AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಯಾರಿಗೂ ನಿಯತ್ತಾಗಿಲ್ಲ’: ಎಲ್ಲರ ಎದುರು ಹಂಸಾಗೆ ಚುಚ್ಚು ಮಾತುಗಳಿಂದ ನಿಂದಿಸಿದ ಜಗದೀಶ್​

ಕ್ಯಾಪ್ಟನ್​ ಹಂಸಾ ಮೇಲೆ ಹಲವು ಜವಾಬ್ದಾರಿಗಳಿವೆ. ಆದರೆ ಅವರ ಕೆಲಸವನ್ನು ಕೆಡಿಸಲು ಜಗದೀಶ್​ ಪ್ರಯತ್ನಿಸುತ್ತಿದ್ದಾರೆ. ಬೇಕೆಂತಲೇ ಕೆಣಕುತ್ತಿದ್ದಾರೆ. ‘ಮಾತ್ರೆ ಬೇಕು, ಔಷದಿ ಬೇಕು, ಬೇರೆ ನೀರು ಬೇಕು. ಬಿಗ್ ಬಾಸ್​ಗೆ ಹೇಳಿ ತರಿಸಿಕೊಡಿ’ ಎಂದು ಇಲ್ಲಸಲ್ಲದ ಬೇಡಿಕೆಗಳನ್ನು ಇಡುತ್ತಿದ್ದಾರೆ. ಇದರಿಂದಾಗಿ ಹಂಸಾ ಅವರಿಗೆ ಬಿಗ್​ ಬಾಸ್​ನಲ್ಲಿ ಆಟವಾಡಲು ಅಡ್ಡಿ ಆಗುತ್ತಿದೆ.

‘ನೀನು ಯಾರಿಗೂ ನಿಯತ್ತಾಗಿಲ್ಲ’: ಎಲ್ಲರ ಎದುರು ಹಂಸಾಗೆ ಚುಚ್ಚು ಮಾತುಗಳಿಂದ ನಿಂದಿಸಿದ ಜಗದೀಶ್​
ಜಗದೀಶ್​, ಹಂಸಾ
ಮದನ್​ ಕುಮಾರ್​
|

Updated on: Oct 08, 2024 | 3:42 PM

Share

ಹಂಸಾ ಮತ್ತು ಜಗದೀಶ್​ ನಡುವೆ ದ್ವೇಷ ಹೆಚ್ಚಾಗುತ್ತಿದೆ. ಹಂಸಾ ಕ್ಯಾಪ್ಟನ್​ ಆಗಿದ್ದನ್ನು ಜಗದೀಶ್​ ಸಹಿಸುತ್ತಿಲ್ಲ. ಹಾಗಾಗಿ ಪ್ರತಿ ಹಂತದಲ್ಲೂ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೇ, ಚುಚ್ಚು ಮಾತುಗಳಿಂದ ಹಂಸಾ ಅವರನ್ನು ಜಗದೀಶ್​ ನಿಂದಿಸುತ್ತಿದ್ದಾರೆ. ತಂತ್ರಗಾರಿಕೆ ಮಾಡಿ ಕ್ಯಾಪ್ಟನ್​ ಆಗಿದ್ದರಿಂದ ಹಂಸಾ ಕೂಡ ಯಾವುದೇ ತಿರುಗೇಟು ನೀಡಲಾಗದೇ ಸುಮ್ಮನಾಗಿದ್ದಾರೆ. ಬೇರೆ ಎಲ್ಲರಿಗಿಂತಲೂ ಹೆಚ್ಚಾಗಿ ಜಗದೀಶ್​ ಅವರು ಹಂಸಾ ಮೇಲೆ ಮಾತಿನ ದಾಳಿ ಮಾಡುತ್ತಿದ್ದಾರೆ. ಇತ್ತೀಚಿನ ಎಪಿಸೋಡ್​ನಲ್ಲಿ ಕಟು ಮಾತುಗಳಿಂದ ಅವರು ನಿಂದಿಸಿದ್ದಾರೆ.

‘ತಂತ್ರಗಾರಿಕೆ ಮಾಡಿಕೊಂಡು ಕ್ಯಾಪ್ಟನ್​ ಆಗಿದ್ದು ನನಗೂ ಶೋಭೆ ತಂದಿಲ್ಲ. ಆದರೆ ನಾನು ಅದನ್ನು ಈಗ ಬದಲಾಯಿಸುವ ಸಾಧ್ಯವಿಲ್ಲ’ ಎಂದು ಹೇಳುತ್ತಾ ಹಂಸಾ ಅವರು ಅಳಲು ಆರಂಭಿಸಿದರು. ಆಗ ಜಗದೀಶ್​ ಮಧ್ಯ ಬಂದು ಮಾತಿನ ದಾಳಿ ಮಾಡಿದರು. ‘ಡ್ರಾಮಾ ಮಾಡುವುದು ನಿಮ್ಮ ಗುಣ. ಕಣ್ಣೀರು ಯಾಕೆ ಹಾಕುತ್ತೀರಿ? ನೇರವಾಗಿ ನಡೆದುಕೊಳ್ಳಿ. ಯಾರಿಗೂ ನೀವು ನಿಯತ್ತಾಗಿಲ್ಲ. ನಿಮಗೆ ಸಹಾಯ ಮಾಡಿದವರಿಗೂ ನೀವು ನಿಯತ್ತಾಗಿಲ್ಲ. ನಮ್ಮ ಜೊತೆ ಅದನ್ನು ನೀವು ಸಾಬೀತು ಮಾಡಿದ್ದೀರಿ’ ಎಂದು ಜಗದೀಶ್​ ಹೀಯಾಳಿಸಿದರು.

‘ನಿಮ್ಮ ಸುಳ್ಳಿನ ಕಣ್ಣೀರು ಯಾರಿಗೆ ಬೇಕಾಗಿದೆ? ಬೆನ್ನಿಗೆ ಚೂರಿ ಹಾಕುವುದಕ್ಕೆ ಇನ್ನೊಂದು ಹೆಸರು ನೀವು. ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಕ್ಯಾಪ್ಟನ್​ ಆದವಳು. ನಿಮ್ಮನೇ ನೀವು ನಂಬುವುದಿಲ್ಲ. ನಿಮ್ಮ ಯೋಗ್ಯತೆಗೆ ಯಾರೂ ಬೆಂಬಲ ನೀಡುವುದಿಲ್ಲ. ನಾನು ಬೆಂಬಲಿಸಿದೆ. ಆ ಯೋಗ್ಯತೆಯನ್ನು ನೀವು ಉಳಿಸಿಕೊಳ್ಳಬೇಕಿತ್ತು’ ಎಂದಿದ್ದಾರೆ ಜಗದೀಶ್​.

ಇದನ್ನೂ ಓದಿ: ‘ನೀನು ಯಾವನೋ’ ಎಂದು ಕೂಗಿದ ಹಂಸಾ; ಇರುವ ಗೌರವವನ್ನೂ ಕಳೆದುಕೊಂಡ ಜಗದೀಶ್

‘ನೀವು ಭವ್ಯ ಬಳಿ ಸಲಹೆ ಪಡೆಯುತ್ತಿದ್ದೀರಿ. ಸಾಮರ್ಥ್ಯವೇ ಇಲ್ಲದೇ ನೀವು ಕ್ಯಾಪ್ಟನ್​ ಆಗಿದ್ದೀರಿ. ಬೇರೆಯವರ ಮಾತು ಕೇಳಿಬೇಡಿ. ನಿಮ್ಮ ಬುದ್ಧಿ ಎಷ್ಟಿದೆಯೋ ಅಷ್ಟು ಮಾತನಾಡಿ. ಬೇರೆಯವರ ವಿಚಾರ ನಮಗೆ ಬೇಕಾಗಿಲ್ಲ’ ಎಂದು ಜಗದೀಶ್​ ಕೂಗಾಡಿದ್ದಾರೆ. ತಮ್ಮನ್ನು ಸ್ವರ್ಗಕ್ಕೆ ಕರೆದುಕೊಂಡಿಲ್ಲ ಎಂದು ಗೋಲ್ಡ್​ ಸುರೇಶ್ ಕೂಡ ಹಂಸಾ ವಿರುದ್ಧ ತಿರುಗಿಬಿದ್ದಿದ್ದಾರೆ. ‘ಕ್ಯಾಪ್ಟನ್ ಆಗಲು ಅರ್ಹತೆ ಇಲ್ಲ. ಅವರು ಗೋಮುಖ ವ್ಯಾಘ್ರ’ ಎಂದು ಸುರೇಶ್​ ಹೇಳಿದ್ದಾರೆ. ಜಗದೀಶ್​ ಅವರನ್ನು ಹಂಸಾ ವಿರುದ್ಧ ಎತ್ತಿಕಟ್ಟುವ ಕೆಲಸವನ್ನೂ ಸುರೇಶ್​ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ