊಳ್ಳುತ್ತಿದೆ. ಅದೇ ರೀತಿ ‘ಲಕ್ಷಣ’ (Lakshana Serial) ಧಾರಾವಾಹಿಯೂ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಈ ವಾರವೇ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಮೂಲಕ ಬಿಗ್ ಬಾಸ್ ಆಗಮನಕ್ಕೆ ಈ ಧಾರಾವಾಹಿಗಳು ಅನುವು ಮಾಡಿಕೊಡುತ್ತಿವೆ. ಶೂಟಿಂಗ್ ಜರ್ನಿ ಹೇಗಿತ್ತು ಎಂಬುದನ್ನು ‘ಲಕ್ಷಣ’ ಧಾರಾವಾಹಿಯ ಕಲಾವಿದೆ ಸುಕೃತಾ ನಾಗ್ ನೆನಪಿಸಿಕೊಂಡಿದ್ದಾರೆ.

ಸುಕೃತಾ ನಾಗ್ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸಿದ್ದರು. ಈ ಧಾರಾವಾಹಿ 2013ರಿಂದ 2020ರವರೆಗೆ ಪ್ರಸಾರ ಕಂಡಿತ್ತು. ಒಟ್ಟೂ 1588 ಎಪಿಸೋಡ್​ಗಳನ್ನು ಧಾರಾವಾಹಿ ಪೂರ್ಣಗೊಳಿಸಿತ್ತು. ಇದರಲ್ಲಿ ಸುಕೃತಾ ಕೂಡ ಇದ್ದರು. ಆ ಬಳಿಕ ಅವರು ‘ಲಕ್ಷಣ’ ಧಾರಾವಾಹಿಯಲ್ಲಿ ನಟಿಸಿದರು. ಈ ಧಾರಾವಾಹಿಯಲ್ಲಿ ಜಗನ್ ಸಿ, ವಿಜಯಲಕ್ಷ್ಮಿ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ.

ಶೂಟಿಂಗ್ ಜರ್ನಿಯನ್ನು ನೆನಪಿಸುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ ಸುಕೃತಾ. ಈ ವಿಡಿಯೋ ಸಖತ್ ಫನ್ ಆಗಿದೆ. ‘ಕೆಲವು ಸುಂದರ ವ್ಯಕ್ತಿಗಳೊಂದಿಗೆ ಒಂದು ಸುಂದರ ಪ್ರಯಾಣ’ ಎಂದು ಈ ವಿಡಿಯೋಗೆ ಅವರು ಕ್ಯಾಪ್ಶನ್ ನೀಡಿದ್ದಾರೆ. ಇದಕ್ಕೆ ಅನೇಕರು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.  ‘ಲಕ್ಷಣ’ ಧಾರಾವಾಹಿ ಆರಂಭ ಆಗಿದ್ದು 2021ರ ಆಗಸ್ಟ್ ತಿಂಗಳಲ್ಲಿ. ಎರಡು ವರ್ಷಗಳಿಗೂ ಅಧಿಕ ಕಾಲ ಈ ಧಾರಾವಾಹಿ ಪ್ರಸಾರ ಕಂಡಿತು. ಈಗ ‘ಲಕ್ಷಣ’ ಅಂತ್ಯ ಆಗುತ್ತಿರುವ ಬಗ್ಗೆ ವೀಕ್ಷಕರ ವಲಯದಲ್ಲಿ ಬೇಸರ ಇದೆ.

ಇದನ್ನೂ ಓದಿ: ನಿಜವಾದ ಬಿಗ್ ಬಾಸ್ ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಕೊಟ್ರು ಉತ್ತರ 

ಭಾನುವಾರ (ಅಕ್ಟೋಬರ್ 8) ಬಿಗ್ ಬಾಸ್ ಆರಂಭ ಆಗುತ್ತಿದೆ. ಹಲವು ಸೆಲೆಬ್ರಿಟಿಗಳು, ಯೂಟ್ಯೂಬರ್ಸ್ ಮೊದಲಾದ ಕ್ಷೇತ್ರದವರು ಬಿಗ್ ಬಾಸ್ ಮನೆಗೆ ಬರಲಿದ್ದಾರೆ. ಸುಕೃತಾ ನಾಗ್ ಕೂಡ ದೊಡ್ಮನೆಗೆ ಹೋಗುತ್ತಾರೆ ಎನ್ನುವ ಸುದ್ದಿ ಹರಿದಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!