AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಕ್ಷ್ಮೀ ಬಾರಮ್ಮ’ ಕೊನೆಯ ಎಪಿಸೋಡ್​; ಆಕ್ರೋಶ ಹೊರ ಹಾಕುತ್ತಲೇ ಬೆಟ್ಟದಿಂದ ಬಿದ್ದ ಕಾವೇರಿ

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯು ಏಪ್ರಿಲ್ 11ರಂದು ಅಂತಿಮ ಸಂಚಿಕೆಯೊಂದಿಗೆ ಕೊನೆಗೊಳ್ಳಲಿದೆ. 600 ಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರ್ಣಗೊಳಿಸಿರುವ ಈ ಧಾರಾವಾಹಿಯ ಅಂತ್ಯದಲ್ಲಿ ಆಘಾತಕಾರಿ ಟ್ವಿಸ್ಟ್ ಇರುವುದಾಗಿ ಹೇಳಲಾಗಿದೆ. ಕಾವೇರಿಯ ಆತ್ಮಹತ್ಯಾ ಪ್ರಯತ್ನ ಮತ್ತು ಅದರ ಪರಿಣಾಮಗಳು ಕಥಾವಸ್ತುವಿನ ಮುಖ್ಯ ಅಂಶಗಳಾಗಿವೆ .

‘ಲಕ್ಷ್ಮೀ ಬಾರಮ್ಮ’ ಕೊನೆಯ ಎಪಿಸೋಡ್​; ಆಕ್ರೋಶ ಹೊರ ಹಾಕುತ್ತಲೇ ಬೆಟ್ಟದಿಂದ ಬಿದ್ದ ಕಾವೇರಿ
ಕಾವೇರಿ
ರಾಜೇಶ್ ದುಗ್ಗುಮನೆ
|

Updated on: Apr 10, 2025 | 2:41 PM

Share

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇದ್ದ ‘ಲಕ್ಷ್ಮೀ ಬಾರಮ್ಮ’ (Lakshmi Baramma) ಧಾರಾವಾಹಿ ಏಪ್ರಿಲ್ 11ರಂದು ತನ್ನ ಕೊನೆಯ ಎಪಿಸೋಡ್​ನ ಪ್ರಸಾರ ಮಾಡಲಿದೆ. ಈ ಧಾರಾವಾಹಿ ಈವರೆಗೆ ಬರೋಬ್ಬರಿ 600ಕ್ಕೂ ಅಧಿಕ ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ ಅನ್ನೋದು ವಿಶೇಷ. ಈ ಧಾರಾವಾಹಿ ಯಾವ ರೀತಿಯಲ್ಲಿ ಕೊನೆಯಾಗಲಿದೆ ಎನ್ನುವ ಕುತೂಹಲ ಮೂಡಿದೆ. ಈ ಕುತೂಹಲ ಹೆಚ್ಚಿಸುವಂಥ ಪ್ರೋಮೋನ ರಿಲೀಸ್ ಮಾಡಲಾಗಿದೆ. ಇದರಲ್ಲಿ ಒಂದು ಶಾಕಿಂಗ್ ಟ್ವಿಸ್ಟ್​ನ ಕೊಡಲಾಗಿದೆ.

ಕಥಾ ನಾಯಕ ವೈಷ್ಣವ್​ ಮೇಲೆ ಆತನ ತಾಯಿ ಕಾವೇರಿಗೆ ಎಲ್ಲಿಲ್ಲದ ಪ್ರೀತಿ. ಮಗನನ್ನು ಬಹಳ ಮುದ್ದಿನಿಂದ ಬೆಳೆಸಿದ್ದಳು. ಮಗ ತನ್ನ ಕೈತಪ್ಪಿ ಹೋಗಬಾರದು ಎನ್ನುವ ಕಾರಣಕ್ಕೆ ಮುಗ್ಧಳಾಗಿದ್ದ ಲಕ್ಷ್ಮೀಗೆ ವಿವಾಹ ಮಾಡಿಕೊಟ್ಟಿದ್ದಳು. ಆದರೆ, ಅಲ್ಲಾಗಿದ್ದೇ ಬೇರೆ. ವೈಷ್ಣವ್ ದಿನ ಕಳೆದಂತೆ ಲಕ್ಷ್ಮೀ ಪ್ರೇಮ ಪಾಶಕ್ಕೆ ಸಿಲುಕುತ್ತಾ ಹೋದನು. ಇದರಿಂದ ಕಾವೇರಿ ಸಾಕಷ್ಟು ಚಿಂತೆಗೆ ಒಳಗಾಗಿದ್ದಾಳೆ. ಮುಂದೇನು ಎನ್ನುವ ಪ್ರಶ್ನೆ ಅವಳನ್ನು ಕಾಡುತ್ತಾ ಇತ್ತು. ಈಗ ಅವಳಿಗೆ ಆತ್ಮಹತ್ಯೆ ಒಂದೇ ಉಳಿದಿರುವ ದಾರಿ ಎಂಬಂತಾಗಿದೆ.

ಇದನ್ನೂ ಓದಿ
Image
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ
Image
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
Image
‘ಕರ್ನಾಟಕ ಜನತೆಗಾಗಿ ಸಿನಿಮಾ ಮಾಡೋದು, ಪ್ಯಾನ್​ ಇಂಡಿಯಾಗಾಗಿ ಅಲ್ಲ’; ದರ್ಶನ್
Image
ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್

‘ನಾನು ಏನು ನಡೆಯಬಾರದು ಎಂದುಕೊಂಡಿದ್ದೆನೋ ಅದೇ ನಡೆದು ಹೋಯಿತು. ನನ್ನ ಮಗ ನನ್ನ ಕೈಯಿಂದ ಬಿಟ್ಟು ಹೋಗಬಾರದು ಎಂಬ ಕಾರಣಕ್ಕೆ ನಿನ್ನ ನನ್ನ ಸೊಸೆ ಮಾಡಿಕೊಂಡೆ. ಆದರೆ, ನೀನೇನು ಮಾಡಿದೆ, ನನ್ನ ಮಗನ ಕಿತ್ತುಕೊಂಡೆ. ಪುಟ್ಟ ನಿನ್ನ ಅಮ್ಮ ಯಾವಾಗಲೂ ನಿನ್ನ ಪ್ರೀತುಸತ್ತಾ ಇದ್ದಳು, ಪ್ರೀತಿಸ್ತಾನೆ ಇರ್ತಾಳೆ’ ಎಂದು ಹೇಳುವಾಗ ಮೇಲಿದ್ದ ಎಲ್ಲರೂ ಪ್ರಪಾತದ ಕಡೆ ಹೋಗದಂತೆ ಮನವಿ ಮಾಡಿಕೊಳ್ಳುತ್ತಾ ಇದ್ದರು. ಆದರೆ, ಕಾವೇರಿ ಮಾತು ಕೇಳಲೇ ಇಲ್ಲ.

ಇದನ್ನೂ ಓದಿ: ‘ಲಕ್ಷ್ಮೀ ಬಾರಮ್ಮ’ ಅಂತ್ಯದ ಬಗ್ಗೆ ಅಧಿಕೃತ ಘೋಷಣೆ; ಹೊಸ ಧಾರಾವಾಹಿ ‘ಮುದ್ದು ಸೊಸೆ’ ಯಾವಾಗಿನಿಂದ?

ಈ ವೇಳೆ ಕಾವೇರಿ ಕಾಲಿಗೆ ಕಲ್ಲೊಂದು ತಾಗಿದೆ. ಆಗ ಅವಳು ಬೆಟ್ಟದಿಂದ ಉರುಳುರುಳಿ ಹೋಗಿದ್ದಾಳೆ. ಬಹುತೇಕ ಧಾರಾವಾಹಿಗಳ ಅಂತ್ಯದಲ್ಲಿ ವಿಲನ್​ಗಳಿಗೆ ಜ್ಞಾನೋದಯ ಮಾಡುವ ಮೂಲಕ ಧಾರಾವಾಹಿಯನ್ನು ಕೊನೆ ಮಾಡಲಾಗುತ್ತದೆ. ಆದರೆ, ‘ಲಕ್ಷ್ಮೀ ಬಾರಮ್ಮ’ದಲ್ಲಿ ವಿಲನ್ ಸಾಯುವ ಮೂಲಕ ಧಾರಾವಾಹಿ ಕೊನೆ ಆಗುತ್ತದೆಯೇ ಎನ್ನುವ ಪ್ರಶ್ನೆ ಕೆಲವರಿಗೆ ಮೂಡಿದೆ. ಇನ್ನೂ ಕೆಲವರಿಗೆ ಅವರನ್ನು ಆಸ್ಪತ್ರೆಗೆ ಸೇರಿಸಿ, ಮನ ಪರಿವರ್ತನೆ ಮಾಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎಲ್ಲದಕ್ಕೂ ಶುಕ್ರವಾರದ (ಏಪ್ರಿಲ್ 11) ಎಪಿಸೋಡ್​ನಲ್ಲಿ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು